ಬುರೀಟೊ ಸ್ಥಾಪಕ ಬರ್ಟ್ ಮುಲ್ಲರ್: ಕನ್ನಡ ಅದ್ಭುತ ಭಾಷೆ, ಕಲಿತು ಮಾತನಾಡಿ ಎಂದು ಹೇಳಿಕೆ ನೀಡಿದ್ದಾರೆ….

ಹೊರಗಿನವರು ಬೆಂಗಳೂರಿಗೆ, ಅದರಲ್ಲಿಯೂ ಕರ್ನಾಟಕಕ್ಕೆ ಬಂದರೆ ಕನ್ನಡ ಮಾತನಾಡುವುದಿಲ್ಲ. ಸ್ಥಳೀಯ ಭಾಷೆ ಕಲಿಯಲು ಮುಂದಾಗುತ್ತಿಲ್ಲ ಎಂಬ ಆರೋಪಗಳು ಸಾಮಾನ್ಯ. ಅಂಥದ್ದರಲ್ಲಿ ಇದೀಗ ಅಮೆರಿಕ ಮೂಲದ ಉದ್ಯಮಿ ಬರ್ಟ್ ಮುಲ್ಲರ್ ಕನ್ನಡದಲ್ಲಿ ಮಾತನಾಡಲು ಪ್ರಯತ್ನಿಸುವುದರ ಜೊತೆಗೆ, ಬೆಂಗಳೂರಿಗೆ ಬರುವವರೆಲ್ಲ ಕನ್ನಡ ಮಾತನಾಡಲು ಕಲಿಯಿರಿ ಎಂದು ಕರೆ ಕೊಟ್ಟಿರುವ ವಿಡಿಯೋ ಈಗ ವೈರಲ್ ಆಗ್ತಾ ಇದೆ.

‘ಬೆಂಗಳೂರು ಎಂಬುದು ಭಾರತದ ಅಮೆರಿಕ. ಕನ್ನಡ ಒಂದು ಅದ್ಭುತ ಭಾಷೆ. ಇಲ್ಲಿಗೆ ಬರುವವರೆಲ್ಲ ಕನ್ನಡ ಕಲಿತು ಮಾತನಾಡಲು ಯತ್ನಿಸಬೇಕು’. ಹೀಗೆ ಹೇಳಿದ್ದು ಕರ್ನಾಟಕದ ವ್ಯಕ್ತಿಯಲ್ಲ! ಬೆಂಗಳೂರಿನವರಂತೂ ಅಲ್ಲವೇ ಅಲ್ಲ! ಅಮೆರಿಕದ ಮೂಲದ ಉದ್ಯಮಿ, ಕ್ಯಾಲಿಫೋರ್ನಿಯಾ ಬುರೀಟೊ ಸಂಸ್ಥಾಪಕ ಬರ್ಟ್ ಮುಲ್ಲರ್ ಕನ್ನಡ ಕಲಿಯುವಂತೆ ಕರೆ ನೀಡಿರುವ ವಿಡಿಯೋ ಈಗ ವೈರಲ್ ಆಗುತ್ತಿದೆ.13 ವರ್ಷ ವಯಸ್ಸಿನವರಿದ್ದಾಗ ಅಮೆರಿಕ ತೊರೆದು ಭಾರತಕ್ಕೆ ಬಂದು ಇಲ್ಲಿಯೇ ಅಧ್ಯಯನ ನಡೆಸಿ ದಕ್ಷಿಣ ಕ್ಯಾಲಿಫೋರ್ನಿಯಾ ಮಾದರಿಯ ಬುರೀಟೊ ರೆಸ್ಟೋರೆಂಟ್ ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಹೊರಹೊಮ್ಮಿದ ಬರ್ಟ್ ಮುಲ್ಲರ್ ಸಂದರ್ಶನವೊಂದರಲ್ಲಿ ಕನ್ನಡದ ಬಗ್ಗೆ ಅಭಿಮಾನದ ಮಾತುಗಳನ್ನಾಡಿದ್ದಾರೆ.

ನಾವು ನಮ್ಮವರದ್ದಲ್ಲದ ಸ್ಥಳಕ್ಕೆ ಬಂದಾಗಲೆಲ್ಲಾ, ಆ ಸ್ಥಳದ ಸಂಸ್ಕೃತಿಯ ಬಗ್ಗೆ ಸ್ವಲ್ಪ ಕಲಿಯಲು ಪ್ರಯತ್ನಿಸಬೇಕು ಎಂದು ನಾನು ಭಾವಿಸುತ್ತೇನೆ. ನಾನು ಸ್ವಲ್ಪ ಸ್ವಲ್ಪ ಕನ್ನಡ ಭಾಷೆ ಮಾತನಾಡುತ್ತೇನೆ. ಕನ್ನಡ ಒಂದು ಅದ್ಭುತ ಭಾಷೆ. ಕರ್ನಾಟಕಕ್ಕೆ ಬರುವ ಎಲ್ಲರೂ ಕನ್ನಡ ಭಾಷೆ ಕಲಿಯಬೇಕು. ಮಾತನಾಡಬೇಕು ಎಂದು ಬರ್ಟ್ ಮುಲ್ಲರ್ ಹೇಳಿದ್ದಾರೆ.35 ವರ್ಷ ವಯಸ್ಸಿನ ಮುಲ್ಲರ್, 2010 ರಲ್ಲಿ ಅಧ್ಯಯನ ಪ್ರವಾಸಕ್ಕಾಗಿ ಭಾರತಕ್ಕೆ ಬಂದಿದ್ದರು. ಅನೇಕ ಸ್ನೇಹಿತರು ಯುರೋಪ್ ಮತ್ತು ಸ್ಪೇನ್ನಲ್ಲಿ ಅವಕಾಶಗಳನ್ನು ಹುಡುಕುತ್ತಿದ್ದಾಗ, ಮುಲ್ಲರ್ ಬೆಂಗಳೂರಿನಲ್ಲಿ ಉಳಿಯುವ ನಿರ್ಧಾರ ಕೈಗೊಂಡಿದ್ದರು. ನಂತರ ಇಲ್ಲಿ ಕ್ಯಾಲಿಫೋರ್ನಿಯಾ ಬುರೀಟೊ ರೆಸ್ಟೋರೆಂಟ್ಗಳನ್ನು ಸ್ಥಾಪಿಸಿ ಯಶಸ್ವಿ ಉದ್ಯಮಿಯಾದರು ಎಂದು ವರದಿಯೊಂದು ತಿಳಿಸಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!