ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮತ್ತೆ ಮೇಲುಗೈ ಸಾಧಿಸಿದ ವಿದ್ಯಾರ್ಥಿನಿಯರು….

ರಾಜ್ಯದಲ್ಲಿ ಹೆಸರು ನೋಂದಾಯಿಸಿಕೊಂಡ 7,13,862 ವಿದ್ಯಾರ್ಥಿಗಳಲ್ಲಿ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದುಕಲಾವಿಭಾಗ ವಾಣಿಜ್ಯ ವಿಭಾಗ ಹಾಗೂ ವಿಜ್ಞಾನ ವಿಭಾಗ ಈ ಮೂರು ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

*ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಐಎನ್ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್.ಸಂಜನಾ ಬಾಯಿ ಟಾಪರ್ 597 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

*ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್ನ ಕೆನೆರಾ ಪಿಯು ಕಾಲೇಜಿನಿ ವಿದ್ಯಾರ್ಥಿನಿ ದೀಪಾಶ್ರೀ ಎಸ್. 599 ಅಂಕ ಗಳಿಸುವ ಮೂಲಕ ಟಾಪರ್ ಆಗಿದ್ದಾರೆ.
*ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕೊಡಿಬೈಲ್ನ ಎಕ್ಸ್ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ 599 ಅಂಕ ಗಳಿಸುವ ಮೂಲಕ ಮೊದಲ ಸ್ಥಾನ ಗಳಿಸಿದ್ದಾರೆ.

*ಫಲಿತಾಂಶದ ಅನುಸಾರ ಜಿಲ್ಲೆಗಳು ಪಡೆದುಕೊಂಡ ಕ್ರಮಾಂಕಗಳು….

ಉಡುಪಿ ಫಸ್ಟ್- ಯಾದಗಿರಿ ಲಾಸ್ಟ್ಇನ್ನೂ ಫಲಿತಾಂಶವನ್ನು ಲೆಕ್ಕಾಚಾರ ಮಾಡುವುದಾದರೆ, ರಾಜ್ಯದಲ್ಲಿ ಉಡುಪಿ ಜಿಲ್ಲೆಯು 93.90 ಫಲಿತಾಂಶದ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ದಕ್ಷಿಣ ಕನ್ನಡ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳು ಕ್ರಮಾಂಕವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಗಳಿಸಿಕೊಂಡಿವೆ. ಇನ್ನೂ ಕೊನೆಯ ಸ್ಥಾನವನ್ನು ಪಡೆದುಕೊಂಡ ಜಿಲ್ಲೆ ಎಂದರೆ ಯಾದಗಿರಿ. ಜಿಲ್ಲೆಯು ಶೇಕಡ 48.45 ಫಲಿತಾಂಶವನ್ನು ತನ್ನದಾಗಿಸಿಕೊಳ್ಳುವ ಮುಖಾಂತರ ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.
ರಾಜ್ಯದಲ್ಲಿ ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದು, ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇ.53, ವಾಣಿಜ್ಯ ವಿಭಾಗದಲ್ಲಿ ಶೇ.76.07, ಹಾಗೂ ವಿಜ಼್ಞಾನ ವಿಭಾಗದಲ್ಲಿ ಶೇ.82ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಿ ವಿವರಿಸಿದರು.

ಪ್ರತಿವರ್ಷದಂತೆ ಈ ಬಾರಿಯೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗೆ 3,45,694 ಬಾಲಕಿಯರು ಹಾಜರಾಗಿದ್ದರು. ಈ ಪೈಕಿ 2,69,212 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಶೇ. 77.88ರಷ್ಟು ಬಾಲಕಿಯರು ಉತ್ತೀರ್ಣರಾದಂತಾಗಿದೆ. ಪರೀಕ್ಷೆಗೆ 2,92,111 ಬಾಲಕರು ಹಾಜರಾಗಿದ್ದು, ಈ ಪೈಕಿ 1,99,227 ಬಾಲಕರು ಉತ್ತೀರ್ಣರಾಗಿದ್ದಾರೆ.

2 ಹಾಗೂ 3ನೇ ಬಾರಿ ಪರೀಕ್ಷೆ: ಕಳೆದ ವರ್ಷ ಹೋಲಿಸಿದರೆ ಈ ಬಾರಿ ಶೇ.8ರಷ್ಟು ಉತ್ತೀರ್ಣರಾದವರು ಕಡಿಮೆಯಾಗಿದ್ದಾರೆ. ವೆಬ್ ಕಾಸ್ಟ್, ಸಿಸಿಟಿವಿ ಕಣ್ಗಾವಲಿನಿಂದ ಈ ಬಾರಿ ಫಲಿತಾಂಶ ಕಡಿಮೆ ಬಂದಿದೆ ಎಂದು ಹೇಳಲಾಗುತ್ತಿದೆ. ಪಾಸಾಗದ ಆಥವಾ ಹೆಚ್ಚು ಅಂಕ ಬಯಸುವ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ಏ.24ರಿಂದ ಮೇ 8ರವರೆಗೆ, ಪರೀಕ್ಷೆ-3 ಜೂ.6ರಿಂದ ಜೂ. 21ರವರೆಗೆ ನಡೆಯಲಿದೆ. 2 ಹಾಗೂ 3ನೇ ಬಾರಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳುವುದಕ್ಕೆ ಯಾವುದೇ ಪರೀಕ್ಷಾ ಶುಲ್ಕ ಇರುವುದಿಲ್ಲ ಎಂದು ಮಂಡಳಿ ತಿಳಿಸಿದೆ.

ಬಂದಿರುವ ಅಂಕಗಳಲ್ಲಿ ತೃಪ್ತಿ ಇಲ್ಲದೆ ಇರುವವರು ಹಾಗೂ ಹೆಚ್ಚಿನ ಅಂಕಗಳಿಗಾಗಿ ಪ್ರಯತ್ನಪಡುವವರು ಹಾಗೂ ಮರು ಪರೀಕ್ಷೆ ಬರೆಯುವವರೆಗೂ ಸಹ ಸದಾ ಅವಕಾಶವನ್ನ ನೀಡಲಾಗಿದೆ ಎಂದು ಮಂಡಳಿ ತಿಳಿಸಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!