ಮೈಸೂರಿನಲ್ಲಿ 1.52 ಕೋಟಿ ರೂ. ಆನ್ ಲೈನ್ ಮೂಲಕ ವಂಚನೆ: ದೂರು ದಾಖಲು.

ಮೈಸೂರು: ವಂಚಕರು ನಿವೃತ್ತ ಅಧಿಕಾರಿ ಹಾಗೂ ಇಂಜಿನಿಯರ್ ಇಬ್ಬರಿಗೆ ಆನ್ ಲೈನ್ ಮೂಲಕ ವಂಚಿಸಿ 1.52 ಕೋಟಿ ಪಂಗನಾಮ ಹಾಕಿರುವ ಘಟನ ಮೈಸೂರಿನಲ್ಲಿ ನಡೆದಿದೆ.
ಗಾಯತ್ರಿಪುರಂ ನಿವಾಸಿ ಹಾಗೂ ಕನಕದಾಸನಗರದ ನಿವಾಸಿಗಳಿಗೆ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಎಂದು ಹೇಳಿ ಖದೀಮರು 1.52 ಕೋಟಿ ರೂ ವಂಚನೆ ಮಾಡಿದ್ದಾರೆ. ಹೆಚ್ಚಿನ ಹಣದ ಆಸೆಗೆ ಬಿದ್ದ ನಿವೃತ್ತ ಅಧಿಕಾರಿ ಹಾಗೂ ಇಂಜಿನಿಯರ್ ಇಬ್ಬರು ಮೋಸದ ಜಾಲಕ್ಕೆ ಸಿಲುಕಿ ಹಣ ಕಳೆದುಕೊಂಡಿದ್ದಾರೆ. ವಂಚಕರು ಇನ್ ಸ್ಟಾಗ್ರಾಂ ಮೂಲಕ ಷೇರು ಮಾರುಕಟ್ಟೆಯ ವಿಡಿಯೋ ಪ್ರದರ್ಶನ ಮಾಡಿದ್ದು, ನಿವೃತ್ತ ಅಧಿಕಾರಿ ಹಾಗೂ ಇಂಜಿನಿಯರ್ ವಿಡಿಯೋ ನಂಬಿ ಮೆಸೇಜ್ ಮಾಡಿದಾಗ ಆಪ್ಸ್ ಟಾಕ್ಸ್ ವ್ಯಾಲ್ಯೂ ವಾಟ್ಸಾಪ್ ಗ್ರೂಪಿಗೆ ಜಾಯಿನ್ ಮಾಡಿದ್ದಾರೆ. ಆರಂಭದಲ್ಲಿ ಲಾಭ ತೋರಿಸಿದ ವಂಚಕರು ನಂತರ ಹಂತ- ಹಂತವಾಗಿ ಹಣ ಪಡೆದು ವಂಚನೆ ಮಾಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಪೊಲೀಸ್ ಅಂತ ಹೇಳಿ 11.80 ಲಕ್ಷ ರೂ. ಹಣ ಖಾತೆಗೆ ಹಾಕಿಸಿಕೊಂಡು ವಂಚನೆ ಮಾಡಲಾಗಿದೆ. ಮುಂಬೈ ಪೊಲೀಸ್ ಅಂತ ನಿವೃತ್ತ ಅಧಿಕಾರಿಗೆ ಕರೆ ಮಾಡಿದ ವಂಚಕರು ಕೆಲವು ಅಪರಾಧ ಕೃತ್ಯದಲ್ಲಿ ನೀವು ಭಾಗಿಯಾಗಿದ್ದೀರಿ. ನಿಮ್ಮ ಖಾತೆಗಳನ್ನ ಸೀಜ್ ಮಾಡಲಾಗುವುದು ಎಂದು ಎಂದು ಬೆದರಿಕೆ ಹಾಕಿ ಹಣ ಹಾಕಿಸಿಕೊಂಡು ವಂಚಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಸೈಬರ್ ಕ್ರೈಂ ಠಾಣೆಯಲ್ಲಿ ದೂರುಗಳು ದಾಖಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!