11 ವರ್ಷಗಳ ನಂತರ ಅಂಕ ಪಟ್ಟಿಯಲ್ಲಿ ಮೇಲೆ ಬಂದ ಪಂಜಾಬ್ ಕಿಂಗ್ಸ್….

ಈ ಬಾರಿ ಪಂಜಾಬ್ ಕಿಂಗ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸುತ್ತಿದ್ದು, ತಂಡವನ್ನು ಉತ್ತಮ ದಡ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಬಹುದು. ಇಂಡಿಯನ್ ಪ್ರೀಮಿಯರ್ ಲೀಗ್ನ 54ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 236 ರನ್ ಕಲೆಹಾಕಿದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡ 20 ಓವರ್ಗಳಲ್ಲಿ 199 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ 37 ರನ್ಗಳ ಜಯ ಸಾಧಿಸಿ ಪಂಜಾಬ್ ಪಡೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದೆ.

ಈ ಬಾರಿಯ ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಈವರೆಗೆ ಆಡಿದ 11 ಪಂದ್ಯಗಳಲ್ಲಿ 7 ಜಯ ಹಾಗೂ ಒಂದು ಡ್ರಾನೊಂದಿಗೆ ಪಂಜಾಬ್ ಕಿಂಗ್ಸ್ ತಂಡ ಒಟ್ಟು 15 ಅಂಕಗಳನ್ನು ಪಡೆದುಕೊಂಡಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದೆ. ವಿಶೇಷ ಎಂದರೆ ಪಂಜಾಬ್ ಕಿಂಗ್ಸ್ ತಂಡವು ಬರೋಬ್ಬರಿ 11 ವರ್ಷಗಳ ಬಳಿಕ 15 ಅಂಕಗಳನ್ನು ಪಡೆದುಕೊಂಡಿದೆ. ಅಂದರೆ ಕಳೆದ ಹನ್ನೊಂದು ಸೀಸನ್ಗಳಲ್ಲಿ 14 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯಲು ಪಂಜಾಬ್ ಪಡೆಗೆ ಸಾಧ್ಯವಾಗಿಲ್ಲ. 2014 ರಲ್ಲಿ 22 ಅಂಕಗಳನ್ನು ಪಡೆದಿದ್ದೇ ಶ್ರೇಷ್ಠ ಸಾಧನೆ.

ಇದಾದ ಬಳಿಕ ಒಮ್ಮೆಯೂ ಪಂಜಾಬ್ ಕಿಂಗ್ಸ್ ತಂಡ 7 ಕ್ಕಿಂತ ಹೆಚ್ಚಿನ ಪಂದ್ಯಗಳನ್ನು ಗೆದ್ದಿರಲಿಲ್ಲ ಎಂದರೆ ನಂಬಲೇಬೇಕು. ಆದರೆ ಈ ಬಾರಿಯ ಟೂರ್ನಿಯಲ್ಲಿ 7 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಒಂದು ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಇದರೊಂದಿಗೆ ಒಟ್ಟು 15 ಅಂಕಗಳನ್ನು ಪಡೆದು ಪಂಜಾಬ್ ಪಡೆ ಪ್ಲೇಆಫ್ನತ್ತ ಲಗ್ಗೆಯಿಟ್ಟಿದೆ. ಇನ್ನು 2014ರ ಬಳಿಕ ಪಂಜಾಬ್ ಕಿಂಗ್ಸ್ ಪಾಲಿಗೆ ಮರೀಚಿಕೆಯಾಗಿರುವ ಪ್ಲೇಆಫ್ ಸುತ್ತಿಗೇರಲು ಇನ್ನೂ 3 ಪಂದ್ಯಗಳಿವೆ. ಈ ಮ್ಯಾಚ್ಗಳಲ್ಲಿ 2 ಜಯ ಸಾಧಿಸಿದರೆ ಶ್ರೇಯಸ್ ಅಯ್ಯರ್ ಪಡೆ ಪ್ಲೇಆಫ್ ಆಡುವುದು ಬಹುತೇಕ ಖಚಿತವಾಗಲಿದೆ. ಅದರಂತೆ 11 ವರ್ಷಗಳ ಬಳಿಕ ಪಂಜಾಬ್ ಕಿಂಗ್ಸ್ ತಂಡವು ಪ್ಲೇಆಫ್ನಲ್ಲಿ ಕಾಣಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಅಂದಹಾಗೆ ಪಂಜಾಬ್ ಕಿಂಗ್ಸ್ ತಂಡದ ಮುಂದಿನ ಎದುರಾಳಿಗಳೆಂದರೆ… ಡೆಲ್ಲಿ ಕ್ಯಾಪಿಟಲ್ಸ್ (ಮೇ.8), ಮುಂಬೈ ಇಂಡಿಯನ್ಸ್ (ಮೇ.11) ಹಾಗೂ ರಾಜಸ್ಥಾನ್ ರಾಯಲ್ಸ್ (ಮೇ.16). ಈ ಮೂರು ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡ ಜಯ ಸಾಧಿಸಿದರೆ ಒಟ್ಟು 21 ಅಂಕಗಳೊಂದಿಗೆ ಪ್ಲೇಆಫ್ಗೇರಲಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಸ್ಟಾರ್ ಅಥ್ಲೀಟ್ ಮೊದಲಿಂದಲೂ RCB ಅಭಿಮಾನಿ….

ವಿಶ್ವದ ಅತಿ ವೇಗದ ಅಥ್ಲೀಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿ ಬಳಗಕ್ಕೆ ಸೇರಿದ್ದಾರೆ. RCB ಜೆರ್ಸಿ ಧರಿಸಿ ಫೋಟೋ ಪೋಸ್ಟ್ ಮಾಡಿ, ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ವಿಶ್ವಾದ್ಯಂತ ಇರುವ RCB ಫ್ಯಾನ್ಸ್ ಸಂತಸಗೊಂಡಿದ್ದು, ಫ್ರಾಂಚೈಸಿಯ ಜನಪ್ರಿಯತೆ ಮತ್ತಷ್ಟು ಹೆಚ್ಚಿಸಿದೆ. ಕೇವಲ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು