ಹೆಚ್ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧದ ಭೂ ಒತ್ತುವರಿ ಆರೋಪ ; ತೆರೆವು ಕಾರ್ಯಾಚರಣೆ.

ರಾಮನಗರ :- ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ಕೇಳಿ ಬಂದಿರುವ ಭೂಒತ್ತುವರಿ ಆರೋಪ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಇದೀಗ ಕಂದಾಯ ಇಲಾಖೆ ಒತ್ತುವರಿ ತೆರೆವು ಕಾರ್ಯಾಚರಣೆಗೆ ಮುಂದಾಗಿದೆ. ಪ್ರಭಾವಿ ರಾಜಕಾರಣಿಯೊಬ್ಬರ, ಅದರಲ್ಲೂ ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವ ಅಪರೂಪದ ಪ್ರಕರಣ ಇದಾಗಿದೆ. ಹೆಚ್ಡಿಕೆ ಕುಟುಂಬದ ವಿರುದ್ಧ ಕೇಳಿಬಂದಿರುವ ಭೂಒತ್ತುವರಿ ಆರೋಪ ಸಂಬಂಧ ತನಿಖೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ಐಟಿ ರಚನೆ ಮಾಡಿದ್ದರು. ಕೇತಗಾನಹಳ್ಳಿಯ ಸರ್ವೆ ನಂ.7, 8, 9, 10, 16, 17, 79 ರಲ್ಲಿ 14 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಕಂದಾಯ ಇಲಾಖೆ, ಸರ್ವೆ ಇಲಾಖೆಯಿಂದ ಜಂಟಿ ಸರ್ವೆ ನಡೆದಿದೆ. ಇದೀಗ ಸರ್ಕಾರಕ್ಕೆ ಸರ್ವೆ ವರದಿ ಸಲ್ಲಿಸಿ ಒತ್ತುವರಿ ತೆರವು ಮಾಡಲು ಇಲಾಖೆ ಮುಂದಾಗಿದೆ. ಇಂದು ಕಂದಾಯ ಇಲಾಖೆ ಅಧಿಕಾರಿಗಳಿಂದ ಒತ್ತುವರಿ ತೆರವು ಸಾಧ್ಯತೆ ಇದೆ. ಒತ್ತುವರಿ ತೆರವಿಗೆ ಕುಮಾರಸ್ವಾಮಿ ತೋಟದ ಮನೆಯ ಮುಂದೆ ಎರಡು ಜೆಸಿಬಿಗಳು ಸಿದ್ಧವಾಗಿವೆ.

 

 

 

 

ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್
ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಕುಟುಂಬದವರು ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ. ಈ ವಿಚಾರವಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ರಚನೆ ಮಾಡಿತ್ತು. ಇದಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಪ್ರಕರಣ ಸಂಬಂಧ ಹೈಕೋರ್ಟಿನಲ್ಲಿ ಸೋಮವಾರ ವಿಚಾರಣೆ ನಡೆದಿತ್ತು. ನ್ಯಾಯಮೂರ್ತಿ ಕೆ ಸೋಮಶೇಖರ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು.
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಎಸ್ಐಟಿ ರಚನೆ ಮಾಡಿದ್ದಾರೆ. ಹಾಗಾದರೆ ಕಂದಾಯ ಇಲಾಖೆ ಅಷ್ಟೊಂದು ಶಕ್ತಿಶಾಲಿಯಾಗಿದೆಯೇ? ರಾಜ್ಯ ಸರ್ಕಾರವು ಸಂವಿಧಾನಕ್ಕಿಂತ ಮಿಗಿಲಾಗಿದೆಯೇ? 14 ಎಕರೆ ಭೂ ಒತ್ತುವರಿ ತೆರವು ಮಾಡಲಾಗಿದೆ ಎಂದು ತಿಳಿಸಲಾಗಿದೆ. ಹಾಗಾದರೆ ಉಳಿದ 71 ಎಕರೆ ಭೂಮಿ ಒತ್ತುವರಿಯನ್ನು ತೆರವು ಮಾಡಬೇಕಾಗಿದೆ ಅಲ್ಲವೇ ಎಂದು ವಿಭಾಗಿಯ ಪೀಠ ಸರ್ಕಾರವನ್ನು ಪ್ರಶ್ನಿಸಿತು.
ಇಷ್ಟೇ ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನು ಬ್ರೈನ್ ಮ್ಯಾಪಿಂಗ್ಗೆ ಒಳಪಡಿಸಲು ಆದೇಶಿಸಿದರೆ ಸತ್ಯ ಹೊರಬರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿತ್ತು. ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಇದೀಗ ಕಂದಾಯ ಇಲಾಖೆ ಭೂ ಒತ್ತುವರಿ ತೆರವು ಕಾರ್ಯಚರಣೆಗೆ ಮುಂದಾಗಿದೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!