ಗೆಲುವಿನ ಕಿರೀಟ ಮುಡಿಗೇರಿಸಿಕೊಂಡು ಶ್ರೇಯಸ್ ಅಯ್ಯರ್ನನ್ನ ಕಿಚಾಯಿಸಿದ RCB

ಕೇವಲ ಎರಡನೇ ದಿನಗಳ ಅಂತರದಲ್ಲಿ ಆರ್ಸಿಬಿ ತನ್ನ 7ನೇ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿದೆ. ಏಪ್ರಿಲ್ 18 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಸೋಲು ಕಂಡಿತ್ತು. ಹೀಗಾಗಿ ಸೇಡು ತೀರಿಸಿಕೊಳ್ಳುವ ಇರಾದೆಯೊಂದಿಗೆ ಮೈದಾನಕ್ಕಿಳಿದಿದ್ದ ಆರ್ಸಿಬಿ ಅರ್ಹ ಗೆಲುವು ದಾಖಲಿಸಿತು. ಅಜೇಯ ಅರ್ಧಶತಕ ಸಿಡಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದ ಕೊಹ್ಲಿ, ಜಿತೇಶ್ ಶರ್ಮಾ ಗೆಲುವಿನ ಸಿಕ್ಸರ್ ಬಾರಿಸುತ್ತಿದ್ದಂತೆ ಅಪರೂಪದ ಸಂಭ್ರಮಾಚರಣೆ ಮಾಡುವ ಮೂಲಕ ಪಂಜಾಬ್ ತಂಡವನ್ನು ಅದರಲ್ಲೂ ನಾಯಕ ಶ್ರೇಯಸ್ ಅಯ್ಯರ್ನನ್ನು ಸರಿಯಾಗಿ ಕಿಚಾಯಿಸಿದರು. ಇದೀಗ ಅದರ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ವಾಸ್ತವವಾಗಿ 19ನೇ ಓವರ್ನ ಕೊನೆಯ ಎಸೆತವನ್ನು ಸಿಕ್ಸರ್ಗಟ್ಟುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಇತ್ತ ತಂಡ ಗೆಲ್ಲುತ್ತಿದ್ದಂತೆ ಕ್ರೀಸ್ನಲ್ಲಿದ್ದ ಕೊಹ್ಲಿ, ಶ್ರೇಯಸ್ ಅಯ್ಯರ್ ಕಡೆಗೆ ತಿರುಗಿ ತಮಾಷೆಯಾಗಿ ಸಂಭ್ರಮಾಚರಣೆ ಮಾಡಿದರು. ಇದನ್ನು ನೋಡಿದ ಅಯ್ಯರ್ ಕೊಂಚ ಕೋಪಗೊಂಡಂತೆ ಕಂಡುಬಂತು.

ಪಂದ್ಯ ಮುಗಿದ ಬಳಿಕ ಉಭಯ ತಂಡಗಳ ಆಟಗಾರರು ಹ್ಯಾಂಡ್ಶೇಕ್ ಮಾಡತ್ತಿರುವಾಗ ಅಯ್ಯರ್ ಕೋಪದಲ್ಲಿ ಕೊಹ್ಲಿ ಬಳಿ ಮಾತನಾಡಿದರು. ಆದರೆ ಕೊಹ್ಲಿ ಮಾತ್ರ ನಗುತ್ತಾ, ಆ ಕ್ಷಣವನ್ನು ಹಗುರಗೊಳಿಸಲು ಪ್ರಯತ್ನಿಸಿದರು. ಆದರೆ ಅಯ್ಯರ್ ಮಾತ್ರ ಸಮಾಧಾನಗೊಂಡವರಂತೆ ಕಂಡುಬರಲಿಲ್ಲ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!