ದೇಗುಲದ ಪುನರ್ ಪ್ರತಿಷ್ಠಾಪನೆ ವೇಳೆ ದಾಂಧಲೆ ಮಾಡಿದ ಕಾಡಾನೆ.

ಬೇಲೂರು : ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ನಿನ್ನೆ ಮುಂಜಾನೆಯಿಂದ ಆರಂಭವಾದ ಕೋಟೆದ ಬಬ್ಬುಸ್ವಾಮಿ, ಚಾಮುಂಡೇಶ್ವರಿ ಹಾಗು ಪರಿವಾರ ದೈವಗಳ ದೈವಸ್ಥಾನ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ವಿಜೃಂಭಣೆಯ ಚಾಲನೆ ದೊರೆತಿದ್ದು, ರಾತ್ರಿ ಸುಮಾರು 9.30ರ ಸಮಯದಲ್ಲಿ ಕಳೆದ ಮೂರ್ನಾಲ್ಕು ತಿಂಗಳಿಂದ ಕಣ್ಮರೆಯಾಗಿದ್ದ ಮೂರ್ನಾಲ್ಕು ಕಾಡನೆಗಳು ಏಕಾಏಕಿ ಪ್ರತ್ಯಕ್ಷವಾಗಿದ್ದು ಭಕ್ತ ಸಮೂಹ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಕಾಡನೆಗಳನ್ನು ನೋಡಲು ಮುಗಿಬಿದ್ದ ಸನ್ನಿವೇಶ ನಿರ್ಮಾಣವಾಗಿತ್ತು.

 

Belur

 

 

 

 

 

 

ಭಕ್ತ ಸಮೂಹ ಕಾಡಾನೆಗಳನ್ನು ನೋಡಲು ಮುಗಿಬೀಳು ತ್ತಿದ್ದಂತೆ ರೊಚ್ಚಿಗೆದ್ದ ಕಾಡಾನೆಗಳು ಘೀಳಿಡುತ್ತಾ ರಸ್ತೆಯ ಬದಿಯಲ್ಲಿ ಸುತ್ತುವರೆಯುತ್ತಿತ್ತು, ಇದಾದ ಬಳಿಕ ದೇಗುಲದ ಆಡಳಿತ ಮಂಡಳಿ ಭಕ್ತರನ್ನು ನಿಯಂತ್ರಿಸಿ ಕೊಳ್ಳಲು ಪಟಾಕಿ ಸಿಡಿಸಿದರು.

 

ನಂತರ ಮಾಹಿತಿ ಪಡೆದ ಅರಣ್ಯ ಇಲಾಖೆ ಹಾಗು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಭಕ್ತ ಸಮೂಹವನ್ನು ನಿಯಂತ್ರಿಸಿಕೊಳ್ಳಲು ಹರಸಾಹಸ ಪಟ್ಟು ಕಾಡಾನೆಗಳಿಗೆ ರಸ್ತೆ ದಾಟಲು ಅವಕಾಶ ಕಲ್ಪಿಸಿದರು. ದೇಗುಲದಲ್ಲಿ ನೆರೆದಿದ್ದ ಭಕ್ತರ ಕಿರುಚಾಟಕ್ಕೆ ರೊಚ್ಚಿಗೆದ್ದ ಒಂಟಿ ಕಾಡಾನೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು ಹಾಗೂ ಬೈಕ್ ಗಳ ಮೇಲೆ ದಾಳಿಮಾಡಿರುವ ದೃಶ್ಯ ಇದೀಗ ಮೋಬೈಲ್ ನಲ್ಲಿ ಸೆರೆಯಾಗಿದೆ.ತನ್ನ ಪಾಡಿಗೆ ರಸ್ತೆ ದಾಟುತ್ತಿದ್ದ ಕಾಡನೆಗಳಿಗೆ ಅಡಚಣೆ ಮಾಡಿದ್ದೆ ಇಷ್ಟೆಲ್ಲಾ ಅನಾಹುತಗಳಿಗೆ ಕಾರಣವೆಂದು ಹಲವರು ತಿಳಿಸಿದ್ದಾರೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!