ಆಪರೇಷನ್ ಸಿಂಧೂರ್ ಬಳಿಕ, ಸಿಂಧೂರದ ಅರ್ಥ ಹುಡುಕಿದ ಪಾಕಿಸ್ಥಾನಿಯರು!!!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್ ಕಣಿವೆಯಲ್ಲಿ ನಡೆದ ಉಗ್ರರ ದಾಳಿ ಬಳಿಕ ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುವ ನಿಟ್ಟಿನಲ್ಲಿ ಭಾರತದ ಸೇನೆಯ ಆಪರೇಷನ್ ಸಿಂಧೂರ್ ನಡೆಸಿ, ಒಟ್ಟು 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಹೌದು, ಭಾರತವು ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಂತೆ ಪಾಕಿಸ್ತಾನಿಯರು ಗೂಗಲ್ ನಲ್ಲಿ ಈ ಬಗ್ಗೆ ಹೆಚ್ಚು ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಹಾಗಾದ್ರೆ ಪಾಕಿಸ್ತಾನಿಯರು ಗೂಗಲ್ ನಲ್ಲಿ ಹುಡುಕಾಟ ನಡೆಸಿದ್ದು ಏನು? ಗೂಗಲ್ ನಲ್ಲಿ ಟ್ರೆಂಡ್ ಆಗುತ್ತಿರುವುದೇನು? ಎನ್ನುವ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯೂ ಆಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ನಡೆಸಿ ತಿರುಗೇಟು ನೀಡಿದೆ. ಹೌದು, ಮಂಗಳವಾರ ತಡರಾತ್ರಿ 1.30 ರ ಸುಮಾರಿಗೆ ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕ್ಷಿಪಣಿ ದಾಳಿ ನಡೆಸಿದ್ದು, ತಮ್ಮವರನ್ನು ಕೊ*ದ ಪಾಕ್ ಉಗ್ರರಿಗೆ ಸರಿಯಾದ ಉತ್ತರ ನೀಡಿದೆ. ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕ್ಷಿಪಣಿ ದಾಳಿ ನಡೆಸಿದ್ದು, ಪಾಕ್‌ ಜನತೆಯೂ ಈ ದಾಳಿಯಿಂದ ಬೆಚ್ಚಿ ಬಿದ್ದಿದ್ದು ಸದ್ಯಕ್ಕಂತೂ ಪಾಕಿಸ್ತಾನಿಯರು ಗೂಗಲ್ ನಲ್ಲಿ ಸಿಂಧೂರ ಹೆಸರಿನ ಅರ್ಥವೇನು ಎನ್ನುವ ಬಗ್ಗೆ ಹುಡುಕಾಟ ನಡೆಸಿದ್ದಾರೆ.

ಹೌದು, ಪಾಕಿಸ್ತಾನಿಯರು ಗೂಗಲ್ ನಲ್ಲಿ ಆಪರೇಷನ್ ಸಿಂಧೂರ್, ಆಪರೇಷನ್ ಸಿಂಧೂರ್ ವಿಕಿ, ಇಂಡಿಯಾ ಆಪರೇಷನ್ ಸಿಂಧೂರ್, ಸಿಂಧೂರ್ ಅಟ್ಯಾಕ್, ಭಾರತದ ಕ್ಷಿಪಣಿ ದಾಳಿ, ಆಪರೇಷನ್ ಸಿಂಧೂರ್ ಎಂದರೇನು? ಬಿಳಿಧ್ವಜ, ಪಾಕಿಸ್ತಾನದ ಮೇಲೆ ಭಾರತದ ದಾಳಿ, ವಾಯುದಾಳಿ, ಭಾರತೀಯ ಸೇನೆ ಈ ಕೆಲವು ವಿಷಯಗಳ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಗೂಗಲ್ ನಲ್ಲಿ ಹುಡುಕಾಟ ನಡೆಸಿದ್ದಾರೆ.ಅದಲ್ಲದೆ, ಈ ಪಾಕ್ ಪ್ರಜೆಗಳು ʻಸಿಂಧೂರ ಎಂದರೇನು ಎನ್ನುವ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡು ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಉಳಿದಂತೆ ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪ್ರತೀಕಾರ ತೀರಿಸಿಕೊಂಡಿದ್ದು, ಪಾಕಿಸ್ತಾನ ಸೇನೆಯ ಕಾರ್ಯಾಚರಣೆಯ ಬಗ್ಗೆ ಹುಡುಕಾಟ ನಡೆಸಿರುವುದು ಗೂಗಲ್ ಟ್ರೆಂಡ್ ನಲ್ಲಿ ತಿಳಿದು ಬಂದಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!