
ಹೌದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರು ನಿನ್ನೆ ನವದೆಹಲಿಯಲ್ಲಿ ಡಿನ್ನರ್ ನಲ್ಲಿ ಭಾಗಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನವದೆಹಲಿಯ ನಿವಾಸದಲ್ಲಿ ಈ ಡಿನ್ನರ್ ಮೀಟಿಂಗ್ ಆಯೋಜಿಸಲಾಗಿದ್ದು,ದೆಹಲಿಗೆ ತೆರಳಿರುವ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಮನೆಗೆ ಆಹ್ವಾನಿಸಿದ್ದರು ಎಂದು ಹೇಳಲಾಗಿದೆ.
ಡಿನ್ನರ್ ಗೆ ಬರುವಂತೆ ಹೆಚ್.ಡಿ.ಕುಮಾರಸ್ವಾಮಿ ಅವರೇ ಸತೀಶ್ ಜಾರಕಿಹೊಳಿ ಅವರನ್ನು ಡಿನ್ನರ್ ಗೆ ಕರೆದಿದ್ದರು ಎನ್ನಲಾಗಿದ್ದು, ಈ ವೇಳೆ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.





