ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ 4,09,549 ಕೋಟಿ ದಾಖಲೆಯ ಮೊತ್ತದ ಆಯವ್ಯಯ ಮಂಡನೆ

ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2025-26ನೇ ಸಾಲಿನ ಬಜೆಟ್ ಮಂಡಿ ಸಿದ್ದು, ಗ್ಯಾರಂಟಿ ಯೋಜನೆಗಳಿಗೆ ಬರೋಬ್ಬರಿ 51 ಸಾವಿರ ಕೋಟಿ ರೂ. ನೀಡುವುದರ ಜೊತೆಗೆ ಹತ್ತು ಹಲವು ಹೊಸ ಘೋಷಣೆಗಳನ್ನೂ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ 4,09,549 ಕೋಟಿ ರೂ. ಬೃಹತ್ ಗಾತ್ರದ ಬಜೆಟ್ ಮಂಡಿಸಿದ ಅವರು ಇದರಲ್ಲಿ 19,262 ಕೋಟಿ ರೂ. ರಾಜಸ್ವ ಕೊರತೆಯನ್ನು ಉಲ್ಲೇಖಿಸಿದ್ದಾರೆ. 1994 ರಲ್ಲಿ ಜನತಾ ದಳದ ಆಡಳಿತದಲ್ಲಿ ಹಣಕಾಸು ಸಚಿವ ರಾಗಿ ಮೊದಲ ಬಾರಿ ಬಜೆಟ್ ಮಂಡಿ ಸಿದ್ದ ಸಿದ್ದರಾಮಯ್ಯ ಅವರು. ಇಂದು ತಮ್ಮ 16ನೇ ಬಜೆಟ್ ಅನ್ನು ಮಂಡಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರು.
ಎರಡನೇ ಅವಧಿಗೆ ರಾಜ್ಯದ ಮುಖ್ಯ ಮಂತ್ರಿಯಾಗಿ ಇದು ಅವರ ಮೂರನೇ ಬಜೆಟ್ ಮತ್ತು ಸತತ ಎರಡನೇ ಆದಾಯ ಕೊರತೆ ಬಜೆಟ್ ಆಗಿದೆ. ಈ ಬಾರಿಯೂ ಪಂಚ ಗ್ಯಾರಂಟಿಗೆ 51,034 ಕೋಟಿ ರೂ. ಅನುದಾನ ನೀಡಲಾಗಿದೆ. ಹೀಗಾಗಿ ಇನ್ನೂ ಹೆಚ್ಚಿನ ಸಾಲ ದೊಂದಿಗೆ 4,09,549 ಕೋಟಿ ರೂ. ಮೊತ್ತದ ಆಯವ್ಯಯ ಮಂಡಿಸಿದ್ದಾರೆ. ಕರ್ನಾಟಕವು ಭಾರತದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ. ಇದು ರಾಷ್ಟ್ರೀಯ ಒಟ್ಟು ದೇಶೀಯ ಉತ್ಪನ್ನಕ್ಕೆ (ಜಿಡಿಪಿ) ಶೇ. 8.4ರಷ್ಟು ಕೊಡುಗೆ ನೀಡುತ್ತದೆ. ಇದು 2024-25ನೇ ಸಾಲಿನಲ್ಲಿ ತನ್ನ ಪ್ರಭಾವಶಾಲಿ ಬೆಳವಣಿಗೆಯ ಪಥವನ್ನು ಮುಂದುವರೆಸಿದೆ ಮತ್ತು ಶೇ. 7.4 ರಷ್ಟು ಜಿಎಸ್ಡಿಪಿ ಬೆಳವಣಿಗೆಯ ದರವನ್ನು ಸಾಧಿಸಲು ಸಜ್ಜಾಗಿದೆ. ಇದು ರಾಷ್ಟ್ರೀಯ ಬೆಳವಣಿಗೆಯ ದರ ಶೇ. 6.4 ಕ್ಕಿಂತ ಹೆಚ್ಚಾಗಿದೆ ಎಂದು ಸಿಎಂ ಒತ್ತಿ ಹೇಳಿದರು. ರಾಜ್ಯ ಸರ್ಕಾರದ ಗ್ಯಾರಂಟಿಗಳು ಅಭಿವೃದ್ಧಿ ಯನ್ನು ತಿಂದು ಹಾಕುತ್ತಿವೆ ಎಂದು ದೂರುತ್ತಿದ್ದ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳ ಶಾಸಕರನ್ನು ಸಮಾಧಾನಪಡಿಸುವ ಯತ್ನದಲ್ಲಿ ಸಿಎಂ ಸಿದ್ದರಾಮಯ್ಯ ಅವರು 3,000 ಕೋಟಿ ರೂ.ಗಳ
ಸಿಎಂ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದಾರೆ. ಈ ಯೋಜನೆಯು ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಣ್ಣ ನೀರಾವರಿ, ರಸ್ತೆಗಳು ಮತ್ತು ನಗರ ಮೂಲಸೌಕರ್ಯಗಳ ಮೇಲೆ ಕೇಂದ್ರೀಕರಿಸುವ ಮೂಲಕ ರಾಜ್ಯಾದ್ಯಂತ ಸಮತೋಲಿತ ಅಭಿವೃದ್ಧಿ ಯನ್ನು ಖಚಿತಪಡಿಸುತ್ತದೆ. ಇನ್ನು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ಘೋಷಿಸಿದ ಸಿಎಂ, ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗಾಗಿ ದೇವನಹಳ್ಳಿಯವರೆಗೆ ಮೆಟ್ರೋ ರೈಲು ಯೋಜನೆಯ ವಿಸ್ತರಣೆ ಸೇರಿದಂತೆ ಬಂಪರ್ ಕೊಡುಗೆ ನೀಡಿದ್ದಾರೆ.

ಈ ಬಜೆಟ್ನಲ್ಲಿ ಶಿಕ್ಷಣ ಇಲಾಖೆಗೆ 45,286 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಹಾಗೆಯೇ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,955 ಕೋಟಿ, ಇಂಧನ ಇಲಾಖೆಗೆ 26,896 ಕೋಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ಗೆ 26,735 ಕೋಟಿ, ನೀರಾವರಿ ಇಲಾಖೆಗೆ 22,181 ಕೋಟಿ, ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 21,405 ಕೋಟಿ ಹಾಗೂ ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 20,625 ಕೋಟಿ ಹಣ ಮೀಸಲಿಡಲಾಗಿದೆ.
ಹೀಗೆ ಎಲ್ಲ ಇಲಾಖೆಗಳಿಗೂ ಅನುಕೂಲಕ್ಕೆ ಅನುಗುಣವಾಗಿ ಬಜೆಟ್ ಹಂಚಿಕೆ ಮಾಡಲಾಗಿದೆ. ಹೊಸ ಯೋಜನೆ, ನೂತನ ಘೋಷಣೆಗಳೊಂದಿಗೆ ಸರ್ಕಾರ ಸಮಗ್ರ ರಾಜ್ಯದ ಅಭಿವೃದ್ಧಿಯ ಹೊಂದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಹೆಚ್ಚಿದ ಸಾಲದ ಹೊರೆ: 2025-26ನೇ ಸಾಲಿನಲ್ಲಿ ಅಂದಾಜು 1,16,000 ಕೋಟಿ ರೂ. ಸಾಲದ ಮೊರೆ ಹೋಗಲು ಸಿಎಂ ಸಿದ್ದರಾಮಯ್ಯ ತೀರ್ಮಾನಿ ಸಿದ್ದಾರೆ. 2024-25 ಸಾಲಿನಲ್ಲಿ 1,05,246 ಕೋ ರೂ. ಸಾಲದ ಮೊರೆ ಹೋಗಲಾಗಿತ್ತು. ಆ ಮೂಲಕ ಈ ಬಾರಿ 10,754 ಕೋಟಿ ರೂ. ಹೆಚ್ಚುವರಿ ಸಾಲದ ಮೊರೆ ಹೋಗಲಾಗಿದೆ. ಈ 1,16,000 ಕೋಟಿ ರೂ. ಸಾಲದ ಪೈಕಿ ಕೇಂದ್ರ ಸರ್ಕಾರದಿಂದ 7,000 ಕೋಟಿ ರೂ., ಬಹಿರಂಗ ಮಾರುಕಟ್ಟೆಯಿಂದ 1,05,000 ಕೋಟಿ ಹಾಗೂ ಎಲ್ಐಸಿ, ಎನ್ಎಸ್ ಎಸ್ಎಫ್, ಸಿಡಿಸಿ ಮತ್ತು ಆರ್ಐಡಿಎಫ್ ಗಳಿಂದ 4,000 ಕೋಟಿ ರೂ.ಸಾಲ ಪಡೆಯಲು ಅಂದಾಜಿ ಸಲಾಗಿದೆ. ಆ ಮೂಲಕ 2025-26ರ ಅಂತ್ಯಕ್ಕೆ ರಾಜ್ಯದ ಒಟ್ಟು ಹೊಣೆಗಾರಿಕೆಗಳು 7,64,655 ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದೆ.

ಅಂತಾರಾಷ್ಟ್ರೀಯ ಮಾದರಿ ಚಿತ್ರನಗರಿ ಸ್ಥಾಪನೆಗೆ 500 ಕೋಟಿ ರೂ. ಮೀಸಲು
• ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಮೂರು ಕೋಟಿ ರೂ.
• ಪ್ರೊ ನಂಜುಂಡಸ್ವಾಮಿ ಸಂಶೋಧನ ಪೀಠ ಸ್ಥಾಪನೆ.
• ರೇಷ್ಮೆಗೂಡು ಮಾರುಕಟ್ಟೆ ಸ್ಥಾಪನೆ
• 100 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್ ಮಾದರಿ ಆಸ್ಪತ್ರೆ ನಿರ್ಮಾಣ
• ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆ
• ಬನ್ನಿಮಂಟಪದಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಬಸ್ ನಿಲ್ದಾಣ ಸ್ಥಾಪನೆ
• ರಾಜ್ಯ ಮಟ್ಟದ ವಸ್ತುಸಂಗ್ರಹಾಲಯ
• ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ ಭೂ ಸ್ವಾಧೀನಕ್ಕಾಗಿ 319 ಕೋಟಿ ರೂ
• ಕ್ರೀಡಾ, ವಿಜ್ಞಾನ ಕೇಂದ್ರ ಸ್ಥಾಪನೆಗೆ 7 ಕೋಟಿ ರೂ.
• ಕುಸ್ತಿ, ವಾಲಿಬಾಲ್, ಖೋ-ಖೋ ಅಕಾಡೆಮಿ ಸ್ಥಾಪನೆಗೆ 2 ಕೋಟಿ ರೂ. ಮೀಸಲು
• ಪ್ರವಾಸಿಗರಿಗೆ ಪೌಷ್ಟಿಕ ಮೀನು ಖಾದ್ಯ ಒದಗಿಸಲು ಹೈಟೆಕ್ ಮತ್ತ್ವದರ್ಶಿನಿ ಆರಂಭ
• ಮೈಸೂರು ಜಿಲ್ಲೆಯ ತಗಡೂರು ಸಮುದಾಯ ಆರೋಗ್ಯ ಕೇಂದ್ರ 100 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ

• ಎಂಡೋಕ್ರೈನಾಲಜಿ ಕೇಂದ್ರ ಸ್ಥಾಪನೆ.

• ಈ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳ ಉನ್ನತೀಕರಣಕ್ಕೆ 5 ಕೋಟಿ ರೂ
• ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳ ಐದು ವಸತಿ ಶಾಲೆ ಮೇಲ್ದರ್ಜೆಗೆ
• ವರುಣದಲ್ಲಿ ಬಹು ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ 60 ಕೋಟಿ ರೂ. ಮೀಸಲು
• ಮೈಸೂರು ವಿವಿಯಲ್ಲಿ ತಾಳೆಗರಿ ಹಸ್ತಪ್ರತಿ ಡಿಜಿಟಲೀಕರಣಕ್ಕೆ 1 ಕೋಟಿ ರೂ.
• ಮೈಸೂರಿನ ರಂಗಾಯಣಕ್ಕೆ 2 ಕೋಟಿ ರೂ. ಅನುದಾನ
• ಟಿ. ನರಸೀಪುರ ತಾಲೂಕು ಕ್ರೀಡಾಂಗಣಕ್ಕೆ ಆರು ಕೋಟಿ ರೂ.
• ಮೈಸೂರಿನಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಸ್ಥಾಪನೆ
• ಕಬಿನಿ ನದಿಗೆ ಅಡ್ಡಲಾಗಿ ಹಾಗೂ ಕಪ್ಪಡಿ ಗ್ರಾಮದ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡುವುದಾಗಿ ಘೋಷಿಸಿದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು