ಅರಮನೆ ನಗರಿಯಲ್ಲಿ ಇಪ್ಪತ್ತೊಂದನೇ ವರ್ಷದ ಚಿಣ್ಣರಮೇಳ.

ಮೈಸೂರು:- ಮೈಸೂರು ರಂಗಾಯಣದ ಆವರಣದಲ್ಲಿ ಇಪ್ಪತ್ತೊಂದನೇ ವರ್ಷದ ಚಿಣ್ಣರಮೇಳ ದಿನಾಂಕ:14-04-2025 ರಿಂದ 10-05-2025 ರವರೆಗೆ ನಡೆಯಲಿದ್ದು, ಮಕ್ಕಳ ರಂಗ ತರಬೇತಿ ಶಿಬಿರಕ್ಕೆ ಅರ್ಜಿ ವಿತರಣೆ ಮಾಡಲಾಗುತ್ತಿದೆ.
2025 ಮಾರ್ಚ್ 31ಕ್ಕೆ 7 ವರ್ಷಗಳು ತುಂಬಿದ ಮತ್ತು ಈ ದಿನಾಂಕಕ್ಕೆ 15 ವರ್ಷ ಮೀರಿರದ ಮಕ್ಕಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ದಿನಾಂಕ:06-04-2025 ರಂದು ಬೆಳಿಗ್ಗೆ 10.00 ಗಂಟೆಗೆ ರಂಗಾಯಣದ ಕಚೇರಿಯಲ್ಲಿ ಒಬ್ಬರಿಗೆ ಒಂದರಂತೆ ಅರ್ಜಿ ವಿತರಿಸಲಾಗುವುದು. ಪ್ರತಿ ಅರ್ಜಿಯ ಶುಲ್ಕ ರೂ.100/-ಗಳಾಗಿದ್ದು, 250 ಅರ್ಜಿಗಳನ್ನು ಮಾತ್ರ ನೀಡಲಾಗುವುದು. ಮೊದಲು ಬಂದವರಿಗೆ ಮೊದಲ ಆದ್ಯತೆ.


ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ:09-04-2025ರ ಸಂಜೆ 5.00 ಗಂಟೆಯೊಳಗೆ ರಂಗಾಯಣದ ಕಚೇರಿಗೆ ಖುದ್ದಾಗಿ ಸಲ್ಲಿಸಬೇಕು. ಚಿಣ್ಣರಮೇಳದ ಪ್ರವೇಶ ಶುಲ್ಕ ಮಗುವೊಂದಕ್ಕೆ ರೂ.3,500/-ಗಳ ಈ ಮೊತ್ತವನ್ನು ಉಪ ನಿರ್ದೆಶಕರು, ರಂಗಾಯಣ ಮೈಸೂರು ಇವರ ಹೆಸರಿಗೆ ಡಿ.ಡಿ ತೆಗೆದು ಅರ್ಜಿ ಜೊತೆ ಲಗತ್ತಿಸಬೇಕು. ಮಗುವಿನ ಜನ್ಮದಿನದ ದೃಢೀಕರಣಕ್ಕಾಗಿ ಆಧಾ‌ರ್ ಕಾರ್ಡ್ ಪ್ರತಿ ಅಥವಾ ಮಗುವಿನ ಹೆಸರು ನಮೂದಿಸಿರುವ ಜನನ ಪ್ರಮಾಣಪತ್ರವನ್ನು ಅರ್ಜಿ ಜೊತೆ ಲಗತ್ತಿಸಬೇಕು. ಅರ್ಜಿಗಾಗಿ ಸಾಲಿನಲ್ಲಿ ನಿಂತವರು ಅರ್ಜಿಯಲ್ಲಿ ಮತ್ತು ರಸೀದಿಯಲ್ಲಿ ಕಡ್ಡಾಯವಾಗಿ ಮಗುವಿನ ಹೆಸರನ್ನು ಬರೆಸಿ ರೂ.100/-ಗಳನ್ನು ಪಾವತಿಸಿ ರಸೀದಿಯೊಂದಿಗೆ ಅರ್ಜಿಯನ್ನು ಪಡೆಯುವುದು ಹಾಗೂ ಭರ್ತಿ ಮಾಡಿದ ಅರ್ಜಿಯನ್ನು ರಸೀದಿಯೊಂದಿಗೆ ಮರಳಿ ಸಲ್ಲಿಸಬೇಕು ಎಂದು ರಂಗಾಯಣದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!