ಸಸ್ಪೆಂಡ್ ಆದ ಪೊಲೀಸ್ ಪೇದೆ ಸಲೀಂ ಪಾಷಾಗೆ ಸಿಎಂ ಮೆಡಲ್…

ಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಜೊತೆ ಸಂಪರ್ಕ, ಸಾರ್ವಜನಿಕರ ಆಸ್ತಿ ಕಳುವಿಗೆ ಪರೋಕ್ಷ ಸಹಾಯ, ದಾಖಲೆಗಳ ಸೋರಿಕೆ ಮಾಡುವ ಶಂಕೆ ಇವೆಲ್ಲಾ ಆರೋಪಗಳ ಹಿನ್ನಲೆ ಅಮಾನತಾದ ಮೈಸೂರು ಸಿಸಿಬಿ ಘಟಕದ ಮುಖ್ಯಪೇದೆ ಸಲೀಂ ಪಾಷಾಗೆ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ.

ಒಂದು ತಿಂಗಳ ಹಿಂದೆ ಅಮಾನತಾದ ಸಲೀಂ ಪಾಷಾಗೆ ಮುಖ್ಯಮಂತ್ರಿಗಳ ಪದಕದ ಪಟ್ಟಿಯಲ್ಲಿ ಮುಖ್ಯಪೇದೆ ಸಲೀಂ ಪಾಷಾ ಹೆಸರು ಪ್ರಕಟವಾಗಿದ್ದು ಅಚ್ಚರಿಗೆ ಕಾರಣವಾಗಿದೆ. 2023 ನೇ ಸಾಲಿಗೆ ಆಯ್ಕೆಯಾದವರ ಸಿಬ್ಬಂದಿ ಅಧಿಕಾರಿಗಳ ಪಟ್ಟಿಯಲ್ಲಿ ಮುಖ್ಯಪೇದೆ ಸಲಾಂ ಪಾಷಾ ಹೆಸರು ಪ್ರಕಟವಾಗಿದೆ. ಮೇಟಗಳ್ಳಿ ಹಾಗೂ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕನ್ನಕಳುವು ಹಾಗೂ ಗಾಂಜಾ ಪ್ರಕರಣಗಳ ಆರೋಪಿಗಳ ಸಂಭಂಧಿಕರ ಜೊತೆ ಸಂಪರ್ಕ ಇಟ್ಟುಕೊಂಡಿರುವ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿದೆ.

ಸಮಾಜಘಾತುಕ ಶಕ್ತಿಗಳ ಜೊತೆ ಕೈಜೋಡಿಸಿ ಸಾರ್ವಜನಿಕರ ಸ್ವತ್ತು ಕಳುವಾಗಲು ಕಾರಣೀಭೂತರಾಗಿರುತ್ತಾರೆ.ಇದರಿಂದಾಗಿ ಮುಂದಿನ ದಿನಗಳಲ್ಲಿ ಇಲಾಖೆಯ ಆಂತರಿಕ ಮತ್ತು ಗುಪ್ತಮಾಹಿತಿಗಳು ಸೋರಿಕೆಯಾಗಿ ಸಾರ್ವಜನಿಕರ ಸ್ವತ್ತುಗಳು ಹೆಚ್ಚು ಹೆಚ್ಚಾಗಿ ಕಾಣೆಯಾಗುವ ಸಾಧ್ಯತೆಗಳು ಇರುವುದಾಗಿ ಕಾರಣ ನೀಡಿ ಸಲೀಂ ಪಾಷಾ ರವರನ್ನ ಸಸ್ಪೆಂಡ್ ಮಾಡಲಾಗಿದೆ. ಹೀಗಿದ್ದೂ ಸಲೀಂ ಪಾಷಾ ಹೆಸರು ಮುಖ್ಯಮಂತ್ರಿಗಳ ಪದಕ ಗಳಿಸುವಲ್ಲಿ ಯಶಸ್ವಿಯಾಗಿರುವುದು ಇಲಾಖಾ ವ್ಯವಸ್ಥೆಯನ್ನ ಅನುಮಾನದಿಂದ ನೋಡುವಂತಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!