

Belur
ಭಕ್ತ ಸಮೂಹ ಕಾಡಾನೆಗಳನ್ನು ನೋಡಲು ಮುಗಿಬೀಳು ತ್ತಿದ್ದಂತೆ ರೊಚ್ಚಿಗೆದ್ದ ಕಾಡಾನೆಗಳು ಘೀಳಿಡುತ್ತಾ ರಸ್ತೆಯ ಬದಿಯಲ್ಲಿ ಸುತ್ತುವರೆಯುತ್ತಿತ್ತು, ಇದಾದ ಬಳಿಕ ದೇಗುಲದ ಆಡಳಿತ ಮಂಡಳಿ ಭಕ್ತರನ್ನು ನಿಯಂತ್ರಿಸಿ ಕೊಳ್ಳಲು ಪಟಾಕಿ ಸಿಡಿಸಿದರು.


ನಂತರ ಮಾಹಿತಿ ಪಡೆದ ಅರಣ್ಯ ಇಲಾಖೆ ಹಾಗು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಭಕ್ತ ಸಮೂಹವನ್ನು ನಿಯಂತ್ರಿಸಿಕೊಳ್ಳಲು ಹರಸಾಹಸ ಪಟ್ಟು ಕಾಡಾನೆಗಳಿಗೆ ರಸ್ತೆ ದಾಟಲು ಅವಕಾಶ ಕಲ್ಪಿಸಿದರು. ದೇಗುಲದಲ್ಲಿ ನೆರೆದಿದ್ದ ಭಕ್ತರ ಕಿರುಚಾಟಕ್ಕೆ ರೊಚ್ಚಿಗೆದ್ದ ಒಂಟಿ ಕಾಡಾನೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು ಹಾಗೂ ಬೈಕ್ ಗಳ ಮೇಲೆ ದಾಳಿಮಾಡಿರುವ ದೃಶ್ಯ ಇದೀಗ ಮೋಬೈಲ್ ನಲ್ಲಿ ಸೆರೆಯಾಗಿದೆ.ತನ್ನ ಪಾಡಿಗೆ ರಸ್ತೆ ದಾಟುತ್ತಿದ್ದ ಕಾಡನೆಗಳಿಗೆ ಅಡಚಣೆ ಮಾಡಿದ್ದೆ ಇಷ್ಟೆಲ್ಲಾ ಅನಾಹುತಗಳಿಗೆ ಕಾರಣವೆಂದು ಹಲವರು ತಿಳಿಸಿದ್ದಾರೆ.





