ಲಕ್ಕಿ ಭಾಸ್ಕರ್ ನೋಡಿ 50ಲಕ್ಷ ವಂಚನೆ ಮಾಡಿದ ಮ್ಯಾನೇಜರ್.

ಬೆಂಗಳೂರು : ಇತ್ತೀಚೆಗೆ ತೆರೆಕಂಡ ತೆಲುಗಿನ ಲಕ್ಕಿ ಭಾಸ್ಕರ್ ಸಿನಿಮಾ ಮಾದರಿಯಲ್ಲಿ ಖಾಸಗಿ ಬ್ಯಾಂಕ್ವೊಂದರ ಉಪ ವ್ಯವಸ್ಥಾಪಕಿ ವೃದ್ಧೆಗೆ ವಂಚಿಸಿದ್ದಾಳೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಶಾಮೀಲಾಗಿದ್ದು, ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಬ್ಯಾಂಕ್ ಉಪ ವ್ಯವಸ್ಥಾಪಕಿ ಮೇಘನಾ, ಆಕೆಯ ಪತಿ ಶಿವಪ್ರಸಾದ್, ಸ್ನೇಹಿತರಾದ ವರದರಾಜು ಮತ್ತು ಅನ್ವರ್ ಘೋಷ್ ಬಂಧಿತ ಆರೋಪಿಗಳು. ಗಿರಿನಗರದಲ್ಲಿರುವ ಇಂಡಸ್ ಇಂಡ್ ಬ್ಯಾಂಕ್ನ ಉಪ ವ್ಯವಸ್ಥಾಪಕಿ ಮ್ಯಾನೆಜರ್ ಮೇಘನಾ ಎಫ್ಡಿ ಅಕೌಂಟ್ ಮಾಡಿಕೊಡುವುದಾಗಿ ವೃದ್ಧೆಗೆ ಸುಳ್ಳು ಹೇಳಿ ಆರ್ಟಿಜಿಎಸ್ ಕಾಗದಕ್ಕೆ ಸಹಿ ಮಾಡಿಸಿಕೊಂಡಿದ್ದಾಳೆ. ಬಳಿಕ ತಮ್ಮ ಹೊಸ ಬ್ಯಾಂಕ್ ಖಾತೆ ತೆಗೆದು ಆರ್ಟಿಜಿಎಸ್ ಮುಖಾಂತರ 50 ಲಕ್ಷ ರೂಪಾಯಿ ವರ್ಗಾಯಿಸಿಕೊಂಡಿದ್ದಾಳೆ.

ವೃದ್ಧ ದಂಪತಿ ಗಿರಿನಗರದಲ್ಲಿನ ಇಂಡಸ್ ಇಂಡ್ ಬ್ಯಾಂಕ್ನಲ್ಲಿ ಜಂಟಿ ಖಾತೆ ತೆರೆದಿದ್ದಾರೆ. ಇದೇ ಬ್ಯಾಂಕ್ನಲ್ಲಿ ಎಫ್ ಡಿ ಖಾತೆ ಕೂಡ ಹೊಂದಿದ್ದಾರೆ. ವೃದ್ಧೆಗೆ ಬ್ಯಾಂಕ್ನಲ್ಲಿ ಉಪ ವ್ಯವಸ್ಥಾಪಕಿ ಮೇಘನಾ ಪರಿಚಯವಾಗಿದೆ. ಮೇಘನಾ ವೃದ್ಧೆಗೆ ಬ್ಯಾಂಕ್ ವ್ಯವಹಾರದಲ್ಲಿ ಸಹಾಯ ಮಾಡುತ್ತಿದ್ದಳು. ಕುಟುಂಬದ ಎಲ್ಲ ವಿಚಾರವನ್ನು ಮೇಘನಾ ಜೊತೆ ವೃದ್ಧೆ ಹಂಚಿಕೊಳ್ಳುತ್ತಿದ್ದಳು. ಚಾಮರಾಜಪೇಟೆಯಲ್ಲಿನ ಮನೆ ಮಾರಿರುವ ವಿಚಾರವನ್ನು ಕೂಡ ವೃದ್ಧೆ, ಮೇಘನಾಗೆ ಹೇಳಿದ್ದಳು.
ಮನೆ ಮಾರಾಟದಿಂದ ವೃದ್ಧ ದಂಪತಿಯ ಬ್ಯಾಂಕ್ ಖಾತೆಗೆ ಒಂದು ಕೋಟಿ ಹಣ ಜಮೆಯಾಗಿತ್ತು. ಒಂದು ದಿನ, ವೃದ್ಧೆ ಬ್ಯಾಂಕ್ಗೆ ಹೋದಾಗ ಎರಡು ಬಾಂಡ್ ಅವಧಿ ಮುಗಿದಿದೆ ಎಂದು ಮೇಘಟನಾ ಕಥೆ ಕಟ್ಟಿದ್ದಾಳೆ. ಹೊಸ ಬಾಂಡ್ ಖರೀದಿಗೆ ದಾಖಲಾತಿ ಮತ್ತು ಚೆಕ್ ಅವಶ್ಯಕತೆ ಇದೆ ಎಂದು ಹೇಳಿದ್ದಾಳೆ. ಬಳಿಕ, ಮೇಘನಾ, ವೃದ್ಧೆ ಮನೆಗೆ ತೆರಳಿ ಎರಡು ಖಾಲಿ ಚೆಕ್ ಮೇಲೆ ಸಹಿ ಮಾಡಿಸಿಕೊಂಡಿದ್ದಾಳೆ. ಜೊತೆಗೆ, ಒಂದಿಷ್ಟು ಕಾಗದ ಪತ್ರಗಳಿಗೂ ಸಹಿ ಪಡೆದಿದ್ದಾಳೆ. ಈ ವೇಳೆ, ಎಫ್ಡಿ ಬದಲಾಗಿ ಆರ್ಟಿಜಿಎಸ್ ಪತ್ರಕ್ಕೂ ಸಹಿ ಪಡೆದಿದ್ದಾಳೆ.
ಒಂದು ದಿನ ವೃದ್ಧ ದಂಪತಿ ಮಗ ಮೊಬೈಲ್ನಲ್ಲಿ ಖಾತೆ ಪರಿಶೀಲೀಸಿದಾಗ ಹಣ ಕಡಿಮೆ ಇರುವುದು ಪತ್ತೆಯಾಗಿದೆ. ಬಳಿಕ, ಬ್ಯಾಂಕ್ನಿಂದ ಬಂದಿದ್ದ ಮೆಸೆಜ್ಗಳ ಪರಿಶೀಲಿಸಿದ್ದಾರೆ. ಈ ವೇಳೆ ಫೆಬ್ರವರಿ 13 ರಂದು ಬೇರೆ ಖಾತೆಗೆ ಹಣ ವರ್ಗಾವಣೆಯಾಗಿರುವುದು ಗೊತ್ತಾಗಿದೆ. ನಂತರ ವೃದ್ಧೆ ಬ್ಯಾಂಕ್ಗೆ ಹೋಗಿ ಮೇಘಾಳನ್ನು ಪ್ರಶ್ನಿಸಿದಾಗ, “ನೀವು ಹೇಳಿದ ಖಾತೆಗೆ ಆರ್ಟಿಜಿಎಸ್ ಮಾಡಲಾಗಿದೆ” ಎಂದು ಹೇಳಿದ್ದಾಳೆ.
ವೃದ್ಧೆ, ಗಿರಿನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಅಸಲಿ ಸತ್ಯ ಬಾಯಿಬಿಟ್ಟಿದ್ದಾರೆ.

ಐಷಾರಾಮಿ ಜೀವನದ ಕನಸು ಕಂಡಿದ್ದ ಮೇಘನಾ ಪೊಲೀಸರ ವಶಕ್ಕೆ


ಮೇಘನಾ ಐಷಾರಾಮಿ ಜೀವನದ ಕನಸು ಕಂಡಿದ್ದಳು. ಕಾರು ಖರೀದಿಸಿ ವೈಭೋಗದ ಜೀವನ ನಡೆಸಬೇಕು ಅಂದುಕೊಂಡಿದ್ದಳು. ಅದಕ್ಕಾಗಿ ಗಂಡ ಶಿವಪ್ರಸಾದ್ ಜೊತೆಗೆ ಸೇರಿ ವೃದ್ಧೆ ಖಾತೆಯಲ್ಲಿ ಹಣವನ್ನು ಎಗರಿಸಲು ಪ್ಲಾನ್ ಮಾಡಿದ್ದಾಳೆ. ಗೆಳೆಯ ವರದರಾಜು ಮತ್ತು ಅನ್ವರ್ ಘೋಷ್ಗೆ ಹೇಳಿ ಹೊಸ ಬ್ಯಾಂಕ್ ಖಾತೆ ತೆರದಿದ್ದಾಳೆ. ಆ ಖಾತೆಗೆ ಆರ್ಟಿಜಿಎಸ್ ಮೂಲಕ 50 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾಳೆ. ಬಳಿಕ, 30 ಲಕ್ಷ ಹಣ ವಿತ್ ಡ್ರಾ ಮಾಡಿಕೊಂಡಿದ್ದಾರೆ. ತನಿಖೆ ನಡೆಸಿ ಒಟ್ಟು 50 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಲಕ್ಕಿ ಭಾಸ್ಕರ್ ಸಿನಿಮಾ ಕಥೆ ಹೇಳಿದ ಮೇಘನಾ
ಪೊಲೀಸರ ವಿಚಾರಣೆ ವೇಳೆ ಮೇಘನಾ ಲಕ್ಕಿ ಭಾಸ್ಕರ್ ಸಿನಿಮಾ ಕಥೆ ಹೇಳಿದ್ದಾಳೆ. “ವೃದ್ಧೆಗೆ ಮೋಸ ಮಾಡುವ ಉದ್ದೇಶ ಇರಲಿಲ್ಲ. ನಮಗೆ ಹಣದ ಅವಶ್ಯಕತೆ ಇತ್ತು. ಆ ದುಡ್ಡಲ್ಲಿ ಲಾಭ ಗಳಿಸಿ ಮತ್ತೆ ವೃದ್ಧೆಗೆ ಕೊಡುವ ಪ್ಲಾನ್ ಇತ್ತು” ಎಂದು ಕಥೆ ಹೇಳಿದ್ದಾಳೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!