ಮೈಸೂರು ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ.

ಮೈಸೂರು: ಕಾರಣಾಂತರಗಳಿಂದ ಪದವಿ ಅಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ ಮೈಸೂರು ವಿಶ್ವವಿದ್ಯಾಲಯ ಮತ್ತೊಂದು ಅವಕಾಶ ನೀಡಿದೆ. ಹೌದು, ಕೆಲ ವಿದ್ಯಾರ್ಥಿಗಳು ಬೇರೆ ಬೇರೆ ಕಾರಣಗಳಿಂದಾಗಿ ಪರೀಕ್ಷೆಗೆ ಹಾಜರಾಗದೆ ಪದವಿ ಪೂರ್ಣಗೊಳಿಸಲು ಸಾಧ್ಯವಾಗಿರುವುದಿಲ್ಲ. ಇದರಿಂದ ಪದವಿ ಪಡೆಯಬೇಕೆಂಬ ಅವರ ಕನಸು ನನಸಾಗದೆ ಉಳಿದಿದೆ. ಇಂತಹ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅವರೆಲ್ಲರಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಲು ಮೈಸೂರು ವಿವಿ ನಿರ್ಧರಿಸಿದೆ.

ಯಾರಿಗೆಲ್ಲ ಅವಕಾಶ

“2004-05ನೇ ಸಾಲಿನಿಂದ 2018-19ನೇ ಅವಧಿಯ ಪಠ್ಯಕ್ರಮದಲ್ಲಿ ಮೂರು ವರ್ಷದ ಪದವಿ ಅವಧಿಯನ್ನು ಮುಗಿಸಿದ್ದರೂ ನಾನಾ ಕಾರಣದಿಂದ ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಸಿ.ಎ., ಬಿ.ಬಿ.ಎ/ಬಿ.ಬಿ.ಎಂ, ಬಿ.ಎಸ್.ಡಬ್ಯೂ ಸೇರಿದಂತೆ ವಿವಿಧ ಪದವಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡಿ ಅನುತ್ತೀರ್ಣರಾಗಿರುವ ಮೈಸೂರು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳು ಹಾಗೂ ಸಂಯೋಜನೆ ಪಡೆದಿರುವ ಸರ್ಕಾರಿ, ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ತಮ್ಮ ಮೂರು ವರ್ಷದ ಪದವಿಯ ಆರು ಸೆಮಿಸ್ಟರ್ಗಳ ಪೈಕಿ ಯಾವುದೇ ಸೆಮಿಸ್ಟರ್ಸ್ ಯಾವುದೇ ವಿಷಯದಲ್ಲಿ ಅನುತ್ತೀರ್ಣರಾಗಿದ್ದರೂ, ಆಯಾ ವಿಷಯಗಳ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದಾಗಿದೆ” ಎಂದು ವಿವಿ ಕಲಸಚಿವರು ಪ್ರಕಟಣೆ ಹೊರಡಿಸಿದ್ದಾರೆ.
“ಈ ಬಗ್ಗೆ ವಿಶ್ವವಿದ್ಯಾನಿಯವು ಶೀರ್ಘದಲ್ಲೇ ಸುತ್ತೋಲೆ ಹೊರಡಿಸಲಿದ್ದು, ಪರೀಕ್ಷೆ ಬರೆಯಲು ಆಸಕ್ತಿಯುಳ್ಳ ವಿದ್ಯಾರ್ಥಿಗಳು ಈ ಹಿಂದೆ ತಾವು ವ್ಯಾಸಂಗ ಮಾಡಿರುವ ಕಾಲೇಜಿನಲ್ಲಿ ಪರೀಕ್ಷಾ ಶುಲ್ಕ ಪಾವತಿಸಬೇಕಾಗುತ್ತದೆ. ಮೈಸೂರು ನಗರವನ್ನು ಕೇಂದ್ರವಾಗಿಸಿಕೊಂಡು ನಾಲ್ಕು ಜಿಲ್ಲೆಗಳಾದ ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರದ ಪರೀಕ್ಷಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲಾಗುತ್ತದೆ”.

“ಈ ಅವಕಾಶದಿಂದ ವಂಚಿತರಾಗದಂತೆ ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡಲು ಈಗಾಗಲೇ ನಾಲ್ಕು ಜಿಲ್ಲೆಯ (ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ) ಎಲ್ಲಾ ಕಾಲೇಜುಗಳ ಪ್ರಾಂಶುಪಾಲರಿಗೆ ತಿಳಿಸಲಾಗಿದೆ. ಆಯಾ ಕಾಲೇಜುಗಳಲ್ಲಿ ಪ್ರವೇಶ ಪಡೆದು ಪದವಿ ಪೂರ್ಣಗೊಳಿಸದೆ ಇರುವ ವಿದ್ಯಾರ್ಥಿಗಳ ಮಾಹಿತಿಯನ್ನು (ಹೆಸರು, ರಿ.ನಂ, ವಿಷಯ, ತರಗತಿ, ಪದವಿ ಪೂರ್ಣಗೊಳಿಸಿದ ಅವಧಿ ಇತ್ಯಾದಿ) ಸಂಗ್ರಹಿಸಿ ಮೈಸೂರು ವಿಶ್ವವಿದ್ಯಾಲಯಕ್ಕೆ ನೀಡಲು ಸೂಚಿಸಲಾಗಿದೆ”.
“ಜಿಲ್ಲೆಗೊಂದು ವಿಶ್ವವಿದ್ಯಾಲಯವಾಗಿರುವುದರಿಂದ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳು ಎಲ್ಲಿ ಪರೀಕ್ಷೆ ತೆಗೆದುಕೊಳ್ಳಬೇಕು ಎಂಬ ಗೊಂದಲ ಬಹುತೇಕ ವಿದ್ಯಾರ್ಥಿಗಳಲ್ಲಿದೆ. ಕೆಲವರು ಪದವಿ ಪೂರ್ಣಗೊಳ್ಳದ ಕಾರಣ ಕಾಲೇಜುಗಳ ಸಂಪರ್ಕದಿಂದ ದೂರ ಉಳಿದಿರುತ್ತಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿರುವ ಸಮಸ್ಯೆಗಳನ್ನು ಪದವಿ ಕಾಲೇಜುಗಳ ಪ್ರಾಂಶುಪಾಲರು, ಅಧ್ಯಾಪಕರು ಹೆಚ್ಚಿನ ಆಸಕ್ತಿ ವಹಿಸಿ ಎಲ್ಲರಿಗೂ ತಿಳಿಯುವಂತೆ ಮಾಹಿತಿಯನ್ನು ನೀಡಬೇಕಾಗಿರುತ್ತದೆ. ಈ ಪರೀಕ್ಷೆಗಳನ್ನು ಮಾನಸಗಂಗೋತ್ರಿಯ ಮೌಲ್ಯಭವನದಲ್ಲಿ ಜೂನ್/ಜುಲೈ ತಿಂಗಳಿನಲ್ಲಿ ನಡೆಸಲು ತೀರ್ಮಾನಿಸಲಾಗಿರುತ್ತದೆ”.

“ಒಂದು ಬಾರಿ ಮಾತ್ರ ಅವಕಾಶ ನೀಡಲಾಗಿದೆ. ವಿಶೇಷವಾಗಿ ಕೈಗೊಂಡಿರುವ ಈ ಪರೀಕ್ಷಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸುವ ಹಾಗೂ ವಿದ್ಯಾರ್ಥಿಗಳು ಇದರಿಂದಾಗುವ ಉತ್ತಮ ಅವಕಾಶವನ್ನು ಪಡೆದುಕೊಳ್ಳುವ ಸಂಬಂಧ, ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾ ವಿಭಾಗವು ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಜಿ.ಹೆಚ್.ಮಹದೇವ ಸ್ವಾಮಿ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅವರ ಮೊಬೈಲ್ ಸಂಖ್ಯೆ: 9035235245 ಹಾಗೂ ಕಚೇರಿ ಸಂಖ್ಯೆ: 0821-2419273 ಯನ್ನು ಸಂಪರ್ಕಿಸಬಹುದು” ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!