ಬಿಜೆಪಿ- ಜೆಡಿಎಸ್ ನ ಸುಳ್ಳು ಆರೋಪಗಳಿಗೆ ಹೆದರುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ ಹಾಗೂ ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜೆಡಿಎಸ್ ಹಾಗೂ ಬಿಜೆಪಿಯ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬೃಹತ್ ಜನಾಂದೋಲನವನ್ನು ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಸುಳ್ಳುಆರೋಪಗಳನ್ನು ಆಧರಿಸಿ ಮಾಡುತ್ತಿರುವ ಪಾದಯಾತ್ರೆ ಮಾಡುತ್ತಿದ್ದು, ಸಿದ್ದರಾಮಯ್ಯನಿಗೆ ಕಪ್ಪು ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಅವರ ಆರೋಪಗಳು ಸುಳ್ಳು ಎಂದು ಜನರಿಗೆ ಮನವರಿಕೆ ಮಾಡಲು ಜನಾಂದೋಲನ ಮಾಡಲಾಗಿದೆ ಎಂದರು.

ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಿದ್ದಾರೆ. ಸುಳ್ಳು ಆರೋಪಗಳಿಂದ ನನ್ನ ಮೇಲೆ ಕಪ್ಪು ಬಳಿದರೆ, ರಾಜಕೀಯವಾಗಿ ನನ್ನನ್ನು ಮಣಿಸಿ ಲಾಭ ಪಡೆಯಬಹುದು ಎಂಬ ಭ್ರಮೆಯಲ್ಲಿದ್ದಾರೆ. ಬಿಜೆಪಿ ಜೆಡಿಎಸ್ ನವರ ಹಗರಣಗಳು ಬೇಕಾದಷ್ಟಿದ್ದು ಅವುಗಳನ್ನು ಬಯಲಿಗೆಳೆಯುತ್ತೇವೆ. ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಯಡಿಯೂರಪ್ಪ ಸೇರಿದಂತೆ ಹಲವರ ಮೇಲೆ ಇರುವ ಹಗರಣಗಳ ವಿರುದ್ಧ ತನಿಖೆ ಕೈಗೊಳ್ಳಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

  • Related Posts

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

    ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

    ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

    You Missed

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!