ಒಂದೇ ಕುಟುಂಬದ ಮೂವರು ಆತ್ಮಹತ್ಯೆ; ಬಡತನವೇ ಮೂವರನ್ನು ಬಲಿ ತೆಗೆದುಕೊಳ್ತಾ?

ಒಂದೇ ಕುಟುಂಬದ ಮೂವರು ಆತ್ಮಹತ್ಯೆ; ಬಡತನವೇ ಮೂವರನ್ನು ಬಲಿ ತೆಗೆದುಕೊಳ್ತಾ?

ಶಿವಮೊಗ್ಗ ನಗರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿತ್ತು ತಿನ್ನುವ ಬಡತನ, ತಮ್ಮನಿಗೆ ಅನಾರೋಗ್ಯ, ಬೆಳೆದು ನಿಂತ ಮಗ ನೆಟ್ಟಗೆ ದುಡಿಯಲಿಲ್ಲ. ಹೀಗಾಗಿ ಮಹಿಳೆಯೇ ದುಡಿದು ಸಂಸಾರ ನಡೆಸುತ್ತಿದ್ದಳು. ಮನೆಯಲ್ಲಿ ಒಬ್ಬಳೇ ದುಡಿದು ಸಾಕಾಗಿ ಹೋಗಿದ್ದ ಮಹಿಳೆಯು ಇಬ್ಬರಿಗೂ ವಿಷಕೊಟ್ಟು ತಾನು ವಿಷಸೇವಿಸಿ ಆತ್ಮಹತ್ಯೆ ಶರಣಾಗಿದ್ದಾಳೆ

ಶಿವಮೊಗ್ಗ ನಗರದ ಓಟಿ ರಸ್ತೆಯಲ್ಲಿರುವ ಆಜಾದ್ ನಗರದ ಮುಖ್ಯ ರಸ್ತೆಯಲ್ಲಿ ಎಲ್ಲರೂ ಬೆಚ್ಚಿ ಬೀಳುವ ಘಟನೆ ನಡೆದಿತ್ತು. ಕಳೆದ ಎರಡು ದಿನಗಳ ಹಿಂದೆ ಮನೆಯ ಯಜಮಾನಿ ಭುವನೇಶ್ವರಿ (40) ಮತ್ತು ಈಕೆಯ ತಮ್ಮ ಮಾರುತಿ (38) ಹಾಗೂ ಮಗ ದರ್ಶನ (22) ಮೂವರು ಮೂವರು ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದ. ಭುವನೇಶ್ವರಿ ಹೊಟೇಲ್ ಕೆಲಸ ಮಾಡಿಕೊಂಡಿದ್ದಳು. ಇಡೀ ಕುಟುಂಬದ ಜವಾಬ್ದಾರಿಯು ಮಹಿಳೆಯ ಮೇಲೆ ಇತ್ತು. ಮನೆಯಲ್ಲಿ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದ ತಮ್ಮ ಮತ್ತು ವಯಸ್ಸಿಗೆ ಬಂದ ಮಗನು ನೆಟ್ಟಿಗೆ ದುಡಿಯುತ್ತಿರಲಿಲ್ಲ. ಈ ಇಬ್ಬರು ದುಡಿಯದೇ ಇರುವುದು ದೊಡ್ಡ ಸಮಸ್ಯೆಯಾಗಿತ್ತು

ಷ್ಟೇ ಹೇಳಿದರೂ ಇಬ್ಬರು ಯಾವುದೇ ಜವಾಬ್ದಾರಿ ತೆಗೆದುಕೊಳ್ಳಲಿಲ್ಲ. ಇದರಿಂದ ರೋಸಿ ಹೋಗಿದ್ದ ತಾಯಿ ಮೊನ್ನೆ(ಆ.11) ರಾತ್ರಿ ಇಬ್ಬರಿಗೂ ಊಟದಲ್ಲಿ ವಿಷ ಕೊಟ್ಟು ಕೊಂದಿದ್ದಾಳೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮನೆ ಒಳಗೆಯಿಂದ ಲಾಕ್ ಆಗಿತ್ತು. ಅಕ್ಕ-ಪಕ್ಕದವರಿಗೆ ಶವದ ದುರ್ವಾಸನೆ ಬರುವುದಕ್ಕೆ ಶುರುವಾಗಿದೆ. ಬಳಿಕ ಕಿಟಕಿ ಗಾಜು ಒಡೆದು ನೋಡಿದಾಗ ಮೂವರು ಮೃತಪಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ. ಈ ಮೂವರು ಸಾವು ಕಂಡು ಕುಟುಂಬಸ್ಥರಿಗೆ ದೊಡ್ಡ ಆಘಾತವಾಗಿದ್ದು, ಸಂಬಂಧಿಗಳ ಅಕ್ರಂದನ ಮುಗಿಲು ಮುಟ್ಟಿದೆ.

  • Related Posts

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

      ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

      ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!