RCB vs CSK ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿ.

ಇಂಡಿಯನ್ ಪ್ರೀಮಿಯರ್ ಲೀಗ್ನ 52ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ತಂಡ 20 ಓವರ್ಗಳಲ್ಲಿ 213 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 16.2 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 172 ರನ್ ಕಲೆಹಾಕಿದ್ದರು. ಅದರಂತೆ ಕೊನೆಯ 22 ಎಸೆತಗಳಲ್ಲಿ ಸಿಎಸ್ಕೆ ತಂಡಕ್ಕೆ ಕೇವಲ 42 ರನ್ಗಳ ಅವಶ್ಯಕತೆಯಿತ್ತು.


ಈ ಹಂತದಲ್ಲಿ ಕಣಕ್ಕಿಳಿದ ಡೆವಾಲ್ಡ್ ಬ್ರೆವಿಸ್ ಲುಂಗಿ ಎನ್ಗಿಡಿ ಎಸೆತದಲ್ಲಿ ಎಲ್ಬಿ ಆಗಿದ್ದರು. ಆರ್ಸಿಬಿ ಆಟಗಾರರ ಮನವಿಗೆ ಅಂಪೈರ್ ಎಲ್ಬಿಡಬ್ಲ್ಯೂ ಔಟ್ ನೀಡಿದರು. ಆದರೆ ನಿಯಮ ಗೊತ್ತಿಲ್ಲದೆ ಬ್ಯಾಟರ್ಗಳು ರನ್ ಕದಿಯಲು ಓಡಿದ್ದು ಸಿಎಸ್ಕೆ ಪಾಲಿಗೆ ದುಬಾರಿಯಾಯಿತು.ಐಪಿಎಲ್ ನಿಯಮದ ಪ್ರಕಾರ, ಎಲ್ಬಿಡಬ್ಲ್ಯೂ ಆದರೆ 15 ಸೆಕೆಂಡ್ಗಳ ಒಳಗೆ ಡಿಆರ್ಎಸ್ಗೆ ಮನವಿ ಸಲ್ಲಿಸಬೇಕು. ಅದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ, ಮನವಿಯನ್ನು ತಿರಸ್ಕರಿಸಲಾಗುತ್ತದೆ. ಆದರೆ ಈ ನಿಯಮದ ಬಗ್ಗೆ ಅರಿವಿಲ್ಲದೆ, ಡೆವಾಲ್ಡ್ ಬ್ರೆವಿಸ್ ಹಾಗೂ ರವೀಂದ್ರ ಜಡೇಜಾ 2 ರನ್ ಓಡಿದ್ದಾರೆ. ಅದರಲ್ಲೂ ಒಂದು ರನ್ ಕಲೆಹಾಕಿದ ಬಳಿಕ ಡಿಆರ್ಎಸ್ಗೆ ಮನವಿ ಸಲ್ಲಿಸಿದ್ದರೂ ಬ್ರೆವಿಸ್ ಅವರಿಗೆ ರಿವ್ಯೂ ಲಭಿಸುತ್ತಿತ್ತು.

ಇದರ ಪರಿಕಲ್ಪನೆಯೇ ಇಲ್ಲದೆ, ರವೀಂದ್ರ ಜಡೇಜಾ ಡೆವಾಲ್ಡ್ ಬ್ರೆವಿಸ್ ಅವರನ್ನು 2ನೇ ರನ್ಗಾಗಿ ಕರೆದಿದ್ದಾರೆ. ಇತ್ತ ಕಡೆಯಿಂದ ಸ್ಟ್ರೈಕ್ನತ್ತ ಓಡಿದ ಬ್ರೆವಿಸ್ ಆ ಬಳಿಕ ಜಡೇಜಾ ಜೊತೆ ಚರ್ಚಿಸಿ ಡಿಆರ್ಎಸ್ಗೆ ಮನವಿ ಸಲ್ಲಿಸಿದ್ದಾರೆ. ಅಷ್ಟರಲ್ಲಾಗಲೇ ಟೈಮರ್ 25 ಸೆಕೆಂಡ್ಗಳನ್ನು ದಾಟಿತ್ತು. ಅಂದರೆ 15 ಸೆಕೆಂಡ್ಗಳಲ್ಲಿ ತೆಗೆದುಕೊಳ್ಳಬೇಕಾದ ರಿವ್ಯೂ ಅನ್ನು ಬ್ರೆವಿಸ್ 25 ಸೆಕೆಂಡ್ಗಳ ಬಳಿಕ ತೆಗೆದುಕೊಂಡಿದ್ದಾರೆ. ಹೀಗಾಗಿ ಅಂಪೈರ್ ಮನವಿಯನ್ನು ತಿರಸ್ಕರಿಸಿದರು.

ಇದರಿಂದಾಗಿ ಡೆವಾಲ್ಡ್ ಬ್ರೆವಿಸ್ ಮೇಲ್ಮನವಿ ಇಲ್ಲದೆ ಪೆವಿಲಿಯನ್ಗೆ ಹಿಂತಿರುಗಬೇಕಾಯಿತು. ಕುತೂಹಲಕಾರಿ ವಿಷಯ ಎಂದರೆ ಅದು ನಾಟೌಟ್ ಆಗಿತ್ತು. ಅಂದರೆ ರಿಪ್ಲೇ ವಿಡಿಯೋದಲ್ಲಿ ಡೆವಾಲ್ಡ್ ಬ್ರೆವಿಸ್ ಕಾಲಿಗೆ ತಾಗಿದ ಚೆಂಡು ವಿಕೆಟ್ನಿಂದ ದೂರ ಸಾಗುತ್ತಿರುವುದು ಕಂಡು ಬಂದಿದೆ. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ, ಅಂಪೈರ್ ಔಟ್ ಎಂದು ತೀರ್ಪು ನೀಡಿದ ಬಳಿಕ ಓಡಿದ ರನ್ಗಳನ್ನು ಪರಿಗಣಿಸಲಾಗುವುದಿಲ್ಲ ಎಂಬುದು. ಅಲ್ಲದೆ ಡಿಆರ್ಎಸ್ ತೆಗೆದುಕೊಳ್ಳುವ ಮುನ್ನ ಓಡಿದ ರನ್ಗಳನ್ನು ನೀಡಲಾಗುವುದಿಲ್ಲ.

ಈ ಸಾಮಾನ್ಯ ನಿಯಮಗಳು ಕೂಡ ರವೀಂದ್ರ ಜಡೇಜಾ ಹಾಗೂ ಡೆವಾಲ್ಡ್ ಬ್ರೆವಿಸ್ಗೆ ಗೊತ್ತಿರಲಿಲ್ಲ. ಪರಿಣಾಮ ಡಿಆರ್ಎಸ್ ತೆಗೆದುಕೊಳ್ಳದೇ ರನ್ಗಾಗಿ ಓಡಿದ್ದಾರೆ. ಹೀಗೆ ರನ್ಗಳಿಸಲು ಓಡಿದ್ದರ ಪರಿಣಾಮ ಡೆವಾಲ್ಡ್ ಬ್ರೆವಿಸ್ ಡಿಆರ್ಎಸ್ ಅವಕಾಶವನ್ನು ತಪ್ಪಿಸಿಕೊಂಡರು. ಅಲ್ಲದೆ ನಾಟೌಟ್ ಆಗಿದ್ದರೂ, ರಿವ್ಯೂ ಅವಕಾಶವಿಲ್ಲದೆ ಬ್ರೆವಿಸ್ ಪೆವಿಲಿಯನ್ ಸೇರಬೇಕಾಯಿತು. ಒಂದು ವೇಳೆ ಅತ್ಯುತ್ತಮ ಫಾರ್ಮ್ನಲ್ಲಿದ್ದ ಬ್ರೆವಿಸ್ ಕಡೆಯಿಂದ ಒಂದೆರಡು ಬಿಗ್ ಹಿಟ್ ಮೂಡಿಬಂದಿದ್ದರೆ ಸಿಎಸ್ಕೆ ತಂಡವು ಗೆಲ್ಲುವ ಅವಕಾಶವಿರುತ್ತಿತ್ತು. ಆದರೆ ಡಿಆರ್ಎಸ್ ನಿಯಮ ಗೊತ್ತಿಲ್ಲದೆ ಸಿಎಸ್ಕೆ ಬ್ಯಾಟರ್ಗಳು ಮಾಡಿದ ಪ್ರಮಾದದಿಂದಾಗಿ ಚೆನ್ಣೈ ಸೂಪರ್ ಕಿಂಗ್ಸ್ ತಂಡವು 2 ರನ್ಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು