ಮಗಳನ್ನು ಕೊ*ದ ವ್ಯಕ್ತಿಯ ತಂದೆಯನ್ನು ಕೊ*ದ; ಮಗಳ ತಂದೆ!!

ಮಗಳ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲು ಹ* ಮಾಡಿದ್ದ ಆರೋಪಿಯ ತಂದೆಯನ್ನು ಆಕೆಯ ತಂದೆ ಬರ್ಬರವಾಗಿ ಕೊ* ಮಾಡಿರುವ ಘಟನೆ ಮಂಡ್ಯಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ನಡೆದಿದೆ. ಇದೇ ಗ್ರಾಮದ ನರಸಿಂಹೇಗೌಡ ಕೊ* ಮಾಡಿದ ವ್ಯಕ್ತಿ. ಅದೇ ಗ್ರಾಮದ ವೆಂಕಟೇಶ್ ಕೊ* ಆರೋಪಿ.ನರಸಿಂಹೇಗೌಡ ಅವರ ಪುತ್ರ ನಿತೀಶ್, ವೆಂಕಟೇಶ್ ಅವರ ಪುತ್ರಿ ದೀಪಿಕಾಳನ್ನು ಕೊ* ಮಾಡಿದ್ದ. ಮಗಳ ಸಾವಿಗೆ ಪ್ರತೀಕಾರವಾಗಿ ಆಕೆಯ ತಂದೆ ವೆಂಕಟೇಶ್ ಆರೋಪಿ ನಿತೀಶ್ನ ತಂದೆಯನ್ನು ಹ* ಮಾಡಿದ್ದಾನೆ. ಇದು ತಂದೆಯ ಆಕ್ರೋಶವನ್ನು ವ್ಯಕ್ತಪಡಿಸುತ್ತದೆ.

ಟೀಚರ್ ದೀಪಿಕಾ ಮತ್ತು ನಿತೀಶ್ ಇಬ್ಬರು ಸ್ನೇಹ ಹಾಗೂ ಸಲುಗೆಯಿಂದಿದ್ದರು. ಇದನ್ನು ಗಮನಿಸಿದ ದೀಪಿಕಾ ಗಂಡ ಹಾಗೂ ಕುಟುಂಬಸ್ಥರು ನಿತೀಶ್‌ಗೆ ಎಚ್ಚರಿಕೆ ನೀಡಿದ್ದರು. ಈ ಬಗ್ಗೆ ದೀಪಿಕಾ ಬಳಿ ಪ್ರಶ್ನಿಸಿದಾಗ ಆತ ನನಗೆ ತಮ್ಮ ಇದ್ದಂತೆ ಎಂದು ಹೇಳಿದ್ದಳು. ಕುಟುಂಬಸ್ಥರ ಎಚ್ಚರಿಕೆಯ ಬಳಿಕ ಇಬ್ಬರು ಅಂತರ ಕಾಯ್ದುಕೊಂಡಿದ್ದರು.ದೀಪಿಕಾ ಜೊತೆ ಒಡನಾಟವಿಲ್ಲದೇ ನಿತೀಶ್ ಕೋಪಗೊಂಡಿದ್ದ. ಬಳಿಕ 2024 ಜ. 22ರಂದು ನಿತೀಶ್ ಬರ್ತ್ಡೇ ನೆಪದಲ್ಲಿ ದೀಪಿಕಾಳನ್ನು ಬೆಟ್ಟದ ತಪ್ಪಲಿಗೆ ಕರೆಸಿಕೊಂಡಿದ್ದ. ದೀಪಿಕಾ ಆತನಿಗೆ ಶರ್ಟ್ ಗಿಫ್ಟ್ ಕೊಡಲು ಹೋಗಿದ್ದಳು. ಈ ವೇಳೆ ಇಬ್ಬರ ನಡುವೆ ಜಗಳ ಆರಂಭವಾಗಿ, ಕೊ*ಯಲ್ಲಿ ಅಂತ್ಯವಾಗಿತ್ತು. ಮಂಡ್ಯ ಪೊಲೀಸರು ಕೊ* ಆರೋಪಿ ನಿತೀಶ್‌ನನ್ನು ಬಂಧಿಸಿದ್ದರು.

ಜೈಲು ಸೇರಿದ್ದ ನಿತೀಶ್ ಜಾಮೀನಿನ ಮೇಲೆ ಹೊರ ಬಂದಿದ್ದ. ತನ್ನ ಮಗಳನ್ನು ಕೊ* ಮಾಡಿದ್ದ ನಿತೀಶ್‌ನನ್ನು ಹೇಗಾದರೂ ಮಾಡಿ ಕೊ* ಮಾಡಬೇಕೆಂದು ದೀಪಿಕಾ ತಂದೆ ವೆಂಕಟೇಶ್ ಹೊಂಚು ಹಾಕುತ್ತಿದ್ದ. ಇದೇ ಭಾನುವಾರ ಧರ್ಮಸ್ಥಳದಲ್ಲಿ ನಿತೀಶ್ ತಂಗಿ ಮದುವೆ ನಿಶ್ಚಯವಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ವೆಂಕಟೇಶ್ ನಿತೀಶ್ ತಂದೆ ನರಸಿಂಹೇಗೌಡರನ್ನ ಚಾಕುವಿನಿಂದ ಇರಿದು ಕೊ* ಮಾಡಿದ್ದಾನೆ. ಕೊ* ಮಾಡುವ ವೇಳೆ ನನ್ನ ಮಗಳನ್ನು ಕೊ* ಮಾಡಿ ನಿನ್ನ ಮಗಳ ಮದುವೆ ಮಾಡ್ತಾ ಇದ್ದೀರಾ ಎಂದು ಭೀಕರವಾಗಿ ಹ* ಮಾಡಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಮೇಲುಕೋಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕೊ* ಆರೋಪಿ ವೆಂಕಟೇಶ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!