ಕೇಂದ್ರ ಸರ್ಕಾರ ಹೊಸ ಆಧಾರ್ ಆ್ಯಪ್ ಬಿಡುಗಡೆ; ಇನ್ಮುಂದೆ ಭೌತಿಕ ಕಾರ್ಡ್ ಬೇಕಿಲ್ಲ

ನವದೆಹಲಿ: ಕೇಂದ್ರ ಸರ್ಕಾರ ಹೊಸ ಆಧಾರ್ ಆ್ಯಪ್ ಬಿಡುಗಡೆ ಮಾಡಿದೆ. ಇಲ್ಲಿ ಬಳಕೆದಾರರು ತಮ್ಮ ಆಧಾರ್ ಮಾಹಿತಿಯನ್ನು ಯಾವುದೇ ಭೌತಿಕ ಗುರುತಿನ ಚೀಟಿಯ ಅಗತ್ಯವಿಲ್ಲದೆ, ಡಿಜಿಟಲ್ ರೂಪದಲ್ಲಿ ಪರಿಶೀಲಿಸಲು ಅವಕಾಶವಿದೆ.
ಈ ಹೊಸ ಅಪ್ಲಿಕೇಶನ್ ಕುರಿತು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿಪೂರ್ಣ ವೀಡಿಯೋ ಹಂಚಿಕೊಂಡಿದ್ದಾರೆ. ವೀಡಿಯೋದಲ್ಲಿ ಫೇಸ್ ಐಡಿ ದೃಢೀಕರಣ, ಲಾಗಿನ್ ಮಾಡಲು ಕ್ಯೂ ಆರ್ ಕೋಡ್ ಸ್ಕ್ಯಾನ್ ಮತ್ತು ಬಳಕೆದಾರರ ಐಡಿ ಹಂಚಿಕೊಳ್ಳುವಂತಹ ವೈಶಿಷ್ಟ್ಯಗಳನ್ನು ನೋಡಬಹುದು.
ಸದ್ಯ ಆ್ಯಪ್ ಬೀಟಾ ಹಂತದಲ್ಲಿದೆ. ಈ ಆ್ಯಪ್ ಆಧಾರ್ ಪರಿಶೀಲನೆಯನ್ನು ಸರಳಗೊಳಿಸಲಿದೆ. ದುರುಪಯೋಗ ತಡೆಯುತ್ತದೆ. ಮತ್ತು ಬಳಕೆದಾರರ ಗೌಪ್ಯತೆಯನ್ನು ಕಾಪಾಡುತ್ತದೆ. ಮತ್ತೊಂದು ವಿಶೇಷವೆಂದರೆ, ಅಪ್ಲಿಕೇಶನ್ ಬಳಕೆದಾರಸ್ನೇಹಿಯಾಗಿದ್ದು, ಫೇಸ್ ಗುರುತಿನಂತಹ ವೈಶಿಷ್ಟ್ಯ ಹೊಂದಿದೆ. ಇದರಿಂದ ಯಾವುದೇ ಭೌತಿಕ ಪ್ರತಿಯ ಅಗತ್ಯವಿಲ್ಲದೆ ಬಳಕೆದಾರರು ತಮ್ಮ ಆಧಾರ್ ವಿವರಗಳನ್ನು ಸುರಕ್ಷಿತವಾಗಿ ಹಂಚಿಕೊಳ್ಳಬಹುದು. ಇದರಿಂದ ಆಧಾರ್ ಕಾರ್ಡ್ ಅನ್ನು ಎಲ್ಲೆಡೆ ಒಯ್ಯುವುದು ತಪ್ಪುತ್ತದೆ.


ಹೊಸ ಆ್ಯಪ್ ನ ವೈಶಿಷ್ಟ್ಯಗಳು
• ಬಳಕೆದಾರರು ತಮ್ಮ ಒಪ್ಪಿಗೆಯೊಂದಿಗೆ ಅಗತ್ಯ ಡೇಟಾವನ್ನು ಸುರಕ್ಷಿತವಾಗಿ ಹಂಚಿಕೊಳ್ಳಬಹುದು. ಇದು ವೈಯಕ್ತಿಕ ಮಾಹಿತಿಯ ಗೌಪ್ಯತೆಯನ್ನು ಖಚಿತಪಡಿಸುತ್ತದೆ.
• ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಆಧಾರ್ ಪರಿಶೀಲನೆ ಮಾಡಬಹುದು.
• ಮುದ್ರಿತ ಆಧಾರ್ ಪ್ರತಿಗಳನ್ನು ಎಲ್ಲೆಡೆ ಕೊಂಡೊಯ್ಯುವ ಅವಶ್ಯಕತೆ ಇರುವುದಿಲ್ಲ.
• ಭದ್ರತೆ ಖಚಿತತೆಗೆ ಫೇಸ್ ಐಡಿ ದೃಢೀಕರಣ
• ಬಳಕೆದಾರರು ತಮ್ಮ ಭೌತಿಕ ಆಧಾರ್ ಪ್ರತಿಗಳನ್ನು ಸಲ್ಲಿಸುವ ಅಗತ್ಯವಿಲ್ಲದೆ ಡಿಜಿಟಲ್ ಮೂಲಕ ಪರಿಶೀಲಿಸಬಹುದು.
• ಫೇಸ್ ಐಡಿ ದೃಢೀಕರಣವು ಶೇ 100ರಷ್ಟು ಡಿಜಿಟಲ್ ಸುರಕ್ಷತೆಯನ್ನು ಖಚಿತಪಡಿಸುತ್ತದೆ.
• ಡೇಟಾ ಸೋರಿಕೆ ಮತ್ತು ದುರುಪಯೋಗ ಆಗದಂತೆ, ನಕಲಾಗದಂತೆ ತಡೆಯುತ್ತದೆ.
• ತ್ವರಿತ ಮತ್ತು ಸುಲಭವಾದ ಪರಿಶೀಲನಾ ಪ್ರಕ್ರಿಯೆಯನ್ನು ಸಕ್ರಿಯಗೊಳಿಸುತ್ತದೆ.
ಸದ್ಯ ಆಯ್ದ ಗುಂಪುಗಳ ಬಳಕೆದಾರರಿಗೆ ಆ್ಯಪ್ ಲಭ್ಯವಾಗುವಂತೆ ಮಾಡಲಾಗಿದೆ. ಇದರಲ್ಲಿ ಆಧಾರ್ ಸಂವಾದ್ ಕಾರ್ಯಕ್ರಮದ ಎಲ್ಲಾ ನೋಂದಾಯಿತರು ಸೇರಿದ್ದಾರೆ. ಯುಐಡಿಎಐ ಪ್ರಕಾರ, ಬೀಟಾ ಆವೃತ್ತಿಯು ಅಪ್ಲಿಕೇಶನ್ನ ಅಂತಿಮ ಬಿಡುಗಡೆಯ ಫೀಡ್ಬ್ಯಾಕ್ ಸಂಗ್ರಹಿಸಿ, ಅದನ್ನು ಮತ್ತಷ್ಟು ಉತ್ತಮಗೊಳಿಸಲಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!