ಬಜೆಟ್ 2025 ಕನ್ನಡ ಚಿತ್ರರಂಗ ಕ್ಷೇತ್ರಕ್ಕೆ ಎಷ್ಟು ಅನುದಾನ ? ಇಲ್ಲಿದೆ ಮಾಹಿತಿ.

ಸಿಎಂ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಬಜೆಟ್ ಮಂಡನೆ ಮಾಡಿದರು. ಹಲವು ಕ್ಷೇತ್ರಗಳು ಹಲವು ಯೋಜನೆಗಳು, ಅನುದಾನಗಳನ್ನು ನೀಡಿದರು. ಅದರಂತೆ ಕನ್ನಡ ಚಿತ್ರರಂಗಕ್ಕೂ ಸಹ ಕೆಲ ಅನುದಾನಗಳನ್ನು ನೀಡಿದ್ದಾರೆ. ಈ ಬಜೆಟ್ನಲ್ಲಿ ಚಿತ್ರರಂಗಕ್ಕೆ ಸಿಕ್ಕಿದ್ದೇನು?

ಮೈಸೂರಿನಲ್ಲಿ ಫಿಲಂ ಸಿಟಿ
ಕನ್ನಡ ಚಿತ್ರರಂಗದ ದಶಕಗಳ ಬೇಡಿಕೆಯಾದ ಫಿಲಂ ಸಿಟಿ ನಿರ್ಮಾಣಕ್ಕೆ 500 ಕೋಟಿ ರೂಪಾಯಿ ಹಣವನ್ನು ಮೀಸಲಿಡಲಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫಿಲಂ ಸಿಟಿ ನಿರ್ಮಾಣಕ್ಕೆ ಮೈಸೂರಿನಲ್ಲಿ 150 ಎಕರೆ ಜಾಗವನ್ನು ಕಾಯ್ದಿರಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಕನ್ನಡ ಸಿನಿಮಾಗಳಿಗೆ OTT ವೇದಿಕೆ
ಕನ್ನಡ ಸಿನಿಮಾಗಳನ್ನು ಯಾವ ಒಟಿಟಿಗಳೂ ಖರೀದಿಸುತ್ತಿಲ್ಲ ಎಂಬ ದೂರು ಕಳೆದ ಕೆಲ ವರ್ಷಗಳಿಂದ ಕೇಳಿ ಬರುತ್ತಿದೆ. ಹಾಗಾಗಿ ಈಗ ಸರ್ಕಾರವೇ ಮುಂದಾಗಿ ಒಟಿಟಿ ವೇದಿಕೆ ಸೃಷ್ಟಿಸಲು ಮುಂದಾಗಿದ್ದು, ಇಲ್ಲಿ ಕನ್ನಡ ಸಿನಿಮಾಗಳನ್ನು ಪ್ರದರ್ಶನ ಮಾಡಲಿದೆ. ಕೇರಳದಲ್ಲಿ ಈಗಾಗಲೇ ಈ ಮಾದರಿ ಚಾಲ್ತಿಯಲ್ಲಿದೆ.

ಸಿನಿಮಾ ಕ್ಷೇತ್ರ ಕೈಗಾರಿಕಾ ನೀತಿ ಅಡಿ ತರಲು ನಿರ್ಧಾರ
ಸಿನಿಮಾ ಉದ್ಯಮವನ್ನು ಸಿನಿಮಾ ಕೈಗಾರಿಕೆ ಎಂದು ಘೋಷಿಸಲಾಗಿದೆ. ಸಿನಿಮಾ ರಂಗವನ್ನು ಕೈಗಾರಿಕೆಯನ್ನಾಗಿ ಗುರುತಿಸುವ ಮೂಲಕ ಕೈಗಾರಿಕಾ ನೀತಿಯ ಅಡಿ ಸರ್ಕಾರ ನೀಡುವ ಸವಲತ್ತುಗಳು, ನಿಯಮಗಳು ಸಿನಿಮಾ ರಂಗಕ್ಕೂ ಅನ್ವಯ ಆಗಲಿದೆ.


ಮಲ್ಟಿಫ್ಲೆಕ್ಸ್ಗಳಲ್ಲಿ ಏಕರೂಪದ ದರ
ಕರ್ನಾಟಕದಲ್ಲಿ ಮಲ್ಟಿಪ್ಲೆಕ್ಸ್ಗಳು ಬಹಳ ದುಬಾರಿ ಬೆಲೆಗೆ ಟಿಕೆಟ್ ಮಾರಾಟ ಮಾಡುತ್ತಿವೆ. ಮಲ್ಟಿಪ್ಲೆಕ್ಸ್ಗಳು ದುಬಾರಿ ಬೆಲೆಗೆ ಟಿಕೆಟ್ ಮಾರಾಟ ಮಾಡುತ್ತಿರುವುದರ ವಿರುದ್ಧ ಕ್ರಮಕ್ಕೆ ಬಹಳ ದಿನಗಳಿಂದಲೂ ಒತ್ತಾಯ ಕೇಳಿ ಬಂದಿತ್ತು. ಇದೀಗ ಸರ್ಕಾರವು, ಮಲ್ಟಿಪ್ಲೆಕ್ಸ್ಗಳ ಟಿಕೆಟ್ ದರವನ್ನು 200 ರೂಪಾಯಿಗೆ ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.

ಚಲನಚಿತ್ರ ಅಕಾಡೆಮಿ ಅಭಿವೃದ್ಧಿ
ಬೆಂಗಳೂರಿನ ನಂದಿನಿ ಲೇಔಟ್ನಲ್ಲಿರುವ ಚಲನಚಿತ್ರ ಅಕಾಡೆಮಿಯನ್ನು ಅಭಿವೃದ್ಧಿಪಡಿಸುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಖಾಸಗಿ ಸಹಭಾಗಿತ್ವದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಭಿವೃದ್ಧಿ ಮಾಡಲಾಗುತ್ತದೆಯಂತೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!