ದೇಗುಲದ ಪುನರ್ ಪ್ರತಿಷ್ಠಾಪನೆ ವೇಳೆ ದಾಂಧಲೆ ಮಾಡಿದ ಕಾಡಾನೆ.

ಬೇಲೂರು : ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ನಿನ್ನೆ ಮುಂಜಾನೆಯಿಂದ ಆರಂಭವಾದ ಕೋಟೆದ ಬಬ್ಬುಸ್ವಾಮಿ, ಚಾಮುಂಡೇಶ್ವರಿ ಹಾಗು ಪರಿವಾರ ದೈವಗಳ ದೈವಸ್ಥಾನ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ವಿಜೃಂಭಣೆಯ ಚಾಲನೆ ದೊರೆತಿದ್ದು, ರಾತ್ರಿ ಸುಮಾರು 9.30ರ ಸಮಯದಲ್ಲಿ ಕಳೆದ ಮೂರ್ನಾಲ್ಕು ತಿಂಗಳಿಂದ ಕಣ್ಮರೆಯಾಗಿದ್ದ ಮೂರ್ನಾಲ್ಕು ಕಾಡನೆಗಳು ಏಕಾಏಕಿ ಪ್ರತ್ಯಕ್ಷವಾಗಿದ್ದು ಭಕ್ತ ಸಮೂಹ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಕಾಡನೆಗಳನ್ನು ನೋಡಲು ಮುಗಿಬಿದ್ದ ಸನ್ನಿವೇಶ ನಿರ್ಮಾಣವಾಗಿತ್ತು.

 

Belur

 

 

 

 

 

 

ಭಕ್ತ ಸಮೂಹ ಕಾಡಾನೆಗಳನ್ನು ನೋಡಲು ಮುಗಿಬೀಳು ತ್ತಿದ್ದಂತೆ ರೊಚ್ಚಿಗೆದ್ದ ಕಾಡಾನೆಗಳು ಘೀಳಿಡುತ್ತಾ ರಸ್ತೆಯ ಬದಿಯಲ್ಲಿ ಸುತ್ತುವರೆಯುತ್ತಿತ್ತು, ಇದಾದ ಬಳಿಕ ದೇಗುಲದ ಆಡಳಿತ ಮಂಡಳಿ ಭಕ್ತರನ್ನು ನಿಯಂತ್ರಿಸಿ ಕೊಳ್ಳಲು ಪಟಾಕಿ ಸಿಡಿಸಿದರು.

 

ನಂತರ ಮಾಹಿತಿ ಪಡೆದ ಅರಣ್ಯ ಇಲಾಖೆ ಹಾಗು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಭಕ್ತ ಸಮೂಹವನ್ನು ನಿಯಂತ್ರಿಸಿಕೊಳ್ಳಲು ಹರಸಾಹಸ ಪಟ್ಟು ಕಾಡಾನೆಗಳಿಗೆ ರಸ್ತೆ ದಾಟಲು ಅವಕಾಶ ಕಲ್ಪಿಸಿದರು. ದೇಗುಲದಲ್ಲಿ ನೆರೆದಿದ್ದ ಭಕ್ತರ ಕಿರುಚಾಟಕ್ಕೆ ರೊಚ್ಚಿಗೆದ್ದ ಒಂಟಿ ಕಾಡಾನೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು ಹಾಗೂ ಬೈಕ್ ಗಳ ಮೇಲೆ ದಾಳಿಮಾಡಿರುವ ದೃಶ್ಯ ಇದೀಗ ಮೋಬೈಲ್ ನಲ್ಲಿ ಸೆರೆಯಾಗಿದೆ.ತನ್ನ ಪಾಡಿಗೆ ರಸ್ತೆ ದಾಟುತ್ತಿದ್ದ ಕಾಡನೆಗಳಿಗೆ ಅಡಚಣೆ ಮಾಡಿದ್ದೆ ಇಷ್ಟೆಲ್ಲಾ ಅನಾಹುತಗಳಿಗೆ ಕಾರಣವೆಂದು ಹಲವರು ತಿಳಿಸಿದ್ದಾರೆ.

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು