5 ಬಾಲಕಿಯನ್ನು ಅಪಹರಿಸಿ ಕೊ*: ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇ*ಟಿಗೆ ಬಿಹಾರ ಮೂಲದ ಆರೋಪಿ ಬ*!

ಹುಬ್ಬಳ್ಳಿ :- ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ಕೃತ್ಯ ಎಸಗಿದ ಬಿಹಾರ ಮೂಲದ ರಿತೇಶ ಕುಮಾರ್ (35) ಎಂಬಾತ ಭಾನುವಾರ ಸಂಜೆ ನಗರದ ತಾರಿ ಹಾಳ ಸೇತುವೆ ಬಳಿ ಪೊಲೀಸರ ಗುಂಡೇಟಿಗೆ ಮೃತಪಟ್ಟಿದ್ದಾನೆ.
ತಾರಿಹಾಳ ಬಳಿ ಸ್ಥಳ ಪರಿ ಶೀಲನೆಗೆ ಕರೆದೊಯ್ದಾಗ ಈತ ಪೊಲೀಸ್ ವಾಹನದ ಮೇಲೆ ಕಲ್ಲು ತೂರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಅಶೋಕ ನಗರದ ಪಿಎಸ್ಐ ಅನ್ನಪೂರ್ಣ ಅವರು ಗಾಳಿ ಯಲ್ಲಿ ಗುಂಡು ಹಾರಿಸಿದರೂ ಆರೋಪಿ ತಪ್ಪಿಸಿಕೊಂಡು ಓಡಲು ಯತ್ನಿಸಿದ. ಈ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದಾಗ ಆತನ ಕಾಲು ಹಾಗೂ ಬೆನ್ನಿಗೆ ಗುಂಡು ತಗುಲಿದೆ ಎಂದು ಘಟನೆ ಕುರಿತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸುದ್ದಿ ಪೊಲೀಸರ ಗುಂಡೇಟಿಗೆ ಬಲಿಯಾದ ಕಾಮುಕ.


ಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಗಾಯಗೊಂಡಿದ್ದ ಅವನನ್ನು ತಕ್ಷಣ ಕೆಎಂಸಿಆರ್ಐ ಆಸ್ಪತ್ರೆಗೆ ತರಲಾಯಿತು. ಅಷ್ಟರಲ್ಲಿ ಮೃತಪಟ್ಟಿದ್ದ ಪೊಲೀಸ್ ಸಿಬ್ಬಂದಿ ಯಶವಂತ ಮೊರಬ ಮತ್ತು ವೀರೇಶ ಅವರೂ ಘಟನೆ ಯಲ್ಲಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯು ತ್ತಿದ್ದಾರೆ ಎಂದು ಅವರು ವಿವರಿಸಿದರು.
ವಿವರ: ಭಾನುವಾರ ಬೆಳಿಗ್ಗೆ 10.40ರ ಸುಮಾರಿಗೆ ವಿಜಯನಗರದಲ್ಲಿ ಐದು ವರ್ಷದ ಮಗು ನಾಪತ್ತೆಯಾದ ಕುರಿತು ಪ್ರಕರಣ ದಾಖಲಾಗಿತ್ತು. ನಂತರ ಮಗು ನಾಪತ್ತೆಯಾದ ಸ್ಥಳದ ಎದುರಿಗಿರುವ ಶೆಡ್ನಲ್ಲಿ ಮೃತದೇಹ ಪತ್ತೆಯಾಗಿತ್ತು ಎಂದರು. ಸಿಸಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ನಡೆಸಿ ದಾಗ ಕೃತ್ಯದ ಕುರಿತು ಆತ ಮಾಹಿತಿ ನೀಡಿದ್ದ. ಆದರೆ, ತನ್ನ ವಿಳಾಸ ಹಾಗೂ ಗುರುತಿನ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ನೀಡಿರಲಿಲ್ಲ ಎಂದು ಹೇಳಿದರು.
ಬಿಹಾರ ಮೂಲದ ಅವನು ವಿವಿಧ ಊರುಗಳಲ್ಲಿ ಕೆಲಸ ಮಾಡಿದ್ದ. ಹುಬ್ಬಳ್ಳಿ ಯಲ್ಲೂ ಕೆಲಸ ಮಾಡುತ್ತಾ ತಾರಿಹಾಳ ಸೇತುವೆ ಬಳಿಯ ಹಳೇ ಶೆಡ್ನಲ್ಲಿ ವಾಸಿಸುತ್ತಿರುವುದಾಗಿ ತಿಳಿಸಿದ್ದ. ಅವನ ಜೊತೆ ಯಾರಿದ್ದಾರೆಂದು ತಿಳಿದುಕೊ ಳ್ಳಲು, ಅವನನ್ನು ಸ್ಥಳಕ್ಕೆ ಕರೆದುಕೊಂಡು ಹೋದಾಗ ಎನ್ ಕೌಂಟರ್ ನಡೆದಿದೆ ಎಂದರು. ಬಹಾರ ಪಾಟ್ನಾದ ನಿವಾಸಿ ಯಾದ ಆರೋಪಿ ರಿತೀಶ ಕುಮಾರ್ ಭಾನುವಾರ ಬೆಳಿಗ್ಗೆ 10.40ರ ಸುಮಾರು ವಿಜಯನಗರದ ವಾಸವಾಗಿದ್ದ ಬಾಲಕಿಗೆ ತಿಂಡಿ ತಿನಿಸುಗಳನ್ನು ನೀಡುವುದಾಗಿ ಪುಸಲಾಯಿಸಿ ಕರೆದಿದ್ದಾನೆ. ನಂತರ ಅವಳನ್ನು ಎತ್ತಿಹಾಕಿಕೊಂಡು ಎದುರಿನ ಮನೆಯಲ್ಲಿರುವ ಶೆಡ್ಗೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದಾನೆ. ಆಕೆ ಕೂಗಿ ಕೊಂಡಾಗ ಕೊಲೆ ಮಾಡಿ ಪರಾರಿಯಾಗಿ ದ್ದಾನೆ. ಬಾಲಕಿಯ ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಆತನನ್ನು ಹಿಡಿದು ಅಶೋಕ ನಗರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಶಶಿಕುಮಾರ್ ತಿಳಿಸಿದರು.


ಮಗುವಿನ ಮೇಲೆ ಅತ್ಯಾಚಾರವಾಗಿ ರುವ ಬಗ್ಗೆ ಮಾಹಿತಿಯಿಲ್ಲ. ವೈದ್ಯಕೀಯ ವರದಿ ಬಂದ ನಂತರ ತಿಳಿಯಲಿದೆ. ಪೋಕ್ಸ್ ಅಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದರು.
ಬಾಲಕಿಯನ್ನು ಅಪಹರಿಸಿ ಕೊಲೆಗೈದ ಘಟನೆ ವಿರುದ್ಧ ಭಾನುವಾರ ಸಂಜೆ ವಿವಿಧ ಸಂಘಟನೆಗಳಿಂದ ಹುಬ್ಬಳ್ಳಿ ಕೆಎಂಸಿ ಎದುರು ಪ್ರತಿಭಟನೆ ನಡೆಯಿತು. ಆರೋಪಿ ಎನ್ಕೌಂಟರ್ನಿಂದ ಮೃತಪಟ್ಟ ವಿಷಯ ತಿಳಿದು ಸಾರ್ವಜನಿಕರು ಪ್ರತಿಭಟನೆ ಕೈಬಿಟ್ಟು ಕೆಎಂಸಿ ಆಸತ್ರೆ ಎದುರು ಸಂಭ್ರಮಿಸಿದರು. ಪೊಲೀಸ್ ಕಮಿಷನರ್ ಶಶಿಕುಮಾರ್
ಅವರಿಗೆ ಜೈಕಾರ ಹಾಕಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!