ಮೈಸೂರಿನಲ್ಲಿ 1.52 ಕೋಟಿ ರೂ. ಆನ್ ಲೈನ್ ಮೂಲಕ ವಂಚನೆ: ದೂರು ದಾಖಲು.

ಮೈಸೂರು: ವಂಚಕರು ನಿವೃತ್ತ ಅಧಿಕಾರಿ ಹಾಗೂ ಇಂಜಿನಿಯರ್ ಇಬ್ಬರಿಗೆ ಆನ್ ಲೈನ್ ಮೂಲಕ ವಂಚಿಸಿ 1.52 ಕೋಟಿ ಪಂಗನಾಮ ಹಾಕಿರುವ ಘಟನ ಮೈಸೂರಿನಲ್ಲಿ ನಡೆದಿದೆ.
ಗಾಯತ್ರಿಪುರಂ ನಿವಾಸಿ ಹಾಗೂ ಕನಕದಾಸನಗರದ ನಿವಾಸಿಗಳಿಗೆ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಎಂದು ಹೇಳಿ ಖದೀಮರು 1.52 ಕೋಟಿ ರೂ ವಂಚನೆ ಮಾಡಿದ್ದಾರೆ. ಹೆಚ್ಚಿನ ಹಣದ ಆಸೆಗೆ ಬಿದ್ದ ನಿವೃತ್ತ ಅಧಿಕಾರಿ ಹಾಗೂ ಇಂಜಿನಿಯರ್ ಇಬ್ಬರು ಮೋಸದ ಜಾಲಕ್ಕೆ ಸಿಲುಕಿ ಹಣ ಕಳೆದುಕೊಂಡಿದ್ದಾರೆ. ವಂಚಕರು ಇನ್ ಸ್ಟಾಗ್ರಾಂ ಮೂಲಕ ಷೇರು ಮಾರುಕಟ್ಟೆಯ ವಿಡಿಯೋ ಪ್ರದರ್ಶನ ಮಾಡಿದ್ದು, ನಿವೃತ್ತ ಅಧಿಕಾರಿ ಹಾಗೂ ಇಂಜಿನಿಯರ್ ವಿಡಿಯೋ ನಂಬಿ ಮೆಸೇಜ್ ಮಾಡಿದಾಗ ಆಪ್ಸ್ ಟಾಕ್ಸ್ ವ್ಯಾಲ್ಯೂ ವಾಟ್ಸಾಪ್ ಗ್ರೂಪಿಗೆ ಜಾಯಿನ್ ಮಾಡಿದ್ದಾರೆ. ಆರಂಭದಲ್ಲಿ ಲಾಭ ತೋರಿಸಿದ ವಂಚಕರು ನಂತರ ಹಂತ- ಹಂತವಾಗಿ ಹಣ ಪಡೆದು ವಂಚನೆ ಮಾಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಪೊಲೀಸ್ ಅಂತ ಹೇಳಿ 11.80 ಲಕ್ಷ ರೂ. ಹಣ ಖಾತೆಗೆ ಹಾಕಿಸಿಕೊಂಡು ವಂಚನೆ ಮಾಡಲಾಗಿದೆ. ಮುಂಬೈ ಪೊಲೀಸ್ ಅಂತ ನಿವೃತ್ತ ಅಧಿಕಾರಿಗೆ ಕರೆ ಮಾಡಿದ ವಂಚಕರು ಕೆಲವು ಅಪರಾಧ ಕೃತ್ಯದಲ್ಲಿ ನೀವು ಭಾಗಿಯಾಗಿದ್ದೀರಿ. ನಿಮ್ಮ ಖಾತೆಗಳನ್ನ ಸೀಜ್ ಮಾಡಲಾಗುವುದು ಎಂದು ಎಂದು ಬೆದರಿಕೆ ಹಾಕಿ ಹಣ ಹಾಕಿಸಿಕೊಂಡು ವಂಚಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಸೈಬರ್ ಕ್ರೈಂ ಠಾಣೆಯಲ್ಲಿ ದೂರುಗಳು ದಾಖಲಾಗಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!