2025ರ ದಸರಾದಲ್ಲಿ ಕಂಬಳ ಸೇರಿಸಲು: ಡಿಸಿಎಂ ಡಿಕೆ ಶಿವಕುಮಾರ್.

ಮೈಸೂರು : ಈ ಬಾರಿ ದಸರಾದಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಿದ್ದೇವೆ. ದಸರಾದಲ್ಲಿ ಕಂಬಳ ಸೇರಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೆಲ ಹೊಸ ಆಚರಣೆಗಳನ್ನು ಸೇರಿಸಬೇಕು. ಹಳೆಯ ಪದ್ಧತಿ ಜೊತೆಗೆ ಹೊಸ ಆಚರಣೆಗಳು ದಸರಾ ಮೆರಗನ್ನು ಹೆಚ್ಚು ಮಾಡುತ್ತವೆ. ಈ ಬಗ್ಗೆ ಅಧಿಕಾರಿಗಳ ಚರ್ಚೆ ಮಾಡಿದ್ದೇವೆ. ಈ ಬಾರಿ ದಸರಾದಲ್ಲಿ ಅನೇಕ ಬದಲಾವಣೆ ಆಗುತ್ತದೆ ಎಂದು ತಿಳಿಸಿದರು. ಕಾವೇರಿ ನಮ್ಮ ಜೀವನದಿ. ತಾಯಿಯ ಆರತಿ ಮಾಡಬೇಕು. ಹೀಗಾಗಿ ಕಾವೇರಿ ಆರತಿ ಮಾಡಲು ಮುಂದಾಗಿದ್ದೇವೆ. ವ್ಯವಸಾಯ ಕುಡಿಯಲು ನೀರು ಎಲ್ಲವನ್ನೂ ತಾಯಿ ಕೊಡುತ್ತಿದ್ದಾಳೆ. ರಾಜ್ಯಕ್ಕೆ ಎಲ್ಲರಿಗೂ ಒಳಿತಾಗಲಿ ಎಂದು ಆರತಿ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ರಾಮನಗರ ಹೆಸರು ಬದಲಾವಣೆ ಹೇಗೆ ಮಾಡಬೇಕು ಅಂತಾ ನನಗೆ ಗೊತ್ತು
ರಾಮನಗರ ಹೆಸರು ಬದಲಾವಣೆ ವಿಚಾರ ಕುರಿತು ಮಾತನಾಡಿದ ಡಿಕೆ ಶಿವಕುಮಾರ್, ಅದನ್ನು ಹೇಗೆ ಮಾಡಬೇಕು ಅಂತಾ ನನಗೆ ಗೊತ್ತು. ಅದನ್ನು ಮಾಡೇ ಮಾಡುತ್ತೇನೆ ಎಂದು ಸವಾಲೆಸೆದರು. ನಾವೇನು ಹೊರಗಿನಿಂದ ಬಂದವರಲ್ಲ. ನಮ್ಮ ಭೂಮಿ ನಮ್ಮ ನೆಲದ ಬಗ್ಗೆ ನಮಗೆ ಗೊತ್ತು. ಯಾರು ಅಪ್ಪ ಅಮ್ಮನ ಹೆಸರು ಬದಲಾಯಿಸಲ್ಲ. ಅಫಿಡೆವಿಟ್ ಮಾಡಿಸಿಕೊಳ್ಳಬಹುದು ಅಷ್ಟೇ. ಡಿ.ಕೆ.ಶಿವಕುಮಾರ್ ಬಗ್ಗೆ ಭಯನಾ ಅಸೂಯೆನಾ ಪ್ರಶ್ನೆ..? ಏನು ಅಂತ ಗೊತ್ತಿಲ್ಲ ಆದರೆ ನನ್ನ ಮೇಲೆ ಅತಿಯಾದ ಪ್ರೀತಿ ಎಂದು ಟಾಂಗ್ ಕೊಟ್ಟರು.

ಟೌನ್ ಶಿಪ್ ಪಿತಾಮಹ ದೇವೇಗೌಡರು ಹಾಗೂ ಹೆಚ್.ಡಿ ಕುಮಾರಸ್ವಾಮಿ
ಬಿಡದಿ ಟೌನ್ ಶಿಪ್ ಗೆ ರೈತರ ಭೂಮಿ ಕೈ ಬಿಡುವಂತೆ ಸಿಎಂಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಕಾಲದಲ್ಲೇ 7 ಟೌನ್ ಶಿಪ್ ಮಾಡಬೇಕು ಅಂತ ತೀರ್ಮಾನ ಆಗಿದ್ದು. ಅದಕ್ಕಾಗಿ 300 ಕೋಟಿ ಹಣ ಕೊಟ್ಟಿದ್ದರು. ಟೌನ್ ಶಿಪ್ ಪ್ಲಾನ್ ಅವರ ಕಾಲದಲ್ಲೇ ಆಗಿದ್ದು. ನಾನು ಡಿನೋಟಿಫಿಕೇಷನ್ ಮಾಡಲು ಹೋಗಲ್ಲ. ಈ ಹಿಂದೆ ನನ್ನ ಮೇಲೆ ಏನೆಲ್ಲಾ ಹೇಳಿದ್ರು ಅದೆಲ್ಲ ಇತಿಹಾಸ. ಟೌನ್ ಶಿಪ್ ಪಿತಾಮಹ ದೇವೇಗೌಡ ಹಾಗೂ ಕುಮಾರಸ್ವಾಮಿ. ಯಾರು ಏನೇ ಹೇಳಿದರೂ ಗ್ರೇಟರ್ ಬೆಂಗಳೂರು ಮಾಡಿಯೇ ಮಾಡುತ್ತೇವೆ. ಬೆಂಗಳೂರಿಗಿಂತ ಚೆನ್ನಾಗಿ 10 ಸಾವಿರ ಎಕರೆಯಲ್ಲಿ ಉತ್ತಮ ಸಿಟಿ ಮಾಡುತ್ತೇವೆ. ಇದು ಮಾಡೆಲ್ ಸಿಟಿ ಆಗತ್ತೆ ರೈತರು ಜಮೀನಿನ ಬದಲಾಗಿ ದುಡ್ಡು ತೆಗೆದುಕೊಳ್ಳಬಹುದು. ಇಲ್ಲದಿದ್ದರೆ ಅಭಿವೃದ್ದಿ ಪಡಿಸಿದ ಲ್ಯಾಂಡ್ ತೆಗೆದುಕೊಳ್ಳಬಹುದು. ಎರಡು ಬಾರಿ ಕುಮಾರಸ್ವಾಮಿ ಸಿಎಂ ಆದರೂ ಯಾಕೆ ರೈತರ ಭೂಮಿ ಸ್ವಾಧೀನದಿಂದ ಕೈ ಬಿಡಲಿಲ್ಲ. ಈ ಬಗ್ಗೆ ದೇವೇಗೌಡರೇ ಹೇಳಲಿ. ಇದರಲ್ಲಿ ರಾಜಕೀಯ ಬೇಡ ಇದೆಲ್ಲ ನಿಮ್ಮ ಮಗನೆ ಮಾಡಿದ್ದು. ನಿಮ್ಮ ಕಾಲದಲ್ಲೇ ಆಗಿದ್ದು ಎಂದು ಹೆಚ್ ಡಿ ದೇವೇಗೌಡರಿಗೆ ಟಾಂಗ್ ಕೊಟ್ಟರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!