ಆರ್.ಸಿ.ಬಿ ದೆ ಎಲ್ಲಾ ಕ್ಯಾಪ್; ಅಂಕಪಟ್ಟಿಯಲ್ಲಿ ಮತ್ತೆ ಟಾಪ್….

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭರ್ಜರಿ ಪ್ರದರ್ಶನ ಮುಂದುವರೆದಿದೆ. ಈವರೆಗೆ ಆಡಿದ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ಆರ್ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹಾಗೆಯೇ ಆ್ಯರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ಪಟ್ಟಿಯಲ್ಲೂ ಆರ್ಸಿಬಿ ಆಟಗಾರರು ಅಗ್ರಸ್ಥಾನದಲ್ಲಿದ್ದಾರೆ. ಐಪಿಎಲ್ನಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರನಿಗೆ ಆರೆಂಜ್ ಕ್ಯಾಪ್ ಪ್ರಶಸ್ತಿ ಹಾಗೂ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್ಗೆ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ನೀಡಲಾಗುತ್ತದೆ. ಅದರಂತೆ ಈ ಬಾರಿಯ ಐಪಿಎಲ್ನ ಆರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ರೇಸ್ನಲ್ಲಿ ಆರ್ಸಿಬಿ ಆಟಗಾರರು ಮುಂಚೂಣಿಯಲ್ಲಿದ್ದಾರೆ.

ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಆರ್ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 51 ರನ್ ಬಾರಿಸುವುದೊಂದಿಗೆ ಕೊಹ್ಲಿ ಎಲ್ಲರನ್ನು ಹಿಂದಿಕ್ಕಿದ್ದಾರೆ. ಈವರೆಗೆ 10 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 6 ಅರ್ಧಶತಕಗಳೊಂದಿಗೆ ಒಟ್ಟು 443 ರನ್ ಕಲೆಹಾಕಿದ್ದಾರೆ.ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್. ಈವರೆಗೆ 10 ಇನಿಂಗ್ಸ್ ಆಡಿರುವ ಸೂರ್ಯ 3 ಅರ್ಧಶತಕಗಳೊಂದಿಗೆ 427 ರನ್ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ರೇಸ್ನಲ್ಲಿ ವಿರಾಟ್ ಕೊಹ್ಲಿಗೆ ಉತ್ತಮ ಪೈಪೋಟಿ ನೀಡುತ್ತಿದ್ದಾರೆ.

ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಆರ್ಸಿಬಿ ತಂಡದ ವೇಗಿ ಜೋಶ್ ಹ್ಯಾಝಲ್ವುಡ್ ಮೊದಲ ಸ್ಥಾನದಲ್ಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 10 ಇನಿಂಗ್ಸ್ಗಳಲ್ಲಿ 36.5 ಓವರ್ಗಳನ್ನು ಎಸೆದಿರುವ ಹ್ಯಾಝಲ್ವುಡ್ 18 ವಿಕೆಟ್ಗಳನ್ನು ಕಬಳಿಸಿ ಪರ್ಪಲ್ ಕ್ಯಾಪ್ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ.ಇನ್ನು ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವುದು ಕನ್ನಡಿಗ ಪ್ರಸಿದ್ಧ್ ಕೃಷ್ಣ. ಗುಜರಾತ್ ಟೈಟಾನ್ಸ್ ಪರ 8 ಪಂದ್ಯಗಳಲ್ಲಿ 31 ಓವರ್ಗಳನ್ನು ಎಸೆದಿರುವ ಪ್ರಸಿದ್ಧ್ ಕೃಷ್ಣ 16 ವಿಕೆಟ್ಗಳನನ್ನು ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್ನಲ್ಲಿ ಹ್ಯಾಝಲ್ವುಡ್ ಜೊತೆ ಪೈಪೋಟಿ ನಡೆಸುತ್ತಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!