‘ನಟಿ ಸೌಂದರ್ಯಾ ಸಾವು ಆಕಸ್ಮಿಕವಲ್ಲ; 21 ವರ್ಷಗಳ ಬಳಿಕ ದಾಖಲಾಯ್ತು ದೂರು.

ನಟಿ ಸೌಂದರ್ಯಾ ಅವರು 2004ರ ಏಪ್ರಿಲ್ 17ರಂದು ನಿಧನ ಹೊಂದಿದರು. ಅವರು ಏರಿದ್ದ ಖಾಸಗಿ ವಿಮಾನ ಟೇಕಾಫ್ ಆದ ಕೆಲವೇ ಗಂಟೆಗಳಲ್ಲಿ ಹೊತ್ತಿ ಉರಿಯಿತು. ಅವರ ಜೊತೆ ಸಹೋದರ ಅಮರನಾಥ್ ಕೂಡ ನಿಧನ ಹೊಂದಿದರು. ಈ ಘಟನೆ ನಡೆದು 21 ವರ್ಷಗಳು ಕಳೆದಿವೆ. ಈಗ ಟಾಲಿವುಡ್ನ ಖ್ಯಾತ ನಟ, ನಿರ್ಮಾಪಕ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ಇವರ ಕೈವಾಡ ಇದೆ ಎಂದು ಆರೋಪಿಸಲಾಗಿದೆ. ಈ ವಿಚಾರ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ.


ಕೌಟುಂಬಿಕ ಸಮಸ್ಯೆ ಕಾರಣದಿಂದ ಮೋನ್ ಬಾಬು ಸಾಕಷ್ಟು ಸಮಸ್ಯೆ ಎದುರಿಸಿದ್ದರು. ಈಗ ಅವರು ಸೌಂದರ್ಯಾ ಸಾವಿನ ಪ್ರಕರಣದಲ್ಲಿ ಸಮಸ್ಯೆ ಎದುರಿಸಿದ್ದಾರೆ. ಆಂಧ್ರ ಪ್ರದೇಶದ ಖಮ್ಮಾಮ್ ಜಿಲ್ಲೆಯಲ್ಲಿ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ಮೋಹನ್ ಬಾಬು ಕೈವಾಡ ಇದೆ ಎಂದು ದೂರಲಾಗಿದೆ. ಚಿಟ್ಟಿಮಲ್ಲು ಎಂಬುವವರು ಈ ದೂರು ನೀಡಿದ್ದಾರೆ.‘ಸೌಂದರ್ಯಾ ಅವರದ್ದು ಆಕಸ್ಮಿಕ ಸಾವಲ್ಲ, ಇದೊಂದು ನಿಯೋಜಿತ ಕೊಲೆ. ಜಾಗದ ವಿಚಾರದಲ್ಲಿ ಈ ಕೊಲೆ ನಡೆದಿದೆ. ಸೌಂದರ್ಯಾ ಹಾಗೂ ಅವರ ಸಹೋದರ ಅಮರನಾಥ್ ಶಂಶಾಬಾದ್ನಲ್ಲಿರುವ ಆರು ಎಕರೆ ಜಾಗವನ್ನು ಹೊಂದಿದ್ದರು. ಇದನ್ನು ತಮಗೆ ಕೊಡುವಂತೆ ಮೋಹನ್ ಬಾಬು ಕೇಳುತ್ತಿದ್ದರು. ಇದನ್ನು ಮಾರಲು ಸೌಂದರ್ಯಾ ನಿರಾಕರಿಸಿದ್ದರು. ಇದರಿಂದ ಈ ಕೊಲೆ ನಡೆದಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.


ಸೌಂದರ್ಯಾ ಅವರು ಕನ್ನಡ ಸಿನಿಮಾಗಳನ್ನು ಮಾಡಿ ಗಮನ ಸೆಳೆದರು. ಅವರು ‘ಆಪ್ತಮಿತ್ರ’ ಚಿತ್ರದಲ್ಲಿ ಮಾಡಿದ ನಾಗವಲ್ಲಿ ಪಾತ್ರ ಯಾವಾಗಲೂ ನೆನಪಿನಲ್ಲಿ ಇರುವಂಥದ್ದು. ಅವರು ನಿಧನ ಹೊಂದುವಾಗ ಕೇವಲ 31 ವರ್ಷ ವಯಸ್ಸಾಗಿತ್ತು.


ಸೌಂದರ್ಯಾ ಅವರ ಸಾವಿನ ಬಳಿಕ ಈ ಜಾಗ ಮಾರುವಂತೆ ಅವರ ಕುಟುಂಬದವರಿಗೆ ಮೋಹನ್ ಬಾಬು ಒತ್ತಡ ಹೇರಿದ್ದಾರೆ ಎಂದು ದೂರನಲ್ಲಿ ತಿಳಿಸಲಾಗಿದೆ. ಆ ಬಳಿಕ ಮೋಹನ್ ಬಾಬು ಅವರು ಅಕ್ರಮವಾಗಿ ಈ ಜಾಗವನ್ನು ಪಡೆದುಕೊಂಡರು ಎನ್ನಲಾಗಿದೆ. ಸದ್ಯ ದೂರು ನೀಡಿದ ಚಿಟ್ಟಿಮಲ್ಲು ತಮಗೆ ಪೊಲೀಸ್ ರಕ್ಷಣೆ ಬೇಕು ಎಂದು ಕೋರಿದ್ದಾರೆ. ಅಲ್ಲದೆ ಈ ಜಾಗವನ್ನು ಸರ್ಕಾರದವರು ವಶಕ್ಕೆ ಪಡೆದು ಅಗತ್ಯ ಇರುವ ವೃದ್ಧಾಶ್ರಮದವರಿಗೆ ನೀಡುವಂತೆ ಕೋರಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!