‘ಹಿಂದೂ ಹಬ್ಬಗಳಿಗೆ ಆಪ್ಷನಲ್ ರಜೆ, ಅಂಬೇಡ್ಕರ್ ಜಯಂತಿಗೆ ಮಾತ್ರ ಕಡ್ಡಾಯ ರಜೆ,ಯಾಕೆ?’- ಅನುರಾಧಾ ತಿವಾರಿ ಪ್ರಶ್ನೆ?

ಬೆಂಗಳೂರು: ಶಿಕ್ಷಣ ಹಾಗೂ ಉದ್ಯೋಗಗಳಲ್ಲಿ ನೀಡಲಾಗಿರುವ ಮೀಸಲಾತಿಗಳು, ದಲಿತರು ಹಾಗೂ ಹಿಂದುಳಿದ ಜಾತಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಸೌಲಭ್ಯಗಳ ವಿರುದ್ಧ ಟ್ವಿಟರ್ ನಲ್ಲಿ ಆಗಾಗ್ಗೆ ಕಿಡಿಕಾರುವ ಬೆಂಗಳೂರಿನ ಖಾಸಗಿ ಕಂಪನಿಯ ಮಾಜಿ ಉದ್ಯೋಗಿ ಅನುರಾಧಾ ತಿವಾರಿಯವರು ಮತ್ತೊಂದು ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ.ಇತ್ತೀಚೆಗೆ ಕೇಂದ್ರ ಸರ್ಕಾರ ಅಂಬೇಡ್ಕರ್ ಜನ್ಮದಿನವನ್ನು ಕಡ್ಡಾಯ ಸಾರ್ವತ್ರಿಕ ರಜೆಯೆಂದು ಘೋಷಣೆ ಮಾಡಿರುವುದನ್ನು ಪ್ರಶ್ನೆ ಮಾಡಿರುವ ಅವರು, ಶ್ರೀರಾಮ, ಕೃಷ್ಣ, ಹನುಮ ಹುಟ್ಟಿದ ದಿನಗಳಿಗೆ ಕಡ್ಡಾಯ ರಜೆಯಿಲ್ಲ. ಆದರೆ, ವೋಟ್ ಬ್ಯಾಂಕ್ ಜನನಾಯಕನ ಹುಟ್ಟುಹಬ್ಬಕ್ಕೆ ಮಾತ್ರ ಸಾರ್ವತ್ರಿಕ ಹಾಗೂ ಕಡ್ಡಾಯ ರಜೆ ಘೋಷಿಸಲಾಗಿದೆ ಎಂದು ಆಕ್ಷೇಪಿಸಿದ್ದಾರೆ.


ಕೇಂದ್ರ ಸರ್ಕಾರದ ಆದೇಶವೇನು?
ಮಾ. 28ರಂದು ಆದೇಶ ಹೊರಡಿಸಿದ್ದ ಕೇಂದ್ರ ಸರ್ಕಾರ, ಪ್ರತಿ ವರ್ಷ ಏ. 14ರಂದು ಸ್ಮರಿಸುವ ಅಂಬೇಡ್ಕರ್ ಜನ್ಮದಿನವನ್ನು ಸಾರ್ವತ್ರಿಕ ರಜೆಯನ್ನಾಗಿ ಘೋಷಿಸಿತ್ತು. ಅಂದರೆ, ಅದುವರೆಗೆ ಅದು ಸಾರ್ವತ್ರಿಕ ರಜೆಯಾಗಿರಲಿಲ್ಲ. ಅಂದರೆ, ಸರ್ಕಾರಿ ಕಚೇರಿಗಳಷ್ಟೇ ರಜೆ ಮೀಸಲಾಗಿರುತ್ತಿತ್ತು. ಇದೀಗ ಕೇಂದ್ರ ಸರ್ಕಾರದ ಆದೇಶದ ತರುವಾಯ ಅಂಬೇಡ್ಕರ್ ಜಯಂತಿಯನ್ನು ಖಾಸಗಿ ಕಂಪನಿಗಳಲ್ಲೂ ಆಚರಿಸಿ ಅಂದು ಕಡ್ಡಾಯ ರಜೆ ಘೋಷಿಸಬೇಕಿದೆ. ಈ ಆದೇಶದ ವಿರುದ್ಧ ಅನುರಾಧಾ ತಿವಾರಿ ಕಿಡಿಕಾರಿದ್ದಾರೆ. “ರಾಮನವಮಿಯಂದು ಸಾರ್ವತ್ರಿಕ ರಜೆಯಿಲ್ಲ. ಹೋಳಿಗೆ ಸಾರ್ವತ್ರಿಕ ರಜೆಯಿಲ್ಲ. ಜನ್ಮಾಷ್ಟಮಿಯಂದು ಸಾರ್ವತ್ರಿಕ ರಜೆಯಿಲ್ಲ, ಮಹಾ ಶಿವರಾತ್ರಿಗೆ ಸಾರ್ವತ್ರಿಕ ರಜೆಯಿಲ್ಲ. ಆದರೆ, ಅಂಬೇಡ್ಕರ್ ಜಯಂತಿಗೆ ಮಾತ್ರ ಸಾರ್ವತ್ರಿಕ ರಜೆ ನೀಡಲಾಗಿದೆ. ನೀವು ಹಿಂದೂಗಳಾಗಿದ್ದರೆ ನಿಮ್ಮ ಬಹುತೇಕ ಹಬ್ಬಗಳಿಗೆ ಸಾರ್ವತ್ರಿಕ ರಜೆಯಿರುವುದಿಲ್ಲ. ಆದರೆ, ನೀವು ವೋಟ್ ಬ್ಯಾಂಕ್ ಆಗಿದ್ದರೆ ನಿಮ್ಮ ಜನನಾಯಕನ ಜನ್ಮದಿನವನ್ನು ಸಾರ್ವತ್ರಿಕ ಕಡ್ಡಾಯ ರಜೆ ಎಂದು ಘೋಷಿಸಲಾಗುತ್ತದೆ‘’ ಎಂದು ಹೇಳಿದ್ದಾರೆ. ಇದಕ್ಕೆ ಹಲವಾರು ಮಂದಿ ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ತಿವಾರಿಯವರ ಪೋಸ್ಟ್ ಗೆ ಕೆಲವರು ಬೆಂಬಲ ಸೂಚಿಸಿದ್ದಾರೆ. ಭಾರತೀಯ್ ನಿವೇಶ್ ಎಂಬ ಟ್ವಿಟರ್ ಖಾತೆಯಿಂದ ಬಂದಿರುವ ಟ್ವೀಟ್ ನಲ್ಲಿ, “ಈ ಭೂಮಿಯಲ್ಲಿ ಇರುವ ಯಾರಿಗೂ ಅಂಬೇಡ್ಕರ್ ಜಯಂತಿ, ಗಾಂಧಿ ಜಯಂತಿ ಬೇಕಿಲ್ಲ. ನಮಗೆ ಬೇಕಿರುವುದು ನಮ್ಮ ಹಿಂದೂ ಹಬ್ಬಗಳಿಗೆ ರಜೆ. ಆದರೆ, ಸರ್ಕಾರದ ಮಟ್ಟದಲ್ಲಿರುವವರಿಗೆ ಅವರಿಗೆ ಯಾರನ್ನೋ ಮೆಚ್ಚಿಸುವದಷ್ಟೇ ಬೇಕು. ಹಾಗಾಗಿ, ಅವರ ಜನನಾಯಕನ ಹುಟ್ಟುಹಬ್ಬಕ್ಕೆ ರಜೆ ಘೋಷಿಸಿದ್ದಾರೆ’’ ಎಂದು ಹೇಳಿದ್ದಾರೆ. ಮತ್ತೊಬ್ಬರು, ಈ ದೇಶದ ಹೊಸ ದೇವರಾಗಿ ಅಂಬೇಡ್ಕರ್ ಉದಯಿಸಿದ್ದಾರೆ. ಅದಕ್ಕಾಗಿಯೇ ಅವರ ಜನ್ಮದಿನವನ್ನು ಸಾರ್ವತ್ರಿಕ ಕಡ್ಡಾಯ ರಜೆ ಎಂದು ಹೇಳಿದ್ದಾರೆ ಎಂದಿದ್ದಾರೆ. ಆದರೆ, ಇದಕ್ಕೆ ಹೆಚ್ಚಿನವರು ತಿರುಗೇಟು ನೀಡಿದ್ದಾರೆ. ದಿವಿಕಾಂತ್ ಎಂಬವರು, “ಹಿಂದೂ ಹಬ್ಬಗಳಿಗೆ ತಿಂಗಳಿಗೆ ಒಂದು, ಎರಡು ಇದ್ದೇ ಇರುತ್ತವೆ. ಹೀಗೆ, ಎಲ್ಲದಕ್ಕೂ ರಜೆ ಕೊಡುತ್ತಾ ಹೋದರೆ ದೇಶದ ಪ್ರೊಡಕ್ಟಿವಿಟಿ ಇಂಪ್ರೂವ್ ಆಗೋದಾದರೂ ಹೇಗೆ’’ ಎಂದು ಕೇಳಿದ್ದಾರೆ.ಮತ್ತೊಬ್ಬರು, ಅಂಬೇಡ್ಕರ್ ಅವರು ಈ ದೇಶದ ಎಲ್ಲರಿಗೂ ವಿದ್ಯಾಭ್ಯಾಸವನ್ನು ಸಮಾನವಾಗಿ ಹಂಚಿದರು. ನಿಮ್ಮ ಪೂರ್ವಿಕರು ಹಂಚಿಲ್ಲ. ಹಾಗಾಗಿ, ಅವರ ಜನ್ಮದಿನವನ್ನು ಸಾರ್ವತ್ರಿಕ ರಜೆಯನ್ನಾಗಿ ಮಾಡಿದರೆ ನಿಮಗೇನು ಕಷ್ಟ ಎಂದು ಕೇಳಿದ್ದಾರೆ.

ವಿವಾದಾತ್ಮಕ ಪೋಸ್ಟ್ ಹಾಕುವ ತಿವಾರಿ


ಅನುರಾಧಾ ತಿವಾರಿ ಅವರು ಕಳೆದ ವರ್ಷ ಮೀಸಲಾತಿಯನ್ನು ವಿರೋಧಿಸಿ ಹಾಕಿದ್ದ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದ್ದವು. ಕಳೆದ ವರ್ಷ ಆಗಸ್ಟ್ ನಲ್ಲಿ ಅವರು ಹಾಕಿದ್ದ ಬ್ರಾಹ್ಮಿನ್ ಜೀನ್ಸ್ ಎಂಬ ಪೋಸ್ಟ್ ಕೂಡ ವೈರಲ್ ಆಗಿತ್ತು. ಆದರೆ, ಅದಕ್ಕೆ ಅನೇಕ ವಿರೋಧಗಳೂ ವ್ಯಕ್ತವಾಗಿದ್ದವು. ಆದರೆ, ಅಂಥ ವಿರೋಧಗಳನ್ನೂ ವಿರೋಧಿಸಿದ್ದ ಅವರು, ಈ ಎಲ್ಲಾ ವಿರೋಧಗಳು ನೈಜ ಜಾತಿವಾದಿಗಳ ಬಣ್ಣವನ್ನು ಬಯಲು ಮಾಡಿದೆ. ಕಡೆಯವರೆಗೂ ಬ್ರಾಹ್ಮಣಳಾಗಿಯೇ ಉಳಿಯುತ್ತೇನೆ’’ ಎಂದಿದ್ದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು