ಮುಡಾ ಪ್ರಕರಣದಲ್ಲಿ ಸರ್ಕಾರದ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.

ಅವರು ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು ಸರ್ಕಾರದ ಉತ್ತರವನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ ಎಂದು ಅವರು ಹೇಳಿದರು.

2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ, ಮುಡಾ ಅಕ್ರಮವಾಗಿ ನಮ್ಮ ಜಮೀನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದಳು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ.

ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ. ಆಪರೇಶನ್‌ ಕಮಲ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!