ಈ ಬಾರಿ ಅದ್ದೂರಿಯಾಗಿ ವಿಜೃಂಭಣೆಯಿಂದ ನಾಡಹಬ್ಬ ದಸರಾ ಆಚರಣೆ ಮಾಡಲಾಗುವುದು : ಸಚಿವ ಹೆಚ್. ಸಿ. ಮಹದೇವಪ್ಪ

ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರಾಜ್ಯದ ಜನರು ಖುಷಿಯಿಂದ ಇದ್ದಾರೆ. ಆದ್ದರಿಂದ ವಿಶ್ವವಿಖ್ಯಾತ ನಾಡ ಹಬ್ಬ ದಸರಾ ವನ್ನು ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ದಸರಾ ಆಚರಣೆ ಕುರಿತ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೊನ್ನೆ ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಹೈ ಪವರ್ ಕಮಿಟಿ ಸಭೆ ನಡೆಯಿತು. ಈ ಸಭೆಯಲ್ಲಿ ದಸರಾ ಆಚರಣೆಗೆ ಅನುದಾನ, ಅನುದಾನ ಬಳಕೆಗೆ 4ಜಿ ವಿನಾಯಿತಿ ನೀಡುವ ಬಗ್ಗೆ ಹಾಗೂ ದಸರಾ ಉದ್ಘಾಟಕರ ಆಯ್ಕೆ ಬಗ್ಗೆ ಚರ್ಚಿಸಲಾಗಿದೆ. ದಸರಾ ಆಚರಣೆಗೆ ಹೆಚ್ಚಿನ ಪ್ರಾಯೋಜಕತ್ವ ಪಡೆಯಲು ಅಧಿಕಾರಿಗಳು ಮುಂದಾಗಬೇಕು. ಅಕ್ಟೋಬರ್ 03 ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45 ಗಂಟೆಯೊಳಗೆ ದಸರಾ ಉದ್ಘಾಟನೆ ಮಾಡಲಾಗುವುದು ಎಂದರು.

ಈ ಬಾರಿ ದಸರಾ ಆಚರಣೆಗೆ 40 ಕೋಟಿ ವರೆಗೂ ಅನುದಾನ ಬಳಕೆಗೆ ಅವಕಾಶ ಕಲ್ಪಿಸಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಮೈಸೂರು ನಗರದ ಎಲ್ಲಾ ರಸ್ತೆಗಳನ್ನು ಪರಿಶೀಲಿಸಿ ಗುಂಡಿ ಮುಚ್ಚಿ, ಮರು ಡಾಂಬರೀಕರಣ ಮಾಡಲಾಗುವುದು ಎಂದರು.

ದಸರಾ ಆಚರಣೆಯಲ್ಲಿ ಅಧಿಕಾರಿಗಳು ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ಆಹಾರ ಮೇಳವನ್ನು ಸ್ಕೌಟ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಪ್ಯಾಲೇಸ್ ಆವರಣದಲ್ಲಿ ಆಯೋಜಿಸಬೇಕು ಎಂದರು.

ಸ್ತಬ್ಧ ಚಿತ್ರಗಳ ಲ್ಲಿ ಕರ್ನಾಟಕ ಸರ್ಕಾರದ 5 ಗ್ಯಾರೆಂಟಿಗಳ ಕುರಿತ ಸ್ತಬ್ಧ ಚಿತ್ರಗಳು ಇರಬೇಕು. ಜೊತೆಗೆ ಸರ್ಕಾರದ ಒಂದು ವರ್ಷದ ಸಾಧನೆ ಕುರಿತ ಸ್ತಬ್ಧ ಚಿತ್ರ ಇರಬೇಕು. ದೀಪಾಲಂಕಾರ 21 ದಿನಗಳ ಕಾಲ ಇರಬೇಕು. ದೀಪಾಲಂಕಾರ ದಸರಾ ಆಚರಣೆ ಯ ಮೇರುಗನ್ನು ಹೆಚ್ಚಿಸುತ್ತದೆ. ದೀಪಾಲಂಕಾರವನ್ನು ದಸರಾ ಮಹೋತ್ಸವದಲ್ಲಿ ಪ್ರಮುಖ ವೃತ್ತಗಳಲ್ಲಿ ಮಾಡುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.

ಯುವ ಸಂಭ್ರಮ ಹಾಗೂ ಯುವ ದಸರಾ ಕಾರ್ಯಕ್ರಮಗಳಿಗೆ ಕಳೆದ ಎರಡು ವರ್ಷಗಳಲ್ಲಿನ ಕಾರ್ಯಕ್ರಮಗಳು ಹಾಗೂ ಕಲಾವಿದರೂ ಪುನರಾವರ್ತನೆಯಾಗದಂತೆ ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಚಿವರು ತಿಳಿಸಿದರು.

ಚಿಣ್ಣರ ದಸರಾ, ಮಹಿಳಾ ದಸರಾ ಹಾಗೂ ರೈತ ದಸರ ಕಾರ್ಯಕ್ರಮ ಅರ್ಥ ಪೂರ್ಣವಾಗಿ ನಡೆಸಬೇಕು. ಸ್ವತಂತ್ರ ದೇಶಾಭಿಮಾನದ ಸಂದೇಶಗಳನ್ನು ಸಾರುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು. ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಕಾರ್ಯಕ್ರಮಗಳನ್ನು ಮಾಡಲಾಗುವುದು ಎಂದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!