ಮಾನವೀಯತೆಗೆ ಮಾದರಿಯಾದ ಮಾನವ…. ದೇವರಂತೆ ಬಂದು ಅಜ್ಜಿ ಹಾಗೂ ಗೋವಿನ ಹಸಿವು ನೀಗಿಸಿದ ವ್ಯಕ್ತಿ…

ಇದು ಕಲಿಯುಗ, ಎಂತಹ ಚಿತ್ರ ವಿಚಿತ್ರ ಘಟನೆಗಳನ್ನು ನಾವು ನೋಡ್ತಾ ಇರ್ತೀವಿ ಹಾಗೂ ಕೇಳ್ತಾ ಇರ್ತೀವಿ. ಹೆತ್ತ ತಂದೆ ತಾಯಿಗಳನ್ನೇ ನೋಡಿಕೊಳ್ಳಲು ಹಿಂಜರಿಯುವ ಈ ಕಾಲದಲ್ಲಿ ವ್ಯಕ್ತಿಯೊಬ್ಬ ತರಕಾರಿ ಮಾರುವ ಅಜ್ಜೀ ಹಾಗೂ ಹಸುವಿನ ಹೊಟ್ಟೆ ತುಂಬಿಸಿದ್ದಾನೆ.ಕೆಲವರು ಏನು ಪ್ರತಿಫಲ ಅಪೇಕ್ಷಿಸದೇ ಇನ್ನೊಬ್ಬರಿಗೆ ಸಹಾಯ ಮಾಡುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಇಂತಹ ಕೆಲವು ವಿಡಿಯೋಗಳು ಮನಸ್ಸಿಗೆ ತುಂಬಾನೇ ಹತ್ತಿರವಾಗುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬನು ದುಡಿಯುವ ಕೈಗೆ ಆಸರೆಯಾಗದ್ದು, ಹಸಿದ ಗೋವಿಗೆ ಅನ್ನದಾತನಾಗಿದ್ದು, ಅದರಲ್ಲೇ ಸಂತೋಷ ಕಂಡುಕೊಂಡಿದ್ದಾನೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈ ವ್ಯಕ್ತಿಯ ಹೃದಯಶ್ರೀಮಂತಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈಗಿನ ಕಾಲದಲ್ಲಿ ಮಾನವೀಯತೆ ಹಾಗೂ ಇನ್ನೊಬ್ಬರ ಕಷ್ಟಕ್ಕೆ ಮಿಡಿಯುವ ವ್ಯಕ್ತಿಗಳನ್ನು ನೋಡುವುದೇ ಕಷ್ಟ. ಒಬ್ಬರ ಹಸಿವನ್ನು ನೀಗಿಸುವುದು ಹಾಗೂ ಮುಖದಲ್ಲಿ ನಗು ತರಿಸುವುದು ಅಷ್ಟು ಸುಲಭವಲ್ಲ. ಈಗಿನ ಕಾಲದಲ್ಲಿ ಎಲ್ಲರಿಗೂ ಇಂತಹ ಮನಸ್ಸು ಇರುವುದಿಲ್ಲ. ಆದರೆ ಕಷ್ಟಕ್ಕೆ ಮರುಗುವ, ಇನ್ನೊಬ್ಬರಿಗೆ ಸಾಹಸ ಮಾಡುವ ವ್ಯಕ್ತಿಗಳನ್ನು ಕಂಡಾಗ ನಿಜಕ್ಕೂ ಖುಷಿಯಾಗುತ್ತದೆ. ಇದಕ್ಕೆ ಉದಾಹರಣೆ ಎನ್ನುವಂತಹ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಇಲ್ಲೊಬ್ಬ ಮಹಾನುಭಾವ ಗೋವಿನ ಹಸಿವನ್ನು ನೀಗಿಸಿ, ಹಿರಿ ಜೀವಕ್ಕೆ ಆಸರೆಯಾಗುವ ಮೂಲಕ ಅಜ್ಜಿಯ ಮುಖದಲ್ಲಿ ನಗುವನ್ನು ಮೂಡಿಸಿದ್ದಾನೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈ ವ್ಯಕ್ತಿಯೂ ಗುಣವನ್ನು ಕೊಂಡಾಡಿದ್ದಾರೆ.

ವ್ಯಕ್ತಿಯೊಬ್ಬನು ಕ್ಯಾರೆಟ್ ತಿನ್ನುತ್ತಾ ನಿಂತಿರುವುದನ್ನು ನೋಡಬಹುದು. ಆ ಬಳಿಕ ಗೋವೊಂದು ಈತನ ಬಳಿ ಬಂದು ಕೈಯಲ್ಲಿದ್ದ ಕ್ಯಾರೆಟ್ ತಿಂದಿದೆ. ತದನಂತರದಲ್ಲಿ ರಸ್ತೆಯ ಬಳಿ ಕ್ಯಾರೆಟ್ ಮಾರಾಟ ಮಾಡುತ್ತಿದ್ದ ಅಜ್ಜಿಯ ಬಳಿ ಹೋಗಿದ್ದು ಆಕೆಯ ಬಳಿಯಿದ್ದ ಎಲ್ಲಾ ಕ್ಯಾರೆಟನ್ನು ತಾನೇ ಖರೀದಿಸಿದ್ದಾನೆ. ಅಜ್ಜಿಯ ಕೈಗೆ ಒಂದಿಷ್ಟು ಹಣವನ್ನು ಇಟ್ಟು ಅಲ್ಲಿಂದ ಹೊರಟಿದ್ದಾನೆ. ತದನಂತರದಲ್ಲಿ ತಾನು ಖರೀದಿಸಿರುವ ಕ್ಯಾರೆಟ್ ಎಲ್ಲವನ್ನು ಅಲ್ಲೇ ಇದ್ದ ಹಸುಗಳಿಗೆ ತಿನ್ನಲು ಇಟ್ಟು ಅವುಗಳ ಹಸಿವನ್ನು ನೀಗಿಸಿರುವುದನ್ನು ನೀವಿಲ್ಲಿ ನೋಡಬಹುದು.ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಐದು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ಬಳಕೆದಾರರು ಈತನ ಮಾಡಿದ ಒಳ್ಳೆಯ ಕೆಲಸಕ್ಕೆ ಮೆಚ್ಚುಗೆಯ ಸುರಿಮಳೆಗೈದಿದ್ದಾರೆ. ಬಳಕೆದಾರರೊಬ್ಬರು, ‘ಪ್ರಾಣಿಗಳು ಒಳ್ಳೆಯ ವ್ಯಕ್ತಿಗಳನ್ನು ಬಹುಬೇಗನೇ ಗುರುತಿಸುತ್ತವೆ’ ಎಂದಿದ್ದಾರೆ. ಇನ್ನೊಬ್ಬರು, ‘ಇಂತಹ ವ್ಯಕ್ತಿಗಳನ್ನು ನೋಡಿದಾಗ ನಿಜಕ್ಕೂ ಖುಷಿಯಾಗುತ್ತದೆ. ಸ್ವಾರ್ಥಿಗಳ ಪ್ರಪಂಚದಲ್ಲಿ ಈ ವ್ಯಕ್ತಿ ಮಾಡುವ ಕೆಲಸಗಳು ಎಲ್ಲರಿಗೂ ಮಾದರಿ’ ಎಂದು ಕಾಮೆಂಟ್ ನಲ್ಲಿ ಬರೆದುಕೊಂಡಿದ್ದಾರೆ. ಮತ್ತೊರ್ವ ಬಳಕೆದಾರರು, ‘ಈ ಜಗತ್ತಿನ ಎಲ್ಲಾ ಗೌರವವು ನಿಮ್ಮಂತಹ ವ್ಯಕ್ತಿಗೆ ಸಿಗಬೇಕು’ಎಂದಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು