‘ನಟಿ ಸೌಂದರ್ಯಾ ಸಾವು ಆಕಸ್ಮಿಕವಲ್ಲ; 21 ವರ್ಷಗಳ ಬಳಿಕ ದಾಖಲಾಯ್ತು ದೂರು.

ನಟಿ ಸೌಂದರ್ಯಾ ಅವರು 2004ರ ಏಪ್ರಿಲ್ 17ರಂದು ನಿಧನ ಹೊಂದಿದರು. ಅವರು ಏರಿದ್ದ ಖಾಸಗಿ ವಿಮಾನ ಟೇಕಾಫ್ ಆದ ಕೆಲವೇ ಗಂಟೆಗಳಲ್ಲಿ ಹೊತ್ತಿ ಉರಿಯಿತು. ಅವರ ಜೊತೆ ಸಹೋದರ ಅಮರನಾಥ್ ಕೂಡ ನಿಧನ ಹೊಂದಿದರು. ಈ ಘಟನೆ ನಡೆದು 21 ವರ್ಷಗಳು ಕಳೆದಿವೆ. ಈಗ ಟಾಲಿವುಡ್ನ ಖ್ಯಾತ ನಟ, ನಿರ್ಮಾಪಕ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ಇವರ ಕೈವಾಡ ಇದೆ ಎಂದು ಆರೋಪಿಸಲಾಗಿದೆ. ಈ ವಿಚಾರ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ.


ಕೌಟುಂಬಿಕ ಸಮಸ್ಯೆ ಕಾರಣದಿಂದ ಮೋನ್ ಬಾಬು ಸಾಕಷ್ಟು ಸಮಸ್ಯೆ ಎದುರಿಸಿದ್ದರು. ಈಗ ಅವರು ಸೌಂದರ್ಯಾ ಸಾವಿನ ಪ್ರಕರಣದಲ್ಲಿ ಸಮಸ್ಯೆ ಎದುರಿಸಿದ್ದಾರೆ. ಆಂಧ್ರ ಪ್ರದೇಶದ ಖಮ್ಮಾಮ್ ಜಿಲ್ಲೆಯಲ್ಲಿ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ಮೋಹನ್ ಬಾಬು ಕೈವಾಡ ಇದೆ ಎಂದು ದೂರಲಾಗಿದೆ. ಚಿಟ್ಟಿಮಲ್ಲು ಎಂಬುವವರು ಈ ದೂರು ನೀಡಿದ್ದಾರೆ.‘ಸೌಂದರ್ಯಾ ಅವರದ್ದು ಆಕಸ್ಮಿಕ ಸಾವಲ್ಲ, ಇದೊಂದು ನಿಯೋಜಿತ ಕೊಲೆ. ಜಾಗದ ವಿಚಾರದಲ್ಲಿ ಈ ಕೊಲೆ ನಡೆದಿದೆ. ಸೌಂದರ್ಯಾ ಹಾಗೂ ಅವರ ಸಹೋದರ ಅಮರನಾಥ್ ಶಂಶಾಬಾದ್ನಲ್ಲಿರುವ ಆರು ಎಕರೆ ಜಾಗವನ್ನು ಹೊಂದಿದ್ದರು. ಇದನ್ನು ತಮಗೆ ಕೊಡುವಂತೆ ಮೋಹನ್ ಬಾಬು ಕೇಳುತ್ತಿದ್ದರು. ಇದನ್ನು ಮಾರಲು ಸೌಂದರ್ಯಾ ನಿರಾಕರಿಸಿದ್ದರು. ಇದರಿಂದ ಈ ಕೊಲೆ ನಡೆದಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.


ಸೌಂದರ್ಯಾ ಅವರು ಕನ್ನಡ ಸಿನಿಮಾಗಳನ್ನು ಮಾಡಿ ಗಮನ ಸೆಳೆದರು. ಅವರು ‘ಆಪ್ತಮಿತ್ರ’ ಚಿತ್ರದಲ್ಲಿ ಮಾಡಿದ ನಾಗವಲ್ಲಿ ಪಾತ್ರ ಯಾವಾಗಲೂ ನೆನಪಿನಲ್ಲಿ ಇರುವಂಥದ್ದು. ಅವರು ನಿಧನ ಹೊಂದುವಾಗ ಕೇವಲ 31 ವರ್ಷ ವಯಸ್ಸಾಗಿತ್ತು.


ಸೌಂದರ್ಯಾ ಅವರ ಸಾವಿನ ಬಳಿಕ ಈ ಜಾಗ ಮಾರುವಂತೆ ಅವರ ಕುಟುಂಬದವರಿಗೆ ಮೋಹನ್ ಬಾಬು ಒತ್ತಡ ಹೇರಿದ್ದಾರೆ ಎಂದು ದೂರನಲ್ಲಿ ತಿಳಿಸಲಾಗಿದೆ. ಆ ಬಳಿಕ ಮೋಹನ್ ಬಾಬು ಅವರು ಅಕ್ರಮವಾಗಿ ಈ ಜಾಗವನ್ನು ಪಡೆದುಕೊಂಡರು ಎನ್ನಲಾಗಿದೆ. ಸದ್ಯ ದೂರು ನೀಡಿದ ಚಿಟ್ಟಿಮಲ್ಲು ತಮಗೆ ಪೊಲೀಸ್ ರಕ್ಷಣೆ ಬೇಕು ಎಂದು ಕೋರಿದ್ದಾರೆ. ಅಲ್ಲದೆ ಈ ಜಾಗವನ್ನು ಸರ್ಕಾರದವರು ವಶಕ್ಕೆ ಪಡೆದು ಅಗತ್ಯ ಇರುವ ವೃದ್ಧಾಶ್ರಮದವರಿಗೆ ನೀಡುವಂತೆ ಕೋರಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು