ಆಸ್ತಿ ತೆರಿಗೆ ಪಾವತಿದಾರರಿಗೆ ಅಕ್ಷಯ ತೃತೀಯದಂದು ಬಿಬಿಎಂಪಿ ಗುಡ್ ನ್ಯೂಸ್.

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತ್ತೀಚೆಗೆ 2025-26ನೇ ಸಾಲಿನ ಸಂಪೂರ್ಣ ಆಸ್ತಿ ತೆರಿಗೆ ಏಪ್ರಿಲ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿತ್ತು. ಆದರೆ ಇದೀಗ ಶೇ.5ರಷ್ಟು ವಿನಾಯಿತಿ ಜೊತೆ ತೆರಿಗೆ ಪಾವತಿ ಅವಧಿವನ್ನು ಮೇ 30ರವರೆಗೆ ವಿಸ್ತರಣೆ ಮಾಡಿದೆ. ಆ ಮೂಲಕ ಸಿಲಿಕಾನ್ ಸಿಟಿಯಲ್ಲಿ ಆಸ್ತಿ ತೆರಿಗೆ ಪಾವತಿದಾರರಿಗೆ ಬಿಬಿಎಂಪಿ ಗುಡ್ ನ್ಯೂಸ್ ನೀಡಿದೆ. ಆದಾಯ ಹೆಚ್ಚಿಸಿಕೊಳ್ಳಲು ಬಿಬಿಎಂಪಿ ಈ ಪ್ಲ್ಯಾನ್ ರೂಪಿಸಿದೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ, ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಏಪ್ರಿಲ್ 30ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗಿತ್ತು.


ಬಿಬಿಎಂಪಿ ಕಾಯ್ದೆ 2020 ರ ಪ್ರಕರಣ 144 (8) ರಲ್ಲಿ ಸರ್ಕಾರವು ಪಾಲಿಕೆಯ ಶಿಫಾರಸ್ಸಿನ ಮೇರೆಗೆ ಅಧಿಸೂಚನೆ ಮೂಲಕ ಯಾವುದೇ ಹಣಕಾಸು ವರ್ಷಗಳಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಬಹುದೆಂದು ಉಲ್ಲೇಖಿಸಲಾಗಿದೆ. ಹಾಗಾಗಿ 2025-26 ನೇ ಸಾಲಿನ ಆಸ್ತಿತೆರಿಗೆ ರಿಯಾಯಿತಿ ಅವಧಿಯನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ.
2025-26 ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಮೇ 31ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿ ತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡುವ ಸಂಬಂಧ ಸರ್ಕಾರದ ಆದೇಶ ಕೋರಿ ಪ್ರಸ್ತಾವನೆ ಮಂಡಿಸಲಾಗಿದೆ. ಆ ಮೂಲಕ ಆದೇಶ ನೀಡಿ ಅಧಿಸೂಚನ ಹೊರಡಿಸಲಾಗಿದೆ.
ಸರ್ಕಾರದ ಆದೇಶ ಅನ್ವಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿ ತೆರಿಗೆ ರಿಯಾಯಿತಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ 31ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!