Rcb ಗೆ ಗೆಲುವು ತಂದು ಕೊಡುತ್ತ Green Jersey?

ಜೈಪುರ್: ರಜತ್ ಪಾಟಿದಾರ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು (ಏ.13) ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಲಿದೆ.


ಜೈಪುರದ ಸವಾಯ್ ಮಾನ್ಸಿಂಗ್ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 3:30ಕ್ಕೆ ಪಂದ್ಯ ಆರಂಭವಾಗಲಿದೆ. ಆರ್ಸಿಬಿ ಆಟಗಾರರು ತಮ್ಮ ಕೆಂಪು ಮತ್ತು ಕಪ್ಪು ಮಿಶ್ರಿತ ಜೆರ್ಸಿ ಬದಲಿಗೆ ಹಸಿರು ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. 2011ರ ಐಪಿಎಲ್ನಿಂದಲೂ ಪ್ರತಿ ಆವೃತ್ತಿಯ ಒಂದು ಪಂದ್ಯದಲ್ಲಿ ಆರ್ಸಿಬಿ ಗ್ರೀನ್ ಜೆರ್ಸಿ ತೊಟ್ಟು ಪಂದ್ಯವನ್ನಾಡಲು ಆರಂಭಿಸಿತು. ಅಂದಿನಿಂದ ಆರ್ಸಿಬಿ ಪ್ರತಿ ವರ್ಷ ಐಪಿಎಲ್ನಲ್ಲಿ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ತೊಟ್ಟು ಆಡುತ್ತಿದೆ. ನಮ್ಮ ಸುತ್ತಲಿನ ಹಸಿರು ಪರಿಸರವನ್ನು ಸಂರಕ್ಷಿಸುವಂತೆ ಜಾಗೃತಿಗೊಳಿಸುವ ಉದ್ದೇಶವೂ ಇದ್ದಾಗಿದೆ.


ಆರ್ಸಿಬಿ ಸೋಲೇ ಹೆಚ್ಚು:

2011ರಲ್ಲಿ ಗೆಲುವು ಸಾಧಿಸಿದ್ದ ಆರ್ಸಿಬಿ 2012, 2013, 2014ರಲ್ಲಿ ಸೋಲು ಕಂಡಿತು. 2015ರಲ್ಲಿ ಯಾವುದೇ ಫಲಿತಾಂಶವಿಲ್ಲದೇ ಪಂದ್ಯ ರದ್ದಾಯಿತು. 2016ರಲ್ಲಿ ಗೆಲುವು ಸಾಧಿಸಿತ್ತು. ನಂತರ 2017, 2018, 2019, 2020ರಲ್ಲಿ ಸೋತಿತ್ತು. 2021 ನೀಲಿ ಜೆರ್ಸಿ ಧರಿಸಿ ಕಣಕ್ಕಿಳಿದಿದ್ದರೂ ಸೋಲು ಕಂಡಿತ್ತು. 2023ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ತವರು ಕ್ರೀಡಾಂಗಣದಲ್ಲೇ ಗೆಲುವು ಸಾಧಿಸಿತ್ತು. ಆದ್ರೆ ಕಳೆದ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ರೈಡರ್ಸ್ ವಿರುದ್ಧ ಕೇವಲ 1 ರನ್ಗಳಿಂದ ವಿರೋಚಿತ ಸೋಲು ಕಂಡಿತ್ತು. ಇದುವರೆಗೆ 14 ಪಂದ್ಯಗಳ ಪೈಕಿ 9ರಲ್ಲಿ ಸೋಲು ಕಂಡಿದ್ದು, 4ರಲ್ಲಿ ಗೆಲುವು ಸಾಧಿಸಿದೆ. 1 ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಇಂದಿನ ಪಂದ್ಯದಲ್ಲಿ ಏನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

ಪುಟಿದೇಳುತ್ತಾ ಆರ್ಸಿಬಿ?

ಪ್ರಸಕ್ತ ಆವೃತ್ತಿಯಲ್ಲಿ ಆಡಿರುವ 5 ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ, ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಕುಸಿದಿದೆ. ಅಲ್ಲದೇ ಕಳೆದ ಎರಡೂ ಪಂದ್ಯಗಳಲ್ಲಿ ತವರಿನಲ್ಲೇ ಸೋತಿರುವುದು ಬೇಸರದ ಸಂಗತಿ. ಇಂದಿನ ಪಂದ್ಯದಲ್ಲಿ ಆರ್ಸಿಬಿ ಪುಟಿದೇಳುತ್ತಾ ಎಂಬುದು ಪ್ರಶ್ನೆಯಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!