ಚಾಮರಾಜನಗರ ಜಿಲ್ಲಾ ಕನಕ ಸಮುದಾಯ ಭವನಕ್ಕೆ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ.

ಚಾಮರಾಜನಗರ : ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಈಗಾಗಲೇ 2 ಕೋಟಿ ರೂಪಾಯಿಯಲ್ಲಿ 50 ಲಕ್ಷ ರೂಪಾಯಿ ಬಿಡುಗಡೆ ಆಗಿದೆ. ಹಲವರು ದೇಣಿಗೆ ಕೂಡ ಕೊಟ್ಟಿದ್ದಾರೆ. ಇವರೆಲ್ಲರಿಗೂ ಒಳ್ಳೆಯದಾಗಲಿ, ಸಮುದಾಯ ಭವನ ಕಟ್ಟಿ. ಆದರೆ, ಇದಕ್ಕಿಂತ ಹೆಚ್ಚಾಗಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆ ನಿರ್ಮಿಸಿ, ಜಿಲ್ಲೆಯ ಎಲ್ಲಾ ಹಿಂದುಳಿದ ಸಮುದಾಯಗಳ ಬಡ ಮಕ್ಕಳಿಗೆ ಶೈಕ್ಷಣಿಕ ನೆರವು ದೊರಕುವಂತೆ ಮಾಡಿ ಎಂದು ಕರೆ ನೀಡಿದರು.

ಚಾಮರಾಜನಗರ ಜಿಲ್ಲೆ ಅತ್ಯಂತ ಹಿಂದುಳಿದಿರುವ ಜಿಲ್ಲೆ. ಇಲ್ಲಿ ಶಿಕ್ಷಣ ಹೆಚ್ಚೆಚ್ಚು ಸಿಗಬೇಕಿದೆ. ಶಿಕ್ಷಣ ಕಲಿಯಬೇಕಿದ್ದರೆ ಹಾಸ್ಟೆಲ್ ಗಳ ಅಗತ್ಯವೂ ಇದೆ. ನಮ್ಮ ಸರ್ಕಾರ ಎಲ್ಲಾ ಜಾತಿಯ ಬಡವರಿಗೂ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆ ಸೇರಿ ನಮ್ಮ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡ ಮಹಿಳೆಯರಿಗೂ ಅನುಕೂಲ ಆಗುತ್ತಿದೆ. ಕೆಲಸಕ್ಕೆ ಹೋಗುವ ಬಡ ಮತ್ತು ಮಧ್ಯಮ ವರ್ಗದ ಹೆಣ್ಣು ಮಕ್ಕಳಿಗೆ ಇದರಿಂದ ಹೆಚ್ಚು ಸಮಾಧಾನ ಆಗಿದೆ. ವಿದ್ಯಾರ್ಥಿನಿಯರಿಗೂ ಸಮಾಧಾನ ಆಗಿದೆ. ಹೀಗೆ ಎಲ್ಲಾ ಜಾತಿಯ ಬಡವರು, ಮಧ್ಯಮ ವರ್ಗದವರಿಗೆ ನೆರವಾಗುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.

“ಸಾಮಾಜಿಕ ಸಮೀಕ್ಷೆ:
ಸಂವಿಧಾನ ಬಂದು 75 ವರ್ಷ ಆದರೂ ಸಾಮಾಜಿಕ ನ್ಯಾಯ ಈಡೇರಿಲ್ಲ. ಅವಕಾಶ ವಂಚಿತ ಸಮುದಾಯಗಳ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ಅರಿಯಲು ಸಮೀಕ್ಷೆ ನಡೆಸಿದ್ದೇವೆ. 2015 ರಲ್ಲಿ ನಡೆಸಿದ ಸಮೀಕ್ಷೆ ಬಳಿಕ ಬಂದ ಸಿಎಂ ಗಳು ಸ್ವೀಕರಿಸಿಲ್ಲ. ನಾನು ಸ್ವೀಕರಿಸಿ ಕ್ಯಾಬಿನೆಟ್ ಮುಂದೆ ಇಟ್ಟಿದ್ದೀನಿ. ಇದು ಯಾರ ವಿರುದ್ಧವೂ ಇರುವ ಸಮೀಕ್ಷೆ ಅಲ್ಲ. ಎಲ್ಲರ ಸ್ಥಿತಿ ಗತಿ ತಿಳಿಯುವ ಸಮೀಕ್ಷೆ ಮಾತ್ರ ಆಗಿದೆ ಎಂದರು.

ಬಿಜೆಪಿಯ ರಾಮಾ ಜೋಯಿಸ್ ಅವರು ಮೀಸಲಾತಿ ವಿರೋಧಿಸಿ ಕೋರ್ಟ್ ಗೆ ಹೋಗಿದ್ದರು. ನಿಮಗೆ ಸೈದ್ಧಾಂತಿಕವಾಗಿ ಸ್ಪಷ್ಟ ತಿಳಿವಳಿಕೆ ಇರಬೇಕು.
ನೀವು ನನಗೂ ಚಪ್ಪಾಳೆ ತಟ್ಟೋದು, ಸಾಮಾಜಿಕ ನ್ಯಾಯದ ವಿರೋಧಿ ಆಗಿರುವ ಬಿಜೆಪಿಯವರ ಮಾತಿಗೂ ಚಪ್ಪಾಳೆ ತಟ್ಟೋದನ್ನು ನಿಲ್ಲಿಸಿ. ನಮ್ಮ ಪರವಾಗಿ ಇರುವವರು ಯಾರು ಎಂದು ತಿಳಿದು ಆಶೀರ್ವಾದ ಮಾಡಿ ಎಂದು ತಿಳಿಸಿದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು