ಆರ್.ಸಿ.ಬಿ ದೆ ಎಲ್ಲಾ ಕ್ಯಾಪ್; ಅಂಕಪಟ್ಟಿಯಲ್ಲಿ ಮತ್ತೆ ಟಾಪ್….

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭರ್ಜರಿ ಪ್ರದರ್ಶನ ಮುಂದುವರೆದಿದೆ. ಈವರೆಗೆ ಆಡಿದ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ಆರ್ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹಾಗೆಯೇ ಆ್ಯರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ಪಟ್ಟಿಯಲ್ಲೂ ಆರ್ಸಿಬಿ ಆಟಗಾರರು ಅಗ್ರಸ್ಥಾನದಲ್ಲಿದ್ದಾರೆ. ಐಪಿಎಲ್ನಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರನಿಗೆ ಆರೆಂಜ್ ಕ್ಯಾಪ್ ಪ್ರಶಸ್ತಿ ಹಾಗೂ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್ಗೆ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ನೀಡಲಾಗುತ್ತದೆ. ಅದರಂತೆ ಈ ಬಾರಿಯ ಐಪಿಎಲ್ನ ಆರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ರೇಸ್ನಲ್ಲಿ ಆರ್ಸಿಬಿ ಆಟಗಾರರು ಮುಂಚೂಣಿಯಲ್ಲಿದ್ದಾರೆ.

ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಆರ್ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 51 ರನ್ ಬಾರಿಸುವುದೊಂದಿಗೆ ಕೊಹ್ಲಿ ಎಲ್ಲರನ್ನು ಹಿಂದಿಕ್ಕಿದ್ದಾರೆ. ಈವರೆಗೆ 10 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 6 ಅರ್ಧಶತಕಗಳೊಂದಿಗೆ ಒಟ್ಟು 443 ರನ್ ಕಲೆಹಾಕಿದ್ದಾರೆ.ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್. ಈವರೆಗೆ 10 ಇನಿಂಗ್ಸ್ ಆಡಿರುವ ಸೂರ್ಯ 3 ಅರ್ಧಶತಕಗಳೊಂದಿಗೆ 427 ರನ್ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ರೇಸ್ನಲ್ಲಿ ವಿರಾಟ್ ಕೊಹ್ಲಿಗೆ ಉತ್ತಮ ಪೈಪೋಟಿ ನೀಡುತ್ತಿದ್ದಾರೆ.

ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಆರ್ಸಿಬಿ ತಂಡದ ವೇಗಿ ಜೋಶ್ ಹ್ಯಾಝಲ್ವುಡ್ ಮೊದಲ ಸ್ಥಾನದಲ್ಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 10 ಇನಿಂಗ್ಸ್ಗಳಲ್ಲಿ 36.5 ಓವರ್ಗಳನ್ನು ಎಸೆದಿರುವ ಹ್ಯಾಝಲ್ವುಡ್ 18 ವಿಕೆಟ್ಗಳನ್ನು ಕಬಳಿಸಿ ಪರ್ಪಲ್ ಕ್ಯಾಪ್ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ.ಇನ್ನು ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವುದು ಕನ್ನಡಿಗ ಪ್ರಸಿದ್ಧ್ ಕೃಷ್ಣ. ಗುಜರಾತ್ ಟೈಟಾನ್ಸ್ ಪರ 8 ಪಂದ್ಯಗಳಲ್ಲಿ 31 ಓವರ್ಗಳನ್ನು ಎಸೆದಿರುವ ಪ್ರಸಿದ್ಧ್ ಕೃಷ್ಣ 16 ವಿಕೆಟ್ಗಳನನ್ನು ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್ನಲ್ಲಿ ಹ್ಯಾಝಲ್ವುಡ್ ಜೊತೆ ಪೈಪೋಟಿ ನಡೆಸುತ್ತಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!