ಅವೈಜ್ಞಾನಿಕವಾಗಿ ಚರಂಡಿ ಕಾಮಗಾರಿ, ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ ಸ್ಥಳೀಯರು.

ಹುಣಸೂರು :- ಅವೈಜ್ಞಾನಿಕವಾಗಿ ಚರಂಡಿ ಕಾಮಗಾರಿ ನಡೆಸಿದ ಹಿನ್ನಲೆ ಚರಂಡಿ ನೀರು ಮನೆಗಳಿಗೆ ನುಗ್ಗುತ್ತಿರುವ ಘಟನೆ ಹುಣಸೂರು ಬಡಾವಣೆ ನಿವಾಸಿಗಳನ್ನ ಹೈರಾಣುಗೊಳಿಸಿದೆ. ಕಾಮಗಾರಿ ನಡೆಸಿ ಕೈಕಟ್ಟಿ ಕುಳಿತ ಅಧಿಕಾರಿಗಳಿಗೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದಾರೆ.ಕೂಡಲೇ ಅವ್ಯವಸ್ಥೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ಪ್ರತಿಭಟನೆ ದಾರಿ ಹಿಡಿಯಬೇಕಾಗುತ್ತದೆಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.ಹುಣಸೂರು ತಾಲೂಕು ಮಂಜುನಾಥ ಬಡಾವಣೆ ವಾರ್ಡ್ 28 ರಲ್ಲಿನ ನಿವಾಸಿಗಳು ಚರಂಡಿ ನೀರಿನ ಅವ್ಯವಸ್ಥೆಯಿಂದಾಗಿ ಅಧಿಕಾರಿಗಳ ವಿರುದ್ದ ಆಕ್ರೋಷ ವ್ಯಕ್ತಪಡಿಸುತ್ತಿದ್ದಾರೆ.ಇತ್ತೀಚೆಗೆ ನಡೆಸಿದ ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿ ಮಾಡಿರುವ ಹಿನ್ನಲೆ ನೀರು ಸರಾಗವಾಗಿ ಹರಿದುಹೋಗದೆ ಮನೆಗಳಿಗೇ ನುಗ್ಗುತ್ತಿದೆ.ಲಕ್ಷಾಂತರ ವೆಚ್ಚ ಮಾಡಿ ಮಾಡಿದ ಕಾಮಗಾರಿ ಉಪಯೋಗಕ್ಕೆ ಬಾರದಂತಾಗಿದೆ.ಶೌಚಾಲಯ ನೀರು ಹರಿದುಹೋಗಲೆಂದು ಚರಂಡಿ ನಿರ್ಮಾಣ ಮಾಡಲಾಗಿದೆ.ಆದ್ರೆ ಚರಂಡಿಗೆ ಸೇರಿದ ನೀರು ಮುಂದೆ ಹರಿದುಹೋಗದೆ ತಟಸ್ಥವಾಗಿ ನಿಂತಿದೆ.ಅಲ್ಲದೆ ಮನೆಗೇ ವಾಪಸ್ ನುಗ್ಗುತ್ತಿದೆ.

ಇದರಿಂದಾಗಿ ಸಮಸ್ಯೆ ಮತ್ತಷ್ಟು ಉಲ್ಭಣವಾಗಿದೆ.ಈಗಾಗಲೇ ಸಮಸ್ಯಗೆ ಪರಿಹಾರ ಕಲ್ಪಿಸುವಂತೆ ಸ್ಥಳೀಯರು ಸಾಕಷ್ಟು ಬಾರಿ ದೂರು ನೀಡಿದ್ದಾರೆ.ಹೀಗಿದ್ದೂ ಕ್ಯಾರೆ ಎನ್ನದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ.ಕೂಡಲೇ ಚರಂಡಿಯನ್ನ ವೈಜ್ಞಾನಿಕವಾಗಿ ನಿರ್ಮಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ಪ್ರತಿಭಟನೆ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ…

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!