ಅಲ್ಲು ಅರ್ಜುನ್-ಅಟ್ಲಿ ಸಿನಿಮಾದಲ್ಲಿ ಅನನ್ಯಾ ಪಾಂಡೆ? ಚರ್ಚೆಯಾಗುತ್ತಿದೆ ಸುದ್ದಿ…..

ನಿರ್ದೇಶಕ ಅಟ್ಲಿ ಹಾಗೂ ನಟ ಅಲ್ಲು ಅರ್ಜುನ್ ಅವರ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರಕ್ಕೆ ತಯಾರಿ ಜೋರಾಗಿದೆ. ಪಾತ್ರವರ್ಗದ ಆಯ್ಕೆಯಲ್ಲಿ ಚಿತ್ರತಂಡ ತೊಡಗಿಕೊಂಡಿದೆ. ಸ್ಟೈಲ್ ಐಕಾನ್ ಅಲ್ಲು ಅರ್ಜುನ್ ಜೊತೆ ನಟಿಸುವುದೇ ಖುಷಿಯ ವಿಚಾರ. ಹೀಗಿರುವಾಗ,ಅನೇಕ ನಟಿಯರ ಹೆಸರುಗಳು ಹರಿದಾಡುತ್ತಿವೆ. ಬಾಲಿವುಡ್ ನಟಿ ಅನನ್ಯಾ ಪಾಂಡೆಯ ಹೆಸರೂ ಸಹ ಈ ಲಿಸ್ಟ್ ನಲ್ಲಿ ಕೇಳಿಬರುತ್ತಿದ್ದು, ಈ ಚಿತ್ರದಲ್ಲಿ ನಟಿಸುವ ಸಾಧ್ಯತೆ ಇದೆ ಎಂದು ಗಾಸಿಪ್ ಹಬ್ಬಿದೆ.

ನಟ ಅಲ್ಲು ಅರ್ಜುನ್ ಅವರ ಮುಂದಿನ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಮೂಡಿದೆ. ‘ಪುಷ್ಪ 2’ ಹಿಟ್ ಆಗಿದ್ದರಿಂದ ಅದನ್ನು ಮೀರಿಸುವಂತಹ ಸಿನಿಮಾ ಮಾಡುವ ಸವಾಲು ಅವರ ಮುಂದಿದೆ. ಈಗ ಅವರು ನಿರ್ದೇಶಕ ಅಟ್ಲಿ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಈ ಸಿನಿಮಾಗಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಅಲ್ಲದೇ ಪಾತ್ರವರ್ಗದ ಆಯ್ಕೆ ಪ್ರಕ್ರಿಯೆ ಕೂಡ ಬಿರುಸಿನಿಂದ ಸಾಗುತ್ತಿದೆ. ಈ ಚಿತ್ರಕ್ಕೆ ನಾಯಕಿ ಯಾರು ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಈ ಮೊದಲು ಮೃಣಾಲ್ ಠಾಕೂರ್ ಹೆಸರು ಕೇಳಿಬಂದಿತ್ತು. ಈಗ ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ಹೆಸರು ಕೂಡ ಸುದ್ದಿ ಆಗ್ತಾ ಇದೆ.
ನಟಿ ಅನನ್ಯಾ ಪಾಂಡೆ ಅವರಿಗೆ ತೆಲುಗು ಸಿನಿಮಾ ಹೊಸದೇನೂ ಅಲ್ಲ. ಈ ಮೊದಲು ಅವರು ವಿಜಯ್ ದೇವರಕೊಂಡ ಜೊತೆ ‘ಲೈಗರ್’ ಸಿನಿಮಾ ಮಾಡಿದ್ದರು. ಒಂದು ವೇಳೆ ಅಲ್ಲು ಅರ್ಜುನ್ ನಾಯಕತ್ವದ ಹೊಸ ಸಿನಿಮಾವನ್ನು ಅನನ್ಯಾ ಪಾಂಡೆ ಒಪ್ಪಿಕೊಂಡಿರುವುದು ಹೌದಾದರೆ, ಇದು ಅವರ 2ನೇ ತೆಲುಗು ಸಿನಿಮಾ ಆಗಲಿದೆ. ಆದರೆ ಅವರು ಆಯ್ಕೆ ಆಗಿರುವ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಎಲ್ಲವೂ ಗಾಸಿಪ್ ಹಂತದಲ್ಲೇ ಇವೆ. ಅಷ್ಟಕ್ಕೂ ಈ ಸಿನಿಮಾಗೆ ಬೇರೆ ಬೇರೆ ನಾಯಕಿಯರ ಹೆಸರು ಕೇಳಿಬರುತ್ತಿರುವುದು ಯಾಕೆ? ಅದಕ್ಕೂ ಕಾರಣ ಇದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರಿಗೆ ಮೂರು ಪಾತ್ರಗಳು ಇರಲಿವೆ ಎಂದು ಹೇಳಲಾಗುತ್ತಿದೆ. ತಂದೆ ಮತ್ತು ಇಬ್ಬರು ಮಕ್ಕಳ ಪಾತ್ರವನ್ನು ಅಲ್ಲು ಅರ್ಜುನ್ ನಿಭಾಯಿಸಲಿದ್ದಾರೆ ಎಂದು ಗಾಸಿಪ್ ಹಬ್ಬಿದೆ. ಆ ಮೂರು ಪಾತ್ರಗಳಿಗೆ ಜೋಡಿ ಬೇಕಿರುವುದರಿಂದ ಹಲವು ನಟಿಯರ ಹೆಸರುಗಳು ಕೇಳಿಬರುತ್ತಿವೆ.

‘ಸನ್ ಪಿಕ್ಚರ್ಸ್’ ಸಂಸ್ಥೆಯು ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ವಿಎಫ್ಎಕ್ಸ್ ಕೆಲಸ ಬಹಳ ಇರಲಿದೆ. ವಿದೇಶದಲ್ಲಿ ಕೂಡ ಅದರ ತಯಾರಿ ನಡೆಯುತ್ತಿದೆ. ಕೆಲವೇ ದಿನಗಳ ಹಿಂದೆ ಮುಂಬೈನಲ್ಲಿ ಅಲ್ಲು ಅರ್ಜುನ್ ಅವರ ಪಾತ್ರಕ್ಕೆ ಲುಕ್ ಟೆಸ್ಟ್ ಮಾಡಲಾಗಿದೆ ಎಂಬ ಮಾಹಿತಿ ಕೂಡ ಸಿಕ್ಕಿದೆ. ಈ ಎಲ್ಲಾ ವಿಚಾರಗಳಿಂದ ಕೊನೆಯದಾಗಿ ಆಯ್ಕೆಯಾಗುವ ನಾಯಕನಟಿ ಯಾರು ಎಂಬುದನ್ನು ಕಾದು ನೋಡಬೇಕಿದೆ.

 

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!