ಆರ್ಸಿಬಿ ವಿರುದ್ಧ ಪಂದ್ಯವನ್ನಾಡಲು ಸಿರಾಜ್ ಭಾವುಕ….

ನಿನ್ನೆ ಅಂದರೆ ಏಪ್ರಿಲ್ 2ರಂದು ನಡೆದ ರ್ಸಿಬಿ ಹಾಗೂ ಜಿಟಿ ನಡುವಿನ ಪಂದ್ಯಾವಳಿಯಲ್ಲಿ ಮಹಮ್ಮದ್ ಸಿರಾಜ್ ರವರು ಆರ್ಸಿಬಿ ತಂಡವನ್ನು ಬಿಟ್ಟು ಗುಜರಾತ್ ಟೈಟನ್ಸ್ ಪರ ಆಟವಾಡುತ್ತಿದ್ದು. ಚಿನ್ನಸ್ವಾಮಿ ಯಲ್ಲಿ ಅತ್ಯದ್ಭುತವಾದ ಪ್ರದರ್ಶನವನ್ನು ನೀಡಿದರು. ತಮ್ಮ ಕೋಟಾದ ನಾಲ್ಕು ಓವರ್ಗಳಲ್ಲಿ 4.80 ಎಕನಾಮಿಕ್ ರೇಟ್ನಲ್ಲಿ ಕೇವಲ 19 ರನ್ ನೀಡಿ, ಮೂರು ವಿಕೆಟ್ ಪಡೆದರು. ಪಂದ್ಯ ಮುಗಿದ ನಂತರ ವಿಶೇಷ ಗೌರವಕ್ಕೆ ಪಾತ್ರರಾದರು.

ಇದೇ ವೇಳೆ ಮಾತನಾಡಿರುವ ಸಿರಾಜ್, ಕಳೆದ ಏಳು ವರ್ಷಗಳಿಂದ ನಾನು ಆರ್ಸಿಬಿ ಪರ ಆಡುತ್ತಿದ್ದೆ. ಹಾಗಾಗಿ ಸಹಜವಾಗಿಯೇ ಭಾವುಕನಾದೆ. ಯಾವಾಗ ಗಿಲ್ ಅವರು ನನ್ನ ಕೈಗೆ ಬಾಲ್ ನೀಡಿದರೋ ಆಗ ಕಾಮನ್ ಆದೆ. ನಾನು ನಿರಂತರವಾಗಿ ಪಂದ್ಯಗಳನ್ನು ಆಡಿದೆ. ಆದ್ದರಿಂದ ಯಾವ ತಪ್ಪುಗಳನ್ನು ಮಾಡ್ತಿದ್ದೇನೆಂದು ಅರ್ಥವಾಗಲಿಲ್ಲ. ಬಿಡುವು ಸಿಕ್ಕಾಗ ಬೌಲಿಂಗ್ ಮತ್ತು ಫಿಟ್ನೆಸ್ನತ್ತ ಗಮನಹರಿಸಿದೆ.

ಗುಜರಾತ್ ಟೈಟಾನ್ಸ್ಗೆ ಸೇರಿದಾಗ ಆಶಿಶ್ ನೆಹ್ರಾ ಭಾಯ್ ಜೊತೆ ಮಾತನಾಡಿದೆ. ನಿಮ್ಮ ಆಟವನ್ನು ಆನಂದಿಸಿ, ಮಾಡಬೇಕಾದ ಕೆಲಸ ಮಾಡಿ ಎಂದರು. ನಾನು ತಂಡದಲ್ಲಿರುವ ಇತರ ಬೌಲರ್ಗಳಾದ ರಬಾಡ, ಇಶಾಂತ್ ಮತ್ತು ಇತರೆ ಬೌಲರ್ಗಳೊಂದಿಗೆ ಮಾತನಾಡುತ್ತೇನೆ. ಅವರಿಂದ ಪ್ರತಿಕ್ರಿಯೆಯನ್ನು ತೆಗೆದುಕೊಳ್ಳುತ್ತೇನೆ. ಅದು ನನಗೆ ನಿಜವಾಗಿಯೂ ಸಹಾಯಕ್ಕೆ ಬರುತ್ತಿದೆ. ಒಬ್ಬ ಬೌಲರ್ ಆಗಿ ಯಾವಾಗಲೂ ಆತ್ಮವಿಶ್ವಾಸ ಹೊಂದಲು ಬಯಸುತ್ತೇನೆ. ಇದು ಪ್ರಮುಖ ವಿಷಯ ಎಂದಿದ್ದಾರೆ. ಸಿರಾಜ್ ರವರು ಉತ್ತಮ ಬೌಲಿಂಗ್ ಪ್ರದರ್ಶನವನ್ನು ಮಾಡಿದ್ದು ಜಿಟಿ ಅಭಿಮಾನಿಗಳಿಗೆ ಸಂತಸವನ್ನು ತಂದಿದ್ದು, ಆರ್ಸಿಬಿ ಅಭಿಮಾನಿಗಳು ಅವರನ್ನು ಬೇರೆ ತಂಡದಲ್ಲಿ ನೋಡಿ ಮನನೊಂದು ಕೊಂಡಿದ್ದಾರೆ.

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು