ಮುಡಾ ಪ್ರಕರಣದಲ್ಲಿ ಸರ್ಕಾರದ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.

ಅವರು ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು ಸರ್ಕಾರದ ಉತ್ತರವನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ ಎಂದು ಅವರು ಹೇಳಿದರು.

2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ, ಮುಡಾ ಅಕ್ರಮವಾಗಿ ನಮ್ಮ ಜಮೀನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದಳು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ.

ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ. ಆಪರೇಶನ್‌ ಕಮಲ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!