ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ರಾತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಜೊತೆ ಸುಧೀರ್ಘ ಸಮಾಲೋಚನೆ ನಡೆಸಿದ್ದರು. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಚರ್ಚಿಸಿದ್ದರು. ಮುಂದಿನ ಕಾನೂನು ಹೋರಾಟದ ಕುರಿತು ಪೊನ್ನಣ್ಣ ಜೊತೆ ಮಾತನಾಡಿದ್ದರು. ಇದೀಗ ಕಾನೂನು ಹೋರಾಟಕ್ಕೆ ಅವರು ಮುಂದಾಗಿದ್ದಾರೆ.

ಈ ಸಂಬಂಧ ರಾಜಭವನಕ್ಕೆ ಬರುವಂತೆ ದೂರುದಾರರಾದ ಟಿ.ಜೆ ಅಬ್ರಾಹಂ ಮತ್ತು ಸ್ನೇಹಮಯಿ ಕೃಷ್ಣ ಅವರಿಗೆ ಬುಲಾವ್ ನೀಡಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ದೂರುಆರ ಟಿಜೆ ಅಬ್ರಾಹಂ, ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿರುವುದು ಒಳ್ಳೆಯದು. ರಾಜಭವನ ಕಚೇರಿಯಿಂದ ನನಗೆ ದೂರವಾಣಿ ಕರೆ ಬಂದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದೇನೆ. ಹೀಗಾಗಿ ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ಹಾಜರಾಗುತ್ತೇನೆ. ಯಾವುದೇ ದಾಖಲೆಗಳನ್ನ ತೆಗೆದುಕಂಡು ಬರುವುದಕ್ಕೆ ಹೇಳಿಲ್ಲ ಎಂದರು.





