ಮಧ್ಯರಾತ್ರಿ ನಡುರಸ್ತೆಯಲ್ಲಿ ಲಾಂಗ್ ಹಿಡಿದು ಅಟ್ಟಹಾಸ ಮಾಡಿದ ಇಬ್ಬರ ವಿರುದ್ಧ ಪ್ರಕರಣ ದಾಖಲು ; ಗುಡ್ ನ್ಯೂಸ್ ಫಲಶೃತಿ.

ಮೈಸೂರು :- ರೌಡಿಶೀಟರ್ವೊಬ್ಬ ತಡರಾತ್ರಿ ನಡುರಸ್ತೆಯಲ್ಲೇ ಲಾಂಗ್ ಹಿಡಿದು ಸಹಚರನೊಂದಿಗೆ ಜಗಳವಾಡಿರುವ ಘಟನೆ ಮೈಸೂರಿನ ಕೆ.ಜಿ.ಕೊಪ್ಪಲಿನಲ್ಲಿ ನಡೆದಿದ್ದು, ಈ ಘಟನೆ ಕುರಿತು ಗುಡ್ ನ್ಯೂಸ್ ಕನ್ನಡ ವಾಹಿನಿ ಸುದ್ದಿಯನ್ನ ಮಾಡಿತ್ತು
ಕೆ.ಜಿ.ಕೊಪ್ಪಲು ಸಿದ್ದಪ್ಪಾಜಿ ದೇವಸ್ಥಾನದ ಬಳಿ ನಡುರಸ್ತೆಯಲ್ಲೇ ಲಾಂಗ್ ಹಿಡಿದು ಪ್ರದರ್ಶಿಸಿ, ಭಯದ ವಾತಾವರಣ ಸೃಷ್ಟಿಸಿದ ಆರೋಪದಡಿ ಮೋಹನ್ ಅಲಿಯಾಸ್ ಚಿಂಟು(21) ಹಾಗೂ ಆತನ ಸಹಚರ ರಕ್ಷಿತ್ ಅಲಿಯಾಸ್ ಕೇಕು(21) ವಿರುದ್ಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಸೋಮವಾರ ಎಫ್ಐಆರ್ ದಾಖಲಾಗಿದೆ.
ಯುವಕನೊಬ್ಬ ಲಾಂಗ್ ಹಿಡಿದು ಮತ್ತೊಬ್ಬನೊಂದಿಗೆ ಜಗಳವಾಡುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣ ದಲ್ಲಿ ಗಮನಿಸಿದ ಸರಸ್ವತಿಪುರಂ ಠಾಣೆ ಸಿಬ್ಬಂದಿ ಬಸವರಾಜ್ ಅರಸ್, ಈ ಬಗ್ಗೆ ಸ್ಥಳಕ್ಕೆ ತೆರಳಿ ವಿಚಾರಿಸಿ, ವಿಡಿಯೋ ದಲ್ಲಿರುವವರ ಮಾಹಿತಿ ಕಲೆಹಾಕಿದ ನಂತರ
ದೂರು ನೀಡಿದ್ದಾರೆ. ಮಾ.11ರಂದು ತಡರಾತ್ರಿ 11 ಗಂಟೆ ವೇಳೆಯಲ್ಲಿ ಸಿದ್ದಪ್ಪಾಜಿ ದೇವಸ್ಥಾನದ ಬಳಿ ರೌಡಿಶೀಟರ್ ಮೋಹನ್, ಕೈಯ್ಯಲ್ಲಿ ಲಾಂಗ್ ಹಿಡಿದು ಸಾರ್ವಜನಿಕ ವಾಗಿ ಪ್ರದರ್ಶಿಸಿ ಭಯದ ವಾತಾವರಣ ಸೃಷ್ಟಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.


ವೈರಲ್ ಆಗಿರುವ ವಿಡಿಯೋದಲ್ಲಿ ಲಾಂಗ್ ಹಿಡಿದಿರುವ ಯುವಕನನ್ನು ಮತ್ತೊಬ್ಬ ಸಮಾಧಾನಪಡಿಸುವಂತೆ ಕಂಡು ಬಂದಿದೆ. ಕೆಲ ಹೊತ್ತಿನ ಬಳಿಕ ಮೂರಾಲ್ಕು ಮಂದಿ ಬಂದು ದೂರದಿಂದಲೇ ಜಗಳ ನೋಡುತ್ತಿ ರುತ್ತಾರೆ. ರೈಲ್ವೆ ಗೇಟ್ ಬಂದ್ ಮಾಡಿದ್ದ ರಿಂದ ಒಂದು ಕಾರು, ಬೈಕ್ ಅಲ್ಲಿಯೇ ನಿಂತಿ ರುತ್ತವೆ. ಅನೇಕ ವಾಹನಗಳು ಇಲ್ಲೇ ಹಾದುಹೋಗುತ್ತವೆ ಆದರೆ ಯಾರಿಗೂ ಲಾಂಗ್ ತೋರಿಸಿ, ಹೆದರಿಸಿದಂತೆ ಕಾಣಿಸುವುದಿಲ್ಲ.
ಸದ್ಯ ಈ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ಸಾರ್ವಜನಿಕವಾಗಿ ಲಾಂಗ್ ಝಳಪಿಸಿ ಭಯದ ವಾತಾವರಣ ಸೃಷ್ಟಿಸಿದವರ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!