BJP ಕಾರ್ಯಕರ್ತ ವಿನಯ್ ಸೋಮಯ್ಯ ಆ*ಹ* ಕೇಸ್: CM ಕಾನೂನು ಸಲಹೆಗಾರರ ವಿರುದ್ಧ ದೂರು.

ಬೆಂಗಳೂರು :- ಬಿಜೆಪಿ (BJP) ಕಾರ್ಯಕರ್ತ ವಿನಯ್ ಸೋಮಯ್ಯ ಆ*ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಕ್ತಾರ ತೆನ್ನೀರ ಮಹಿನಾ, ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮಂತರ್ ಗೌಡ ವಿರುದ್ಧ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿನಯ್ ಸೋಮಯ್ಯ ಸಹೋದರ ಜೀವನ್ ಅವರು “ನನ್ನ ಸಹೋದರನಿಗೆ ಕಿರುಕುಳ ನೀಡಿದ್ದಾರೆ” ಎಂದು ಪೊಲೀಸರಿಗೆ 6 ಪುಟಗಳ ದೂರನ್ನು ಸಲ್ಲಿಸಿದ್ದಾರೆ.


ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಅಶೋಕ್
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆ*ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ್ ಆರ್ ಅಶೋಕ್ ಮಾತನಾಡಿ, ಈ ಘಟನೆಯಿಂದ ನಿಜಕ್ಕೂ ಕಾರ್ಯಕರ್ತರಿಗೆ ನೋವು ತಂದಿದೆ. ವಿನಯ್ ಒಳ್ಳೆಯ ವಿದ್ಯಾವಂತ, ಪತ್ನಿ ಸಾಫ್ಟ್ವೇರ್ ಇಂಜಿನಿಯರ್. 2-3 ತಿಂಗಳಿಂದ ಎಸ್ಪಿ ಮೂಲಕ ‘ಕೈ’ ಶಾಸಕರು, ತನ್ನೀರ ಕಿರುಕುಳ ನೀಡಿದ್ದಾರೆ. ಶಾಸಕ ಧಮ್ಕಿ ಹಾಕಿದ್ದನ್ನು ಡೆತ್ನೋಟ್ನಲ್ಲಿ ಉಲ್ಲೇಖ ಮಾಡಿದ್ದಾರೆ. ವಿನಯ್ ಮಡಿಕೇರಿ ಬಿಟ್ಟು ಬೆಂಗಳೂರಿನ ಮನೆಗೆ ಬಂದರೂ ಪೊಲೀಸರು ಕಿರುಕುಳ ಕೊಟ್ಟಿದ್ದಾರೆ. ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೊಲಿಷರನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳಲು ಬಳಸಿಕೊಳುತ್ತಿದ್ದಾರೆ. ಸಿಎಂ ಪದಕ ಲಭಿಸಿದ ಪೊಲೀಸ್ ಮೇಲೆ ಲೋಕಾಯುಕ್ತ ದಾಳಿ ಆಗಿದೆ. ವಿನಯ್ಗೆಆ*ಹತ್ಯೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು. ಕೊಡಗು ಎಸ್ಪಿ ಅಮಾನತು ಆಗಬೇಕು. ನಾಳೆ ನಮ್ಮ ಹೋರಾಟದ ಬಗ್ಗೆ ತೀರ್ಮಾನ ಪಡೆಯುತ್ತೇವೆ. ತೆನ್ನೀರಾ, ಪೊನ್ನಣ್ಣ, ಮಂತರ್ ಗೌಡ ವಿರುದ್ಧ ದೂರು ನೀಡಿದ್ದೇವೆ ಎಂದು ಹೇಳಿದರು.
ಇನ್ನು, ಮೃತ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಮಡಿಕೇರಿಯಲ್ಲಿನ ಮನೆಗೆ ಶನಿವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಲಿದ್ದಾರೆ.

ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಬಿಜೆಪಿ ಕಾರ್ಯಕರ್ತ ವಿನಯ್ ಆ*ಹತ್ಯೆಗೆ ಕಾರಣವಾದವರನ್ನು ಬಂಧಿಸುವಂತೆ ಮಡಿಕೇರಿಯ ಜ.ತಿಮ್ಮಯ್ಯ ವೃತ್ತದಲ್ಲಿ ರಸ್ತೆ ತಡೆದು ಮಾಜಿ ಶಾಸಕ ಕೆ.ಜಿ.ಬೋಪಯ್ಯ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಾಸಕರಾದ ಎ.ಎಸ್.ಪೊನ್ನಣ್ಣ, ಮಂಥರ್ ಗೌಡ ಮತ್ತು ಕಾಂಗ್ರೆಸ್ ವಕ್ತಾರ ತೆನ್ನೀರಾ ಮಹಿನಾ ಬಂಧಿಸಿವಂತೆ ಆಗ್ರಹಸಿದರು. ಅಲ್ಲದೇ, ಕೊಡಗು ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ವಿರುದ್ಧವೂ ಧಿಕ್ಕಾರ ಕೂಗಿದರು. ಶಾಸಕರಾದ ಎ.ಎಸ್.ಪೊನ್ನಣ್ಣ, ಮಂಥರ್ ಗೌಡ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು. ವಿಚಾರ ತಿಳಿದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಎಸ್ ರಾಮರಾಜನ್ ಬಿಜೆಪಿ ಕಾರ್ಯಕರ್ತರ ಮನವೊಲಿಸಿದರು. ಎಸ್ಪಿ ಮನವೊಲಿಕೆ ಬಳಿಕ ಕಾರ್ಯಕರ್ತರು ಪ್ರತಿಭಟನೆ ಹಿಂಪಡೆದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!