ಕಾಶ್ಮೀರದ ಪಹಲ್ಗಾಮ್ ಉಗ್ರರ ದಾ*, ಮಾಹಿತಿ ಕೊರತೆ – ಸಿಎಂ ಸಿದ್ದರಾಮಯ್ಯ.

ಬೆಂಗಳೂರು : ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಮಾಧ್ಯಮದವರೊಂದಿಗೆ ಮಾತನಾಡಿ ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬುವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದರು.


ಕಾಶ್ಮೀರದ ಪಹಲ್ಗಾಮ್ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.
ದೇಶದ ಜನರಿಗೆ ಕೇಂದ್ರ ಭದ್ರತೆ ಒದಗಿಸಬೇಕುಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ, ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪಹಲ್ಗಾಮಿನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!