ಮೇ 31ಕ್ಕೆ ಡೆಡ್ ಲೈನ್ ನೀಡಿದ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಜಿ.ಎಸ್ ಸಂಗ್ರೇಶಿ.

ಗುಡ್ ನ್ಯೂಸ್ ಕನ್ನಡ ವಾಹಿನಿಯೊಂದಿಗೆ ಸಂದರ್ಶನ ನೀಡಿದ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಜಿ.ಎಸ್ ಸಂಗ್ರೇಶಿ. ZP,TP ಕಾರ್ಪೊರೇಷನ್ ಎಲೆಕ್ಷನ್ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆ ಚುನಾವಣೆ ಕುರಿತು ಹಲವಾರು ಹೇಳಿಕೆಗಳನ್ನು ನೀಡಿದ್ದಾರೆ. ಸರ್ಕಾರದ ಮಂದ ನಡೆಯಿಂದ ಲೋಕಲ್ ವಾರ್ ಗೆ ಬೆಲೆ ಆಗ್ತಾ ಇದೆ. ಈ ಡಿಲೆಯಿಂದ ಸರ್ಕಾರಕ್ಕೂ ಸಹ ಕೆಟ್ಟ ಪರಿಣಾಮ ಬೀರಬಹುದು.

ಈ ಚುನಾವಣೆ ಕುರಿತಂತೆ ಮೇ 31ಕ್ಕೆ ಸರ್ಕಾರಕ್ಕೆ ಡೆಡ್ ಲೈನ್ ಇರುತ್ತದೆ. ಅಷ್ಟರೊಳಗೆ ಸರ್ಕಾರ ಪಟ್ಟಿ ಕೊಡಲಿಲ್ಲವಾದರೆ, ಸುಪ್ರೀಂ ಕೋರ್ಟ್ ನ ಮೊರೆ ಹೋಗುತ್ತೇವೆ. ಚುನಾವಣೆಗೆ ನಾವು ಸಂಪೂರ್ಣವಾಗಿ ತಯಾರಿದ್ದೇವೆ. ಈ ವಿಷಯದ ಕುರಿತಂತೆ ನಾವು ಹೋದಲ್ಲಿ ಬಂದಲ್ಲಿ ಚುನಾವಣೆಯ ಬಗ್ಗೆ ಪ್ರಸ್ತಾಪವನ್ನು ಮಾಡ್ತಾ ಇದ್ದಾರೆ. ಈ ಚುನಾವಣಾ ವಿಷಯದಲ್ಲಿ ಇನ್ನೂ ತಡವಾದರೆ ನಾವು ಖಂಡಿತವಾಗಿಯೂ ಸುಪ್ರೀಂಕೋರ್ಟ್ ಮೊರೆ ಹೋಗುತ್ತೇವೆ ಎಂದು ಕಡಾ ಖಂಡಿತವಾಗಿ ಹೇಳಿಕೆ ನೀಡಿದ್ದಾರೆ.

ಇನ್ನು ಮತದಾರರ ಪಟ್ಟಿ ಕೂಡ ರೆಡಿ ಇದೆ ರಿಸರ್ವೇಶನ್ ಕೊಡಬೇಕಾಗಿರೋದು ಬಾಕಿ ಇದೆ ಅಷ್ಟೇ. ಸ್ಥಳೀಯ ಸಂಸ್ಥೆ ಚುನಾವಣೆ ಡಿಲೆ ಆಗ್ತಾ ಇರೋದ್ರ ಬಗ್ಗೆ ಬೇಸರವನ್ನ ವ್ಯಕ್ತಪಡಿಸಿ ಸರ್ಕಾರದ ವಿರುದ್ಧ ಗರಂ ಆಗಿ ಮಾತನಾಡಿದರು. ಅಷ್ಟೇ ಅಲ್ಲದೆ ನಾಲ್ಕು ಎಂಎಲ್ಎ ಕ್ಷೇತ್ರಗಳ ಬಗ್ಗೆ ಮಾಹಿತಿ ಸಂಗ್ರಹಣೆಯೂ ಸಹ ಈಗಾಗಲೇ ನಡೆದಿದೆ. ನಾಲಕ್ಕು ಕ್ಷೇತ್ರದಿಂದ 7 ಲಕ್ಷಕ್ಕೂ ಹೆಚ್ಚು ಮತದಾರರು ಇದ್ದಾರೆ. ಅಷ್ಟೇ ಅಲ್ಲದೆ ಭಾರತೀಯ ಚುನಾವಣಾ ಆಯೋಗ ಮತದಾರರ ಪಟ್ಟಿಯನ್ನು ಸಹ ರೆಡಿ ಮಾಡಿಕೊಂಡಿದ್ದಾರೆ. ಅದರ ಆಧಾರದ ಮೇಲೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮಾಡ್ತೀವಿ ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲದೆ ಸಂವಿಧಾನದ ನೀತಿ ನಿಯಮಗಳನ್ನು ಸಹ ಹೇಳಿದರು. ಐದು ವರ್ಷ ಅವಧಿ ಮುಗಿಯುವ ಆರು ತಿಂಗಳ ಮುಂಚೆ ಚುನಾವಣೆ ಮಾಡ್ಬೇಕು, ಇದರ ಬಗ್ಗೆ ಸ್ಪಷ್ಟವಾಗಿ ಸಂವಿಧಾನದಲ್ಲಿ ಉಲ್ಲೇಖ ಆಗಿದೆ ಆದರೆ ಸರ್ಕಾರಗಳು ಮೀಸಲಾತಿ ಪಟ್ಟಿ ಕೊಡದೆ ವಿಳಂಬ ಮಾಡ್ತಾ ಇದ್ದಾರೆ. ಜನಗಳಿಗೆ ನಾವು ಉತ್ತರ ಹೇಳಿ ಸಾಕಾಗಿದೆ. ಮೇ 31ಕ್ಕೆ ಅಂತಿಮವಾಗಿ ಸರ್ಕಾರಕ್ಕೆ ಡೆಡ್ ಲೈನ್, ಅದರ ಒಳಗಾಗಿ ಅವರು ಸರಿಪಡಿಸಿಕೊಳ್ಳದಿದ್ದರೆ, ಕೋರ್ಟ್ ಮೂಲಕ ಹೋಗಿ ಚುನಾವಣೆಯನ್ನು ಮಾಡೇ ಮಾಡ್ತೀವಿ. ಈಗಾಗಲೇ ಸಾಕಷ್ಟು ಬಾರಿ ಸರ್ಕಾರಕ್ಕೆ ಪತ್ರವನ್ನು ಬರೆದು ಆಗಿದೆ ಇನ್ನೇನಿದ್ರೂ ಸುಪ್ರೀಂಕೋರ್ಟ್ ಮೊರೆ ಹೋಗಿ ಕಲೆಕ್ಷನ್ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ಮೈಸೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಜಿಎಸ್ ಸಂಗ್ರೇಶಿ ಹೇಳಿಕೆಯನ್ನು ನೀಡಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!