ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದರೂ ಸಹ RCB ಪ್ಲೇಆಫ್ಗೆ ಪ್ರವೇಶಿಸಿಲ್ಲ..!

ಇಂಡಿಯನ್ ಪ್ರೀಮಿಯರ್ ಲೀಗ್ನ 52 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ RCB ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ. ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 8 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 3 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ.

ಈ ಮೂಲಕ ಒಟ್ಟು 16 ಅಂಕಗಳನ್ನು ಪಡೆದಿರುವ ಆರ್ಸಿಬಿ ತಂಡ ಇನ್ನೂ ಸಹ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಲ್ಲ. ಏಕೆಂದರೆ ಲೀಗ್ ಹಂತದಲ್ಲಿ ಇನ್ನೂ 18 ಪಂದ್ಯಗಳಿವೆ. ಈ ಮ್ಯಾಚ್ಗಳ ಮೂಲಕ 5 ತಂಡಗಳಿಗೆ 18 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯುವ ಅವಕಾಶವಿದೆ. ಹೀಗಾಗಿಯೇ 16 ಅಂಕಗಳನ್ನು ಹೊಂದಿದ್ದರೂ ಆರ್ಸಿಬಿ ಅಧಿಕೃತವಾಗಿ ಪ್ಲೇಆಫ್ಗೆ ಪ್ರವೇಶಿಸಿಲ್ಲ.

ಅತ್ತ ಕಡೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನೂ 3 ಪಂದ್ಯಗಳಿದ್ದು, ಈ ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ ಒಟ್ಟು 20 ಅಂಕಗಳನ್ನು ಪಡೆಯಬಹುದು. ಹಾಗೆಯೇ ಗುಜರಾತ್ ಟೈಟಾನ್ಸ್ ತಂಡವು ಮುಂದಿನ 4 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ 22 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಬಹುದು.

ಇನ್ನು ಪಂಜಾಬ್ ಕಿಂಗ್ಸ್ ತಂಡವು ಮುಂದಿನ 4 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 21 ಅಂಕಗಳನ್ನು ಪಡೆಯಲಿದೆ. ಅದೇ ರೀತಿ LSG ಹಾಗೂ DC ತಂಡಗಳು ಮುಂದಿನ 4 ಮ್ಯಾಚ್ಗಳಲ್ಲೂ ಗೆಲುವು ದಾಖಲಿಸಲು ಯಶಸ್ವಿಯಾದರೆ ಒಟ್ಟು 20 ಅಂಕಗಳನ್ನು ಪಡೆದುಕೊಳ್ಳಲಿದೆ.

ಇತ್ತ ಐದು ತಂಡಗಳಿಗೆ 16 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯುವ ಅವಕಾಶ ಇರುವ ಕಾರಣ ಆರ್ಸಿಬಿ ತಂಡದ ಪ್ಲೇಆಫ್ ಪ್ರವೇಶ ಇನ್ನೂ ಸಹ ಖಚಿತವಾಗಿಲ್ಲ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಧಿಕೃತವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಬೇಕಿದ್ದರೆ ಮುಂದಿನ ಮೂರು ಮ್ಯಾಚ್ಗಳಲ್ಲಿ 2 ಗೆಲುವು ದಾಖಲಿಸುವುದು ಅನಿವಾರ್ಯ.

ಇನ್ನು ಆರ್ಸಿಬಿ ತಂಡದ ಮುಂದಿನ ಎದುರಾಳಿಗಳು ಯಾರೆಂದು ನೋಡುವುದಾದರೆ… LSG (ಮೇ.9), SRH (ಮೇ.13) ಹಾಗೂ KKR (ಮೇ.17). ಈ ತಂಡಗಳ ವಿರುದ್ಧದ ಗೆಲುವು ದಾಖಲಿಸಿದರೆ ಆರ್ಸಿಬಿ ತಂಡವು ಅಧಿಕೃತವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!