ಆಪರೇಷನ್ ಸಿಂಧೂರ ಒಂದೊಳ್ಳೆ ರೋಚಕ ಕಥೆ ಎಂದ ನಿರ್ದೇಶಕ ….

ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಮಂದಿ ಭಾರತೀಯರು ಉಗ್ರರ ದಾಳಿಗೆ ಕೊನೆಯುಸಿರೆಳೆದಿದ್ದರು. ಇಂದು ಭಾರತ, ಪಾಕಿಸ್ತಾನಿಯರಿಗೆ ತಕ್ಕ ಪಾಠ ಕಲಿಸಿದೆ ಎಂದು ಹೇಳಬಹುದು.ಇದರ ಬೆನ್ನಲ್ಲೇ ಈ ವಿಷಯಕ್ಕೆ ಸಂಬಂಧಿಸಿದಂತೆ ಕನ್ನಡದಲ್ಲಿ ಸಿನಿಮವಾಗುವ ಚರ್ಚೆಯಾಗುತ್ತಿದೆ.
ಪಾಕಿಸ್ತಾನದಲ್ಲಿ ಅಡಗಿದ್ದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ. ಜಸ್ಟ್ 23 ನಿಮಿಷದಲ್ಲಿ ಪಾಕಿಸ್ತಾನದ 9 ಉಗ್ರರ ನೆಲೆಗಳನ್ನು ಏಕಕಾಲಕ್ಕೆ ಧ್ವಂಸ ಮಾಡಿರೋ ಕಾರ್ಯಾಚರಣೆ ಮೈ ಜುಮ್ಮೆನ್ನುವಂತೆ ಮಾಡಿದೆ. ಭಾರತೀಯ ಸೇನೆಯ ಈ ಯಶಸ್ವಿ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ ಅನ್ನೋ ಹೆಸರಿಟ್ಟಿರೋದೇ ವಿಶೇಷವಾಗಿದೆ.ಆಪರೇಷನ್ ಸಿಂಧೂರ ಪಹಲ್ಗಾಮ್‌ನಲ್ಲಿ ಸಿಂಧೂರ ಅಳಿಸಿದ ಉಗ್ರರ ಸಂಹಾರದ ಪ್ರತೀಕವಾಗಿದೆ. ಕಣ್ಣ ಮುಂದೆಯೇ ಗಂಡನನ್ನು ಕಳೆದುಕೊಂಡ ಮಹಿಳೆಯರಿಗೆ ನ್ಯಾಯ ನೀಡುವ ಭಾರತದ ಹೋರಾಟವಾಗಿದೆ. ಭಯೋತ್ಪಾದಕರ ಬುಡಕ್ಕೆ ಬೆಂಕಿ ಇಟ್ಟಿರುವ ಅಪರೇಷನ್ ಸಿಂಧೂರ ಭಾರತದ ಇತಿಹಾಸದಲ್ಲಿ ಅಚ್ಚಳಿಯದೇ ಉಳಿಯೋದರಲ್ಲೂ ಅನುಮಾನವೇ ಇಲ್ಲ.

ಆಪರೇಷನ್ ಸಿಂಧೂರದ ಬಗ್ಗೆ ಎಲ್ಲೆಲ್ಲೂ ಚರ್ಚೆಯಾಗುತ್ತಿರುವಾಗಲೇ ಆಪರೇಷನ್ ಸಿಂಧೂರ ಸಿನಿಮಾ ಆಗುತ್ತಾ ಅನ್ನೋದು ಕುತೂಹಲ ಕೆರಳಿಸಿದೆ. ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಎ.ಎಂ.ಆರ್ ರಮೇಶ್‌ ಅವರು ಈ ಬಗ್ಗೆ ಮಾತನಾಡಿ ಇದು ಒಂದೊಳ್ಳೆ ರೋಚಕ ಕಥೆ ಅನ್ನೋದ್ರಲ್ಲಿ ಅನುಮಾನವೇ ಇಲ್ಲ ಎಂದಿದ್ದಾರೆ.ಸೈನೈಡ್, ಅಟ್ಟಹಾಸ ಅನ್ನೋ ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಎ.ಎಂ.ಆರ್ ರಮೇಶ್ ಅವರು ಮಾತನಾಡಿ ಇಂದು ನಿಜಕ್ಕೂ ರೋಮಾಂಚನವಾಗುತ್ತಿದೆ. ಭಯೋತ್ಪಾದಕರು ಸತ್ತಿದ್ರೆ, ನಿಜಕ್ಕೂ ಖುಷಿಯ ವಿಚಾರ. ಇಂತಹದೊಂದು ಪ್ರತೀಕಾರದ ದಾಳಿಯನ್ನ ನಾವು ಎದುರು ನೋಡುತ್ತಾ ಇದ್ವಿ. ಉಗ್ರರಿಗೆ ಭಾರತೀಯ ಸೇನೆ ತಕ್ಕದಾದ ಉತ್ತರ ಕೊಟ್ಟಿದೆ ಎಂದಿದ್ದಾರೆ.

ಆಪರೇಷನ್ ಸಿಂಧೂರ ಹೆಸರಲ್ಲೇ ಒಂದು ಎಮೋಷನ್ ಇದೆ. ಸಿನಿಮಾ ಮಾಡೋಕೆ ನಿಜಕ್ಕೂ ಒಂದೊಳ್ಳೆ ಘಟನೆ ಇದು‌. ಈ ಸ್ಕ್ರೈಕ್ ಹಿಂದಿನ ಕಥೆ ಹಿಡಿದ್ರೆ ಒಂದೊಳ್ಳೆ ರೋಚಕ ಕಥೆ ಆಗುತ್ತೆ. ಯಾರಾದ್ರೂ ಈ ಸಿನಿಮಾ ಮಾಡೋರಿಗೆ ಒಳ್ಳೆಯದಾಗಲಿ. ಈಗಾಗಲೇ ಬಹುಶಃ ಯಾರಾದರೂ ಟೈಟಲ್ ರಿಜಿಸ್ಟರ್ ಮಾಡಿಸಿದ್ರೂ ಮಾಡಿಸಿರುತ್ತಾರೆ ಎಂದು ಎ.ಎಂ.ಆರ್ ರಮೇಶ್ ಹೇಳಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!