ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಜಾಗತಿಕ ಮೂಲ ಆದಾಯ (ಯುನಿವರ್ಸಲ್ ಬೇಸಿಕ್ ಇನ್‌ಕಮ್) ಪರಿಕಲ್ಪನೆಯನ್ನು ಅತಿದೊಡ್ಡ ಪ್ರಮಾಣದಲ್ಲಿ ಸಾಕಾರಗೊಳಿಸುತ್ತಿರುವ ರಾಜ್ಯ ಕರ್ನಾಟಕ ಎಂಬುದು ಹೆಮ್ಮೆಯ ವಿಷಯವಾಗಿದೆ.ಈ ಯೋಜನೆಗಳು ಮುಂದುವರಿಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಲ್ಲಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕರ್ನಾಟಕ ಸರ್ಕಾರ, ಬೃಹತ್ ಬೆಂಗಳೂರು ಮಹಾನಗರಪಾಲಿಕೆ,ಬೆಂಗಳೂರು ನಗರ ಜಿಲ್ಲಾಡಳಿತ ಸಹಯೋಗದಲ್ಲಿ ಆಯೋಜಿಸಲಾಗಿದ್ದ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ,ಗೌರವ ರಕ್ಷೆ ಸ್ವೀಕರಿಸಿ ಅವರು ಮಾತನಾಡಿದರು

ಗೃಹಲಕ್ಷ್ಮಿ,ಶಕ್ತಿ,ಗೃಹಜ್ಯೋತಿ,ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿಯುತ್ತಿರುವವರಿಗೆ ರಾಜ್ಯದಲ್ಲಿ ಆರ್ಥಿಕ ಪ್ರಗತಿ ಪ್ರಗತಿ ಸಾಧಿಸಿ ತೋರಿಸುವ ಮೂಲಕ ನಾವು ಉತ್ತರ ನೀಡಲಿದ್ದೇವೆ.ಹೊಸ ಅವಿಷ್ಕಾರಗಳನ್ನು ನಡೆಸಿ ಅವು ಫಲಾನುಭವಿಗಳಿಗೆ ಇನ್ನಷ್ಟು ಹೆಚ್ಚು ನೆರವಾಗುವ ರೀತಿಯ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಉದ್ಯುಕ್ತವಾಗಿದೆ ಎಂದರು.

ಶಕ್ತಿ ಯೋಜನೆಯಡಿ ಮಹಿಳೆಯರು 270 ಕೋಟಿ ಟ್ರಿಪ್ ಉಚಿತ ಪ್ರಯಾಣ ಸೌಲಭ್ಯ ಪಡೆದಿದ್ದಾರೆ. ಮಹಿಳೆಯರು 6541 ಕೋಟಿ ರೂ.ಗಳಷ್ಟು ಪ್ರಯಾಣ ವೆಚ್ಚ ಉಳಿತಾಯ ಮಾಡಿದ್ದಾರೆ. ಅನ್ನ ಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರದ ಅಸಹಕಾರದಿಂದಾಗಿ ಅಕ್ಕಿಯ ಬದಲಿಗೆ ನಗದು ವರ್ಗಾವಣೆ ಮಾಡಲಾಗುತ್ತಿದೆ. ನಮ್ಮ ಸರ್ಕಾರದ ಜನಕಲ್ಯಾಣ ಯೋಜನೆಗಳು ಐದು ಗ್ಯಾರಂಟಿಗಳಿಗಷ್ಟೇ ಸೀಮಿತವಾಗಿಲ್ಲ,ದುರ್ಬಲ ವರ್ಗದವರಿಗೆ ಸಾಮಾಜಿಕ ಭದ್ರತೆ ನೀಡುವ ವಿವಿಧ ಯೋಜನೆಗಳಡಿ 13,027 ಕೋಟಿ ರೂ.ವೆಚ್ಚ ಮಾಡಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!