ಅರಮನೆ ನಗರಿಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಮರಗಳ ಮಾರಣಹೋಮ.

ಮೈಸೂರು :-  ರಸ್ತೆ ಅಗಲೀಕರಣಕ್ಕಾಗಿ ಮೈಸೂರಿನ ಹೈದರಾಲಿ ರಸ್ತೆಯ ಕಾಳಿಕಾಂಬ ದೇವ ಸ್ಥಾನದಿಂದ ಎಸ್ ಪಿ ಕಚೇರಿ ವೃತ್ತದವರೆಗೆ ಹಸಿರಿನಿಂದ ಕಂಗೊಳಿಸುತ್ತಿದ್ದ 40 ಮರ ಗಳನ್ನು ಧರಾಶಾಹಿಗೊಳಿಸಲಾಗಿದೆ. ಮರ ಬೆಳೆಸಿ ಪರಿಸರ ಉಳಿಸಿ ಎಂಬ ಸಂದೇಶ ಸಾರುವ ಅರಣ್ಯ ಇಲಾಖೆಯೇ ಮರಗಳ ಹನನಕ್ಕೆ ಒಪ್ಪಿಗೆ ಮುದ್ರೆ ಒತ್ತಿದೆ. ನಗರದ ಮಹದೇವಪುರ ರಸ್ತೆಯನ್ನು ಹೈದರಾಲಿ ರಸ್ತೆಯ ಕಾಳಿಕಾಂಬ ದೇವ ಸ್ಥಾನವರೆಗೆ ಈಗಾಗಲೇ ಜೋಡಿ ರಸ್ತೆ ಯಾಗಿ ನಿರ್ಮಾಣ ಮಾಡಲಾಗಿದೆ.
ಆದರೆ ಈಗ ಕಾಳಿಕಾಂಬ ದೇವಸ್ಥಾನ ದಿಂದ ಎಸ್‌ಪಿ ಕಚೇರಿ ವೃತ್ತದವರೆಗೆ 100 ಆಡಿಯ ಜೋಡಿ ರಸ್ತೆ ನಿರ್ಮಿಸಲು ಮೈಸೂರು ನಗರ ಪಾಲಿಕೆ ಯೋಜನೆ ರೂಪಿಸಿದೆ. ಈ ಹಿನ್ನೆಲೆ ಕಾಳಿಕಾಂಬ ದೇವಸ್ಥಾನ ದಿಂದ ಎಸ್‌ಪಿ ಕಚೇರಿ ವೃತ್ತದವರೆಗೆ ಇರುವ ಪೆಲ್ಲೋಪೋರಮ್ ಎಂಬ 40 ಮರ ಗಳನ್ನು ಇಂದು ಮುಂಜಾನೆ ಉರುಳಿಸ ಲಾಗಿದೆ. ಮರಗಳನ್ನು ಕತ್ತರಿಸಿದ ನಂತರ ಅವುಗಳನ್ನು ತೆರವುಗೊಳಿಸಿ ಮಾರಾಟ ಮಾಡಿಕೊಳ್ಳಲು ಅರಣ್ಯ ಇಲಾಖೆ ಸೈಯದ್ ಮೊಹಮ್ಮದ್ ಎಂಬಾತನಿಗೆ ಗುತ್ತಿಗೆ ನೀಡಿದೆ.

ರಸ್ತೆ ಅಗಲೀಕರಣ ಮಾಡಲು ಇದೇನು ಬ್ಲ್ಯಾಕ್‌ ಸ್ಪಾಟ್ ಅಲ್ಲ
ಅರಣ್ಯ ಇಲಾಖೆಗೆ 2.90 ಲಕ್ಷ ರೂಪಾಯಿ ಪಾವತಿ ಮಾಡಿರುವ ಸೈಯದ್ ಮೊಹ ಮ್ಮದ್ ಇಂದು ಮುಂಜಾನೆ ವೇಳೆಗೆ 40 ಮರಗಳ ಬುಡಕ್ಕೆ ಕೊಡಲಿ ಪೆಟ್ಟು ನೀಡಿದ್ದಾನೆ. ಮರ ಕತ್ತರಿಸುವ ಯಂತ್ರ ದಿಂದ ಕೇವಲ ಅರ್ಧ ಗಂಟೆಯಲ್ಲಿ ಎಲ್ಲಾ ಮರಗಳನ್ನು ಉರುಳಿಸಿದ್ದಾನೆ. ಮರ ಕತ್ತರಿಸುವಾಗ ಪರಿಸರವಾದಿ ಗಳು ಬಂದು ಅಡ್ಡಿ ಪಡಿಸುತ್ತಾರೆ ಎಂಬ ಮುಂದಾಲೋಚನೆಯಿಂದ ಮುಂಜಾನೆಯೇ ಎಲ್ಲಾ ಮರಗಳ ಬುಡಕ್ಕೆ ಕೊಡಲಿ ಪೆಟ್ಟು ನೀಡಲಾಗಿದೆ. ತರುವಾಯ ಕೆಳಗೆ ಬಿದ್ದ ಮರಗಳ ರೆಂಬೆ ಕೊಂಬೆಗಳನ್ನು ಹಂತ ಹಂತವಾಗಿ ಕತ್ತರಿಸಲಾಗಿದೆ.
ಸುಮಾರು 50 ವರ್ಷಗಳ ಇತಿಹಾಸ ವಿರುವ ಈ ಮರಗಳನ್ನು ಇಂದು ಕ್ಷಣ ಮಾತ್ರದಲ್ಲಿ ಕತ್ತರಿಸಲಾಗಿದೆ. ಒಂದು ಮರ ಬೆಳೆಯಲು ಹತ್ತಾರು ವರ್ಷಗಳು ಬೇಕು. ಆದರೆ ಇಂದು ಮರ ಕತ್ತರಿಸುವ ಯಂತ್ರ ದಿಂದ ಕ್ಷಣ ಮಾತ್ರದಲ್ಲಿ 40 ವಕ್ಷಗಳನ್ನು ಹೊಡೆದು ಉರುಳಿಸಲಾಯಿತು. ಮತ್ತೆ 5 ಮರಗಳನ್ನು ಕತ್ತರಿಸಲು ಅರಣ್ಯ ಇಲಾಖೆ ಸೂಚನೆ ನೀಡಿದೆ. ಆದರೆ 5 ಮರಗಳು ಎಲ್ಲಿವೆ ಎಂಬ ಬಗ್ಗೆ ಇನ್ನು ಮಾಹಿತಿ ನೀಡಿಲ್ಲ ಎಂದು ಸೈಯದ್ ಮೊಹ ಮ್ಮದ್ ‘ಮೈಸೂರು ಮಿತ್ರ’ಗೆ ತಿಳಿಸಿದರು.


ಬೇಸಿಗೆ ಬಿಸಿಲಿನಲ್ಲಿ ಸುಸ್ತಾದಾಗ ಈ ಮರಗಳ ಕೆಳಗೆ ನಿಲ್ಲುತ್ತಿದ್ದ ಜನರು ದಣಿ ವಾರಿಸಿಕೊಳ್ಳುತ್ತಿದ್ದರು. ಈ ಮರಗಳ ತಂಪಾದ ವಾತಾವರಣ ಜನರ ಮನಸಿಗೆ ಮುದ ನೀಡುತ್ತಿತ್ತು. ಆದರೆ ಈಗ ರಸ್ತೆಗೆ ಹಸಿರು ಹೊದಿಕೆ ಹೊದಿಸಿದ್ದ ಮರಗಳ ಮಾರಣ ಹೋಮ ನಡೆದಿದೆ. ಮರಗಳಿ ಲ್ಲದೆ ಈಗ ಇಡೀ ರಸ್ತೆ ಬೋಳು ಬೋಳಾಗಿದೆ. ಒಂದು ಮರ ಕತ್ತರಿಸಿದರೆ 10 ಸಸಿ ನೆಡಬೇಕು. ಅಲ್ಲದೆ ಮರ ಕತ್ತರಿಸಿದವರೆ ಆ ಸಸಿಯನ್ನು 5 ವರ್ಷ ನಿರ್ವಹಣೆ ಮಾಡಬೇಕು. ಇದಕ್ಕಾಗಿ ಠೇವಣಿ ಹಣ ಇಡಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಪೀಠ ಹೇಳಿದೆ. ಅದರಂತೆ ನಗರ ಪಾಲಿಕೆ ಈಗ ಠೇವಣಿ ಹಣ ಇಟ್ಟು ಗಿಡ ನೆಡಲು ಮುಂದಾಗಿದೆ.
ಮೈಸೂರಿನಲ್ಲಿ ಈಗಾಗಲೇ ಸಾವಿರಾರು ಮರಗಳನ್ನು ಕಡಿದಿದ್ದಾರೆ. ರಾಷ್ಟ್ರೀಯ ಹಸಿರು ನ್ಯಾಯಪೀಠದ ಆದೇಶ ಪಾಲಿಸಿದ್ದರೆ ಇಂದು ಲಕ್ಷಾಂತರ ಮರಗಳು ಬೆಳೆಯಬೇಕಿತ್ತು. ಆದರೆ ಮರ ಕಡಿದರೆ ಸಸಿ ನೆಡಬೇಕೆಂಬ ಕಾನೂನು ನಿಯಮವನ್ನು ಅರಣ್ಯ ಇಲಾಖೆ ಈ ತನಕ ಪಾಲಿಸಿರುವ ನಿದರ್ಶನವಿಲ್ಲ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು