ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದರೂ ಸಹ RCB ಪ್ಲೇಆಫ್ಗೆ ಪ್ರವೇಶಿಸಿಲ್ಲ..!

ಇಂಡಿಯನ್ ಪ್ರೀಮಿಯರ್ ಲೀಗ್ನ 52 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ RCB ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ. ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 8 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 3 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ.

ಈ ಮೂಲಕ ಒಟ್ಟು 16 ಅಂಕಗಳನ್ನು ಪಡೆದಿರುವ ಆರ್ಸಿಬಿ ತಂಡ ಇನ್ನೂ ಸಹ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಲ್ಲ. ಏಕೆಂದರೆ ಲೀಗ್ ಹಂತದಲ್ಲಿ ಇನ್ನೂ 18 ಪಂದ್ಯಗಳಿವೆ. ಈ ಮ್ಯಾಚ್ಗಳ ಮೂಲಕ 5 ತಂಡಗಳಿಗೆ 18 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯುವ ಅವಕಾಶವಿದೆ. ಹೀಗಾಗಿಯೇ 16 ಅಂಕಗಳನ್ನು ಹೊಂದಿದ್ದರೂ ಆರ್ಸಿಬಿ ಅಧಿಕೃತವಾಗಿ ಪ್ಲೇಆಫ್ಗೆ ಪ್ರವೇಶಿಸಿಲ್ಲ.

ಅತ್ತ ಕಡೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನೂ 3 ಪಂದ್ಯಗಳಿದ್ದು, ಈ ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ ಒಟ್ಟು 20 ಅಂಕಗಳನ್ನು ಪಡೆಯಬಹುದು. ಹಾಗೆಯೇ ಗುಜರಾತ್ ಟೈಟಾನ್ಸ್ ತಂಡವು ಮುಂದಿನ 4 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ 22 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಬಹುದು.

ಇನ್ನು ಪಂಜಾಬ್ ಕಿಂಗ್ಸ್ ತಂಡವು ಮುಂದಿನ 4 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 21 ಅಂಕಗಳನ್ನು ಪಡೆಯಲಿದೆ. ಅದೇ ರೀತಿ LSG ಹಾಗೂ DC ತಂಡಗಳು ಮುಂದಿನ 4 ಮ್ಯಾಚ್ಗಳಲ್ಲೂ ಗೆಲುವು ದಾಖಲಿಸಲು ಯಶಸ್ವಿಯಾದರೆ ಒಟ್ಟು 20 ಅಂಕಗಳನ್ನು ಪಡೆದುಕೊಳ್ಳಲಿದೆ.

ಇತ್ತ ಐದು ತಂಡಗಳಿಗೆ 16 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯುವ ಅವಕಾಶ ಇರುವ ಕಾರಣ ಆರ್ಸಿಬಿ ತಂಡದ ಪ್ಲೇಆಫ್ ಪ್ರವೇಶ ಇನ್ನೂ ಸಹ ಖಚಿತವಾಗಿಲ್ಲ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಧಿಕೃತವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಬೇಕಿದ್ದರೆ ಮುಂದಿನ ಮೂರು ಮ್ಯಾಚ್ಗಳಲ್ಲಿ 2 ಗೆಲುವು ದಾಖಲಿಸುವುದು ಅನಿವಾರ್ಯ.

ಇನ್ನು ಆರ್ಸಿಬಿ ತಂಡದ ಮುಂದಿನ ಎದುರಾಳಿಗಳು ಯಾರೆಂದು ನೋಡುವುದಾದರೆ… LSG (ಮೇ.9), SRH (ಮೇ.13) ಹಾಗೂ KKR (ಮೇ.17). ಈ ತಂಡಗಳ ವಿರುದ್ಧದ ಗೆಲುವು ದಾಖಲಿಸಿದರೆ ಆರ್ಸಿಬಿ ತಂಡವು ಅಧಿಕೃತವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!